
ಹೈದರಾಬಾದ್ [ಅ.24]: ಬುಡಕಟ್ಟು ಜನಾಂಗದರು ವಾಸವಿರುವ ಸ್ಥಳಗಳಿಗೆ ಭೇಟಿ ನೀಡಿ ಒಂದು ರಾತಿ ಕಳೆದುಬರಲು ತೆಲಂಗಾಣ ರಾಜ್ಯಪಾಲೆ ಮುಂದಾಗಿದ್ದಾರೆ.
ಈ ಮೂಲಕ ಬುಡಕಟ್ಟು ಜನರ ಮೂಲಭೂತ ಸಮಸ್ಯೆಗಳನ್ನು ಅರಿಯಲು ಸಾಧ್ಯ. ಅಲ್ಲದೆ, ಆ ಜನಾಂಗ ಸಾಮಾಜಿಕವಾಗಿ ಹೇಗೆ ಉಳಿದವರಿಂದ ಬೇರ್ಪಟ್ಟಿದೆ ಎನ್ನುವುದನ್ನು ತಿಳಿಯಲು ಸಾಧ್ಯವಾಗಲಿದೆ ಎಂದು ರಾಜ್ಯಪಾಲೆ ತಮಿಳಿಸಾಯ್ ಸುಂದರ್ರಾಜನ್ ಅಭಿಪ್ರಾಯಪಟ್ಟಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ಬುಡಕಟ್ಟು ಜನಾಂಗದ ಯುವಕರಲ್ಲಿ ಔಷಧೀಯ ಜ್ಞಾನ ಸಾಕಷ್ಟಿರುತ್ತದೆ. ಅವರಿಗೆ ಸೂಕ್ತ ರೀತಿಯ ವೈದ್ಯಕೀಯ ಶಿಕ್ಷಣದ ಅಗತ್ಯವಿದೆ ಎಂದು ಹೇಳಿದ ಅವರು ಮುಲುಗು ಜಲ್ಲೆಯಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಹೇಳಿದರು.
ಇದೇ ವೇಳೆ ತಾವು ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ಸ್ನೇಹಿತ ಜೊತೆ ಅಂಡಮಾನ್ ದ್ವೀಪಕ್ಕೆ ಭೇಟಿ ನೀಡಿ ವೈದ್ಯಕೀಯ ಸೇವೆ ಸಲ್ಲಿಸಿದ ದಿನಗಳನ್ನೂ ಮೆಲುಕುಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ