ತೆಲಂಗಾಣ: ಕಾಂಗ್ರೆಸ್‌ ಭರ್ಜರಿ ‘ಗ್ಯಾರಂಟಿ’ ಪ್ರಣಾಳಿಕೆ; 6 ಗ್ಯಾರಂಟಿಗಳ ಜತೆಗೆ ಹಲವು ಭರವಸೆ!

Published : Nov 18, 2023, 08:13 AM IST
ತೆಲಂಗಾಣ: ಕಾಂಗ್ರೆಸ್‌ ಭರ್ಜರಿ ‘ಗ್ಯಾರಂಟಿ’ ಪ್ರಣಾಳಿಕೆ; 6 ಗ್ಯಾರಂಟಿಗಳ ಜತೆಗೆ ಹಲವು ಭರವಸೆ!

ಸಾರಾಂಶ

ಪ್ರಣಾಳಿಕೆಯು ನಮಗೆ ಗೀತಾ, ಕುರಾನ್ ಅಥವಾ ಬೈಬಲ್‌ನಂತಿದೆ. ನಾವು ಕರ್ನಾಟಕದಲ್ಲಿ ಈ ಭರವಸೆಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಇಲ್ಲೂ ಅವುಗಳನ್ನು ಈಗ ಜಾರಿಗೆ ತರಲಾಗುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. 

ಹೈದರಾಬಾದ್ (ನವೆಂಬರ್ 18, 2023): ಈಗಾಗಲೇ 6 ಗ್ಯಾರಂಟಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌ ಪಕ್ಷ, ಶುಕ್ರವಾರ ತೆಲಂಗಾಣ ಚುನಾವಣೆ ನಿಮಿತ್ತ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರಲ್ಲಿ ಈ ಹಿಂದೆ ಘೋಷಣೆ ಮಾಡಿದ್ದ 6 ಗ್ಯಾರಂಟಿಗಳು ಹಾಗೂ ಇತರ ಘೋಷಣೆಗಳಿವೆ. ‘ಅಭಯ ಹಸ್ತಂ’ ಎಂಬ 42 ಪುಟಗಳ ಪ್ರಣಾಳಿಕೆಯನ್ನು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.

ಏನೇ ಆಗಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂದು ಜನರು ಮನಸ್ಸು ಮಾಡಿದ್ದಾರೆ. ಪ್ರಣಾಳಿಕೆಯು ನಮಗೆ ಗೀತಾ, ಕುರಾನ್ ಅಥವಾ ಬೈಬಲ್‌ನಂತಿದೆ. ನಾವು ಕರ್ನಾಟಕದಲ್ಲಿ ಈ ಭರವಸೆಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಇಲ್ಲೂ ಅವುಗಳನ್ನು ಈಗ ಜಾರಿಗೆ ತರಲಾಗುತ್ತಿದೆ ಎಂದರು.

ಇದನ್ನು ಓದಿ: ಈ ರಾಜ್ಯದಲ್ಲಿ 450 ರೂ. ಗೆ ಸಿಗುತ್ತೆ ಗ್ಯಾಸ್‌ ಸಿಲಿಂಡರ್‌: ಬಿಜೆಪಿ ಘೋಷಣೆ

ಪ್ರಣಾಳಿಕೆಯಲ್ಲಿ ಏನಿದೆ?:
- ಮಹಾಲಕ್ಷ್ಮೀ ಯೋಜನೆ ಅಡಿ ಮಹಿಳೆಯರಿಗೆ ತಿಂಗಳಿಗೆ 2,500 ರೂ. ಆರ್ಥಿಕ ನೆರವು
- ಮಹಿಳೆಯರಿಗೆ 500 ರೂ.ಗೆ ಗ್ಯಾಸ್ ಸಿಲಿಂಡರ್
- ‘ಮಹಾಲಕ್ಷ್ಮೀ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್‌ ಪ್ರಯಾಣ
- ‘ಗೃಹ ಜ್ಯೋತಿ’ ಅಡಿಯಲ್ಲಿ ಎಲ್ಲ ಮನೆಗಳಿಗೆ 200 ಯೂನಿಟ್‌ ಉಚಿತ ವಿದ್ಯುತ್‌
- ಸ್ವಂತ ಮನೆ ಇಲ್ಲದ ಕುಟುಂಬಗಳಿಗೆ ವಸತಿ ನಿವೇಶನ
-‘ಇಂದಿರಮ್ಮ ಇಂಡ್ಲು’ ಯೋಜನೆಯಡಿ ಮನೆ ನಿರ್ಮಾಣಕ್ಕೆ ₹ 5 ಲಕ್ಷ ನೆರವು
- ‘ಯುವ ವಿಕಾಸಂ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ₹ 5 ಲಕ್ಷ ಸಹಾಯ
- ತೆಲಂಗಾಣ ಚಳವಳಿ ಹೋರಾಟಗಾರರಿಗೆ 250 ಚದರ ಗಜಗಳ (ಸ್ಕ್ವೇರ್‌ ಯಾರ್ಡ್‌) ವಸತಿ ನಿವೇಶನ

ಇದನ್ನೂ ಓದಿ: ಭಾರತದ ರೈಲ್ವೆ ಕೇಂದ್ರಬಿಂದುವಾಗಲಿದೆ ಈ ನಗರ: ಸಾವಿರಾರು ಕೋಟಿ ರೂ. ಯೋಜನೆ ಘೋಷಿಸಿದ ಅಶ್ವಿನಿ ವೈಷ್ಣವ್

- ರೈತ ಭರೋಸಾ ಅಡಿಯಲ್ಲಿ, ಪಕ್ಷವು ರೈತರಿಗೆ ಪ್ರತಿ ವರ್ಷ 5,000 ರೂ.
- ಭೂರಹಿತ ರೈತ ಕಾರ್ಮಿಕರಿಗೆ ವಾರ್ಷಿಕ 12,000 ರೂ. ನೆರವು
- ಸಾಮಾಜಿಕ, ಆರ್ಥಿಕ ಹಿಂದುಳಿದ ಮಹಿಳೆಯರಿಗೆ ಮಾಸಿಕ 4000 ರೂ. ಪಿಂಚಣಿ
- ಹಿರಿಯ ನಾಗರಿಕರು, ವಿಧವೆಯರು, ಅಂಗವಿಕಲರು, ಬೀಡಿ ಕಾರ್ಮಿಕರು, ಒಂಟಿ ಮಹಿಳೆಯರು, ಸೇಂದಿ ಇಳಿಸುವವರು, ನೇಕಾರರು, ಏಡ್ಸ್ ಮತ್ತು ಫೈಲೇರಿಯಾ ರೋಗಿಗಳು ಮತ್ತು ಡಯಾಲಿಸಿಸ್‌ಗೆ ಒಳಪಡುವ ಕಿಡ್ನಿ ರೋಗಿಗಳಿಗೆ ತಿಂಗಳಿಗೆ ₹ 4,000 ಪಿಂಚಣಿ ಹಾಗೂ 10 ಲಕ್ಷ ಆರೋಗ್ಯ ವಿಮಾ ರಕ್ಷಣೆ
- ರೈತರಿಗೆ 2 ಲಕ್ಷ ರೂ. ಬೆಳೆ ಸಾಲ ಮನ್ನಾ ಮತ್ತು ವಾರ್ಷಿಕ 3 ಲಕ್ಷ ರೂ.ವರೆಗೆ ಬಡ್ಡಿರಹಿತ ಬೆಳೆಸಾಲ
- ಯುವತಿಯರಿಗೆ ಮದುವೆಗೆ 1 ಲಕ್ಷ ರೂ. ನೆರವು, ‘ಇಂದಿರಮ್ಮ’ ಉಡುಗೊರೆಯಾಗಿ 10 ಗ್ರಾಂ ಚಿನ್ನ ಬಳಕೆಗೆ 24 ಗಂಟೆ ಉಚಿತ ವಿದ್ಯುತ್.
- 18 ವರ್ಷ ವಯಸ್ಸಿನ ಎಲ್ಲಾ ಓದುತ್ತಿರುವ ಹುಡುಗಿಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್.

ಇದನ್ನೂ ಓದಿ: ಛತ್ತೀಸ್‌ಗಢಕ್ಕೆ ಕಾಂಗ್ರೆಸ್‌ ಬಳಿಕ ‘ಮೋದಿ ಗ್ಯಾರಂಟಿ’: 500 ರೂ.ಗೆ ಸಿಲಿಂಡರ್; ಅಯೋಧ್ಯೆಗೆ ತೆರಳಲು ಭಕ್ತರಿಗೆ ನೆರವು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!