ಹೈದರಾಬಾದ್‌ ಹೆಸರು ಬದಲಿಸಿದ ತೇಜಸ್ವಿ ಸೂರ್ಯ,  ಭಾಗ್ಯನಗರ!

Published : Nov 24, 2020, 04:39 PM IST
ಹೈದರಾಬಾದ್‌ ಹೆಸರು ಬದಲಿಸಿದ ತೇಜಸ್ವಿ ಸೂರ್ಯ,  ಭಾಗ್ಯನಗರ!

ಸಾರಾಂಶ

ಹೆಸರು ಬದಲಾವಣೆ ಪರ್ವ/ ತೇಜಸ್ವಿ ಸೂರ್ಯ ಟ್ವೀಟ್ ಗೆ ವ್ಯಾಪಕ ಪ್ರತಿಕ್ರಿಯೆ/ #ItIsHyderabadNotBhagyanagar ಎಂಬ ಹ್ಯಾಷ್ ಟ್ಯಾಗ್ ಸಹ ಟ್ರೆಂಡ್/  ತೇಜಸ್ವಿ ಸೂರ್ಯ ಟ್ವೀಟ್ ಗೆ ಹಲವರ ವಿರೋಧ

ಬೆಂಗಳೂರು/ ಹೈದರಾಬಾದ್(ನ.  24)  ಪಶ್ಚಿಮ ಬಂಗಾಳದ ನಂತರ ಹೈದರಾಬಾದ್ ಗೆ ಭೇಟಿ ನೀಡಿದ್ದ ಬಿಜೆಪಿ ಯುವ ಮೋರ್ಚಾ ರಾಷ್ಟ್ರಾಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ  ಟ್ವಿಟರ್ ನಲ್ಲಿ ಟೀಕೆಗೆ ಗುರಿಯಾಗಿದ್ದಾರೆ.

ಹೈದರಾಬಾದ್ ನ್ನು ಭಾಗ್ಯನಗರ ಎಂದು ಕರೆದಿರುವುದು ಟೀಕೆಗೆ ಮೂಲ ಕಾರಣ. ಹೈದ್ರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ಸಂಬಂಧ ಪ್ರವಾಸ ಮಾಡಿದ್ದ ಸೂರ್ಯ ವಿವಿಧ ಕಡೆ ಸಭೆ ನಡೆಸಿದ್ದರು.   ಟ್ವೀಟ್ ಆರಂಭದಲ್ಲಿ ಭಾಗ್ಯನಗರ ಎಂದು ಕರೆದಿದ್ದಕ್ಕೆ ಟೀಕೆ ವ್ಯಕ್ತವಾಗಿದೆ.

'ಜಿನ್ನಾ ಮತ್ತೊಂದು ಅವತಾರ ಓವೈಸಿ'

ಹೈದರಾಬಾದ್ ಹೆಸರು ಬದಲಾಯಿಸುವ ಸೂರ್ಯ ಐಡಿಯಾ ಹಲವರ ತಿರಸ್ಕಾರಕ್ಕೆ ಗುರಿಯಾಗಿದೆ.  ಗೋ ಬ್ಯಾಕ್ ಎಂಬ ಘೊಷಣೆಗಳು ಮೊಳಗಿವೆ.

#ItIsHyderabadNotBhagyanagar ಎಂಬ ಹ್ಯಾಷ್ ಟ್ಯಾಗ್ ಸಹ ಟ್ರೆಂಡ್ ಆಗಿದೆ.  ಯೋಗಿ ಆದಿತ್ಯನಾಥ್ ಸಹ  2018  ರಲ್ಲಿ ಹೈದರಾವಾದ್ ನ್ನು ಭಾಗ್ಯನಗರ ಎಂದು ಬದಲಾಯಿಸಬೇಕು ಎಂದಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹಬೂಬಾ...ಹಾಡಿಗೆ ನೃತ್ಯದ ವೇಳೆ ಗೋವಾ ಪಬ್‌ ದುರಂತ!
₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ