ನವಿಲನ್ನು ಕೊಂದು ಯೂಟ್ಯೂಬ್‌ನಲ್ಲಿ ರಾಷ್ಟ್ರಪಕ್ಷಿಯ ಕರಿ ರೆಸಿಪಿ ಹರಿಬಿಟ್ಟ ಯೂಟ್ಯೂಬರ್ ಅಂದರ್

Published : Aug 12, 2024, 11:20 AM IST
ನವಿಲನ್ನು ಕೊಂದು ಯೂಟ್ಯೂಬ್‌ನಲ್ಲಿ ರಾಷ್ಟ್ರಪಕ್ಷಿಯ ಕರಿ ರೆಸಿಪಿ ಹರಿಬಿಟ್ಟ ಯೂಟ್ಯೂಬರ್ ಅಂದರ್

ಸಾರಾಂಶ

ತೆಲಂಗಾಣದ ಯೂಟ್ಯೂಬರ್ ಒಬ್ಬ ರಾಷ್ಟ್ರಪಕ್ಷಿಯನ್ನೇ ಹಿಡಿದು ಕೊಂದು ಸಾಂಬಾರು ಮಾಡಿದ್ದಾನೆ. ಬರೀ ಇಷ್ಟೇ ಅಲ್ಲ ಇದರ ವೀಡಿಯೋ ಮಾಡಿ ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದಾನೆ.

ನವಿಲು ನಮ್ಮ ರಾಷ್ಟ್ರ ಪಕ್ಷಿ, ರಾಷ್ಟ್ರಪಕ್ಷಿಯೂ ಸೇರಿದಂತೆ ಯಾವುದೇ ವನ್ಯಜೀವಿಗಳನ್ನು ಹತ್ಯೆ ಮಾಡುವುದು ವನ್ಯಜೀವಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧ. ಆದರೆ ತೆಲಂಗಾಣದ ಯೂಟ್ಯೂಬರ್ ಒಬ್ಬ ರಾಷ್ಟ್ರಪಕ್ಷಿಯನ್ನೇ ಹಿಡಿದು ಕೊಂದು ಸಾಂಬಾರು ಮಾಡಿದ್ದಾನೆ. ಬರೀ ಇಷ್ಟೇ ಅಲ್ಲ ಇದರ ವೀಡಿಯೋ ಮಾಡಿ ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯೂಟ್ಯೂಬರ್‌ನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಹೀಗೆ ನವಿಲನ್ನೇ ಕೊಂದು ಅದರ ಮಾಂಸದ ಸಾರು ಮಾಡುವ ರೆಸಿಪಿಯನ್ನು ಯೂಟ್ಯೂಬ್‌ನಲ್ಲಿ ಪ್ರಕಟಿಸಿದ ಯೂಟ್ಯೂಬರ್‌ನನ್ನು(YouTuber) ತೆಲಂಗಾಣದ ರಾಜಣ್ಣ ಸಿರಿಸಿಲ್ಲ(Rajanna Siricilla)ಜಿಲ್ಲೆಯ ತಂಗಲಪಲ್ಲಿ ಗ್ರಾಮದ ಕೊಡಂ ಪ್ರಣಯ್‌ ಕುಮಾರ್ (Kodam Pranay Kumar) ಎಂದು ಗುರುತಿಸಲಾಗಿದೆ. ಈತ ಯೂಟ್ಯೂಬನಲ್ಲಿ ನವಿಲು ಸಾಂಬಾರಿನ ಸಂಪ್ರದಾಯಿಕ ವಿಧಾನ ಎಂದು ಶೀರ್ಷಿಕೆ ನೀಡಿ ಯೂಟ್ಯೂಬ್‌ನಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದ. ಈ ವೀಡಿಯೋ  ನಂತರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಈತನ ಕೃತ್ಯದ ಬಗ್ಗೆ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು. ಇದಾದ ನಂತರ ವಿಚಾರ ತಿಳಿದ ಪೊಲೀಸರು ಆತನ ವಿರುದ್ಧ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. 

ಮನೆಯ ಯಾವ ದಿಕ್ಕಿಗೆ ನವಿಲು ಗರಿಗಳನ್ನು ಇಡುವುದರಿಂದ ಆರ್ಥಿಕ ಲಾಭವಾಗುತ್ತೆ ಗೊತ್ತಾ?

ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ರೀತಿ ಕೃತ್ಯವೆಸಗುವ ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ಎಸ್‌ಪಿ ಅಖಿಲ್ ಮಹಾಜನ್ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಪ್ರಕರಣ ದಾಖಲಾದ ನಂತರ ಈ ವೀಡಿಯೋವನ್ನು ಯೂಟ್ಯೂಬ್‌ನಿಂದ ಡಿಲೀಟ್ ಮಾಡಲಾಗಿದೆ. ಹಾಗೆಯೇ ಯೂಟ್ಯೂಬರ್ ಪ್ರಣಯ್‌ನನ್ನು ಬಂಧಿಸಿದ ಅರಣ್ಯ ಇಲಾಖೆ ಪೊಲೀಸರು ಆತ ಕೃತ್ಯವೆಸಗಿದ ಸ್ಥಳ ಮಹಜರು ಮಾಡಿದ್ದಾರೆ. ಅಲ್ಲದೇ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವುದಕ್ಕಾಗಿ ಕೆಲ ಮಾದರಿಗಳನ್ನು ಸ್ಥಳದಿಂದ ಸಂಗ್ರಹಿಸಿದ್ದಾರೆ. 

ಯೂಟ್ಯೂಬರ್‌ನ ರಕ್ತದ ಮಾದರಿ ಹಾಗೂ ನವಿಲು ಸಾಂಬಾರ್‌ನ ಕೆಲ ಭಾಗಗಳನ್ನು ಕೂಡ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಬೆಳಗಾವಿಯಲ್ಲಿ ವಿಷದ ಬೀಜ ಹಾಕಿ ರಾಷ್ಟ್ರಪಕ್ಷಿ ನವಿಲುಗಳನ್ನು ಕೊಂದ ಕಿರಾತಕರು! ಶಿಕ್ಷೆ ಏನು ಗೊತ್ತಾ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ