ಮೋದಿ ಹಾರಾಡಿದ್ದರಿಂದ ತೇಜಸ್ ಕೂಡ ಪತನವಾಗಬಹುದು: ಟಿಎಂಸಿ ನಾಯಕನ ಹೇಳಿಕೆ

Published : Nov 27, 2023, 10:15 AM IST
ಮೋದಿ ಹಾರಾಡಿದ್ದರಿಂದ ತೇಜಸ್ ಕೂಡ ಪತನವಾಗಬಹುದು: ಟಿಎಂಸಿ ನಾಯಕನ ಹೇಳಿಕೆ

ಸಾರಾಂಶ

ಮೋದಿ ಹಾರಾಡಿದ ತೇಜಸ್‌ ಯುದ್ಧ ವಿಮಾನ ಕೂಡ ಅಪಶಕುನ ತಾಗಿ ಪತನವಾಗುವ ಸಾಧ್ಯತೆ ಇದೆ ಎಂದು ಟಿಎಂಸಿ ನಾಯಕ ಶಾಂತನು ಸೇನ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಅವರು ಅಪಶಕುನ (ಪನೌತಿ) ಎಂಬ ವಿಪಕ್ಷ ನಾಯಕರ ಟೀಕೆಗಳು ಮುಂದುವರಿದಿದ್ದು, ಮೋದಿ ಹಾರಾಡಿದ ತೇಜಸ್‌ ಯುದ್ಧ ವಿಮಾನ ಕೂಡ ಅಪಶಕುನ ತಾಗಿ ಪತನವಾಗುವ ಸಾಧ್ಯತೆ ಇದೆ ಎಂದು ಟಿಎಂಸಿ ನಾಯಕ ಶಾಂತನು ಸೇನ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಭಾನುವಾರ ಮಾತನಾಡಿದ ಅವರು, ಪ್ರಧಾನಿಗೆ ಅಪಶಕುನ ತಾಗಿದೆ. ಅವರು ತೆರಳಿದ ಕಡೆಯೆಲ್ಲ ಅಪಜಯ ಉಂಟಾಗುತ್ತಿದೆ. ಅದೇ ರೀತಿ ಶನಿವಾರ ಬೆಂಗಳೂರಿನಲ್ಲಿ ತೇಜಸ್‌ ಯುದ್ಧ ವಿಮಾನದ ಪರೀಕ್ಷೆಗೆ ತೆರಳಿ ಅದರಲ್ಲಿ ಕೆಲ ಕಾಲ ಹಾರಾಡಿದ್ದಾರೆ. ಹಾಗಾಗಿ ಅವರಿಗೆ ತಾಗಿರುವ ಅಪಶಕುನದ ಫಲವಾಗಿ ತೇಜಸ್‌ ಯುದ್ಧ ವಿಮಾನವೂ ಕೂಡ ಸೇನಾ ಕಾರ್ಯಾಚರಣೆ ನಡೆಸುವಾಗ ಪತನವಾದರೂ ಅಚ್ಚರಿ ಪಡಬೇಕಿಲ್ಲ ಎಂದಿದ್ದಾರೆ.

ಇದಕ್ಕೆ ಬಿಜೆಪಿ ನಾಯಕರಾದ ಮಂಜಿಂದರ್ ಸಿಂಗ್‌ ಸಿರ್ಸಾ ಹಾಗೂ ಶಹಜಾದ್‌ ಪೂನಾವಾಲಾ ಕಿಡಿಕಾರಿದ್ದು, ತೇಜಸ್ ಪತನ ಆಗುತ್ತದೆ ಎಂದು ಸೇನ್‌ ಯಾವ ಆಧಾರದಲ್ಲಿ ಹೇಳಿದ್ದಾರೆ? ಕೂಡಲೇ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮೋದಿ ವೀಕ್ಷಿಸಿದ್ದರಿಂದಲೇ ಅಪಶಕುನವಾಗಿ (ಪನೌತಿ) ಭಾರತ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಸೋತಿತು ಎಂದು ಇತ್ತೀಚೆಗೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದ್ದರು. ಅದರ ಬಳಿಕ ಅಪಶಕುನದ ಚರ್ಚೆ ಆರಂಭವಾಗಿತ್ತು.

ಬೆಂಗಳೂರಲ್ಲಿ ನಮೋ: ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನಿ ಮೋದಿ ಹಾರಾಟ

ಬಾಲಿವುಡ್‌ ಕ್ವೀನ್‌ ಖಾತೆಗೆ ಮತ್ತೊಂದು ಫ್ಲಾಫ್‌ ಸಿನಿಮಾ: ಪ್ರೇಕ್ಷಕರಿಲ್ಲದೇ ತೇಜಸ್‌ನ ಹಲವು ಪ್ರದರ್ಶನಗಳು ರದ್ದು!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!