ಇರುವೆಗೆ ಹೆದರಿ ತೆಲಂಗಾಣ ಮಹಿಳೆ ಆತ್ಮ*ತ್ಯೆಗೆ ಶರಣು

Kannadaprabha News   | Kannada Prabha
Published : Nov 07, 2025, 04:44 AM IST
ant

ಸಾರಾಂಶ

ಬಾಲ್ಯದ ಆಘಾತಗಳು ಅಥವಾ ಇತರೆ ಕಾರಣಗಳಿಂದಾಗಿ ಬಹುತೇಕರಲ್ಲಿ ಒಂದಲ್ಲಾ ಒಂದು ಭಯ ಸುಪ್ತವಾಗಿ ಇರುವುದು ಸಹಜ. ಕೆಲವರಲ್ಲಿ ಅದು ಅತಿರೇಕಕ್ಕೆ ಹೋಗುವುದನ್ನೂ ಕಾಣಬಹುದು. ಹೀಗಿರುವಾಗ, ತೆಲಂಗಾಣದ ಮಹಿಳೆಯೊಬ್ಬರು ತಮ್ಮ ಮನೆಯಲ್ಲಿದ್ದ ಇರುವೆಗಳಿಗೆ ಹೆದರಿ, ಆತ್ಮ*ತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹೈದರಾಬಾದ್‌: ಬಾಲ್ಯದ ಆಘಾತಗಳು ಅಥವಾ ಇತರೆ ಕಾರಣಗಳಿಂದಾಗಿ ಬಹುತೇಕರಲ್ಲಿ ಒಂದಲ್ಲಾ ಒಂದು ಭಯ ಸುಪ್ತವಾಗಿ ಇರುವುದು ಸಹಜ. ಕೆಲವರಲ್ಲಿ ಅದು ಅತಿರೇಕಕ್ಕೆ ಹೋಗುವುದನ್ನೂ ಕಾಣಬಹುದು. ಹೀಗಿರುವಾಗ, ತೆಲಂಗಾಣದ ಮಹಿಳೆಯೊಬ್ಬರು ತಮ್ಮ ಮನೆಯಲ್ಲಿದ್ದ ಇರುವೆಗಳಿಗೆ ಹೆದರಿ, ಆತ್ಮ*ತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬಾಲ್ಯದಿಂದಲೂ ಇರುವೆಗಳನ್ನು ಕಂಡರೆ ಭಯಭೀತರಾಗುತ್ತಿದ್ದ 25 ವರ್ಷದ ಮಹಿಳೆ, ಮನೆ ಸ್ವಚ್ಛಗೊಳಿಸುವ ನೆಪದಲ್ಲಿ ತಮ್ಮ 3 ವರ್ಷದ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟುಬಂದಿದ್ದರು. ಸಂಜೆ ಅವರ ಪತಿ ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಮುಚ್ಚಲ್ಪಟ್ಟಿದ್ದನ್ನು ಗಮನಿಸಿ, ನೆರೆಹೊರೆಯವರ ಸಹಾಯದೊಂದಿಗೆ ಅದನ್ನು ತೆರೆದಿದ್ದಾರೆ.

ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

ಆಗ ಮಹಿಳೆ ಸೀರೆಯ ಸಹಾಯದಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಲ್ಲೇ ದೊರೆತ ಮರಣಪತ್ರದಲ್ಲಿ, ‘ನನಗೆ ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ. ನೀವು(ಪತಿ) ಮತ್ತು ಮಗಳು ಕ್ಷೇಮವಾಗಿರಿ’ ಎಂದು ಬರೆಯಲಾಗಿತ್ತು.

ಮನೆಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಇರುವೆ ಕಂಡು, ಭಯ

ಮನೆಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಇರುವೆ ಕಂಡು, ಭಯದಿಂದ ಇಂತಹ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಹಿಳೆ ತಮ್ಮ ಭಯಕ್ಕಾಗಿ ಈ ಮೊದಲು ಆಸ್ಪತ್ರೆಯೊಂದರಲ್ಲಿ ಆಪ್ತ ಸಮಾಲೋಚನೆಗೂ ಒಳಪಟ್ಟಿದ್ದರು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?