
ಉದಕಮಂಡಲ: ಜನಪ್ರಿಯ ಪ್ರವಾಸಿ ತಾಣವಾಗಿರುವ ಉದಕಮಂಡಲದಲ್ಲಿ (ಊಟಿ) ತಾಪಮಾನ ಶೂನ್ಯಕ್ಕೆ ತಲುಪಿದೆ. ಇದೇ ವೇಳೆ ಊಟಿ ಸನಿಹದ ಎವಲಾಂಚ್ ಎಂಬಲ್ಲಿ ತಾಪಮಾನ -2 ಡಿಗ್ರಿಗೆ ಕುಸಿದಿದೆ. ಊಟಿ, ಕಂಥಲ್, ಥಲೈಕುಂಥ ಪ್ರದೇಶಗಳಲ್ಲಿನ ಜಲಮೂಲಗಳು ಹೆಪ್ಪುಗಟ್ಟಿವೆ. ಇದರಿಂದ ಜನರು ಪರದಾಡುವಂತಾಗಿದೆ. ಅತ್ತ ವಿಪರೀತ ಚಳಿಯಿಂದಾಗಿ ಟೀ ತೋಟಗಳಿಗೆ ಹಾನಿಯಾಗುತ್ತಿದ್ದು, ಬೆಳೆಗಾರರು ಚಿಂತಿತರಾಗಿದ್ದಾರೆ. ಈ ಚಳಿಯು ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರವೂ ಚಳಿಗೆ ತರ ತರ:
ಈ ನಡುವೆ, ಉತ್ತರ ಭಾರತವೂ ಚಳಿಯಿಂದ ನಡುಗುತ್ತಿದೆ ಕಾಶ್ಮೀರದಲ್ಲಿ ಮೈನಸ್ 7.8, ರಾಜಸ್ಥಾನದಲ್ಲಿ 2.5, ಹರ್ಯಾಣದಲ್ಲಿ 5 ಡಿಗ್ರಿ, ದಿಲ್ಲಿಯಲ್ಲಿ 10.5 ಡಿಗ್ರ ಉಷ್ಣಾಂಶ ದಾಖಲಾಗಿದೆ.
ನಾಳೆ ಬೆಳಗ್ಗೆ 8 ಗಂಟೆಗೆ ಇಸ್ರೋ ಸ್ಪೇಡೆಕ್ಸ್ ಡಾಕಿಂಗ್
ನವದೆಹಲಿ: ತಾನು ಕಳಿಸಿದ್ದ ಸ್ಪೇಡೆಕ್ಸ್ ನೌಕೆಗಳ ಡಾಕಿಂಗ್ ಮತ್ತು ಅನ್ಡಾಕಿಂಗ್ ಪ್ರಕ್ರಿಯೆ ಗುರುವಾರ ಬೆಳಗ್ಗೆ 8ರಿಂದ ಆರಂಭವಾಗಲಿದೆ ಎಂದು ಇಸ್ರೋ ತಿಳಿಸಿದೆ.ಮಂಗಳವಾರ ಟ್ವೀಟ್ ಮಾಡಿರುವ ಅವರು, https://www.youtube.com/live/UCs1UWAo2I0 ಮೂಲಕ ನೇರಪ್ರಸಾರ ವೀಕ್ಷಿಸಬಹುದು ಎಂದು ತಿಳಿಸಿದೆ.
ಡಿ.30ರಂದು ಇಸ್ರೋ, ಸ್ಪೇಡೆಕ್ಸ್ 1 ಮತ್ತು ಸ್ಪೇಡೆಕ್ಸ್ 2 ಎಂಬ ಎರಡು ನೌಕೆಗಳನ್ನು ಹಾರಿಬಿಟ್ಟಿತ್ತು. ಅದರ ಡಾಕಿಂಗ್ನಲ್ಲಿ ಯಶ ಕಂಡರೆ ಅಮೆರಿಕ, ರಷ್ಯಾ ಹಾಗೂ ಚೀನಾ ಬಳಿಕ ವಿಶ್ವದ 4ನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ.
ಗಾಯಾಳು ಬಾಲಕನ ಆರೋಗ್ಯ ವಿಚಾರಿಸಿದ ಅಲ್ಲು
ಹೈದರಾಬಾದ್: ಪುಷ್ಪ-2 ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನನ್ನು ನಟ ಅಲ್ಲು ಅರ್ಜುನ್ ಮಂಗಳವಾರ ಭೇಟಿಯಾಗಿದ್ದಾರೆ.ಅಲ್ಲು ಸುಮಾರು 10 ನಿಮಿಷಗಳನ್ನು ಗಾಯಾಳು ಶ್ರೀತೇಜ್(8)ನೊಂದಿಗೆ ಕಳೆದಿದ್ದು, ನಿರ್ಮಾಪಕ ಹಾಗೂ ತೆಲಂಗಾಣ ಫಿಲಂ ಡೆವಲಪ್ಮೆಂಟ್ ಕಾರ್ಪೊರೇಷನ್ನ ಅಧ್ಯಕ್ಷರಾಗಿರುವ ವೆಂಕಟರಮಣ ರೆಡ್ಡಿ ಕೂಡ ಅವರೊಂದಿಗಿದ್ದರು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತು ಒದಗಿಸಲಾಗಿತ್ತು.
ಈ ಮೊದಲು ಜ.5ರಂದು ಅಲ್ಲು ಆಸ್ಪತ್ರೆಗೆ ಭೇಟಿ ನೀಡಬೇಕಿತ್ತಾದರೂ, ನಂತರ ಅದು ರದ್ದಾಗಿತ್ತು.ಯಾವುದೇ ಬಾಹ್ಯ ಬೆಂಬಲವಿಲ್ಲದೆ ಶ್ರೀತೇಜ್ರ ಪ್ರಮುಖ ಪ್ಯಾರಾಮೀಟರ್ಗಳು ಉತ್ತಮವಾಗಿದ್ದು, ರೋಗನಿರೋಧಕ ಕೊಡುವುದನ್ನು ನಿಲ್ಲಿಸಲಾಗಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ