ತೆಲಂಗಾಣದಲ್ಲಿ ಹೂಡಿಕೆ ಕುರಿತು ಅದಾನಿ ಗ್ರೂಪ್‌ ಜೊತೆ ಸಿಎಂ ರೇವಂತ್‌ ರೆಡ್ಡಿ ಮಾತುಕತೆ!

Published : Jan 03, 2024, 03:59 PM IST
ತೆಲಂಗಾಣದಲ್ಲಿ ಹೂಡಿಕೆ ಕುರಿತು ಅದಾನಿ ಗ್ರೂಪ್‌ ಜೊತೆ ಸಿಎಂ ರೇವಂತ್‌ ರೆಡ್ಡಿ ಮಾತುಕತೆ!

ಸಾರಾಂಶ

ಒಂದೆಡೆ ಕಾಂಗ್ರೆಸ್‌ ಹಾಗೂ ಅದರ ಮೈತ್ರಿ ಪಕ್ಷಗಳು ಅದಾನಿ ಗ್ರೂಪ್‌ನ ಮೇಲೆ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದರೆ, ಇನ್ನೊಂದೆಡೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿರುವ ರಾಜ್ಯವಾದ ತೆಲಂಗಾಣ ಅದಾನಿ ಗ್ರೂಪ್‌ ಜೊತೆ ಹೂಡಿಕೆ ಮಾತುಕತೆ ನಡೆಸಿದೆ.  

ನವದೆಹಲಿ (ಜ.3): ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಪುತ್ರ ಮತ್ತು ಅದಾನಿ ಪೋರ್ಟ್ಸ್ ಮತ್ತು SEZ ಲಿಮಿಟೆಡ್‌ನ ಸಿಇಒ ಆಗಿರುವ ಕರಣ್ ಅದಾನಿ ಮತ್ತು ಅವರ ತಂಡವು ಜನವರಿ 3ರಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಕೈಗಾರಿಕಾ ಸಚಿವ ಡಿ ಶ್ರೀಧರ್ ಬಾಬು ಅವರನ್ನು ಭೇಟಿಯಾಗಿ ತೆಲಂಗಾಣದಲ್ಲಿನ ಸಂಭಾವ್ಯ ಹೂಡಿಕೆಯ ಬಗ್ಗೆ ಚರ್ಚೆ ಮಾಡಿದ್ದಾರೆ. ಒಂದೆಡೆ ಕಾಂಗ್ರೆಸ್‌ ಹಾಗೂ ಅದರ ಮಿತ್ರ ಪಕ್ಷಗಳು ಅದಾನಿ ಗ್ರೂಪ್‌ ಮೇಲೆ ನಿರಂತರವಾಗಿ ಟೀಕಾಪ್ರಹಾರ ನಡೆಸುತ್ತಿದ್ದರೆ, ಇನ್ನೊಂದೆಡೆ ಅದಾನಿ ಗ್ರೂಪ್‌ನಿಂದಲೇ ತಾನು ಅಧಿಕಾರ ವಹಿಸಿಕೊಂಡಿರುವ ರಾಜ್ಯದಲ್ಲಿ ಹೂಡಿಕೆಯ ಬಗ್ಗೆ ಚರ್ಚೆ ಮಾಡುತ್ತಿದೆ. ರಾಜ್ಯ ಸರ್ಕಾರ ಮತ್ತು ಅದಾನಿ ಗ್ರೂಪ್ ನಡುವಿನ ಸಭೆಯು ತೆಲಂಗಾಣದಲ್ಲಿ ಬಂಡವಾಳ ಹೂಡಿಕೆಯ ಸಂಭಾವ್ಯ ಕ್ಷೇತ್ರಗಳ ಸುತ್ತ ಸುತ್ತಿದೆ ಎಂದು ವರದಿಯಾಗಿದೆ.

ಮಹಬೂಬ್‌ನಗರದಲ್ಲಿ ಕಂಪನಿಯ ಗಿಗಾ ಕಾರಿಡಾರ್ ಯೋಜನೆ ಮತ್ತು ಶಂಶಾಬಾದ್‌ನಲ್ಲಿ ಆರ್ & ಡಿ ಹಬ್ ಕುರಿತು ಅಮಾರಾ ರಾಜಾ ಕಂನಿ ತಂಡದೊಂದಿಗೆ ಮುಖ್ಯಮಂತ್ರಿಗಳ ಸಭೆಯ ನಂತರ, ಅದಾನಿ ಗ್ರೂಪ್‌ನ ಜೊತೆ ಇವರು ಚರ್ಚೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು