ಚಿನಾಬ್‌ ಮೇಲೆ ಅತಿದೊಡ್ಡ ಜಲವಿದ್ಯುತ್ ಯೋಜನೆಗೆ ಟೆಂಡರ್‌: ಪಾಕ್‌ಗೆ ಶಾಕ್‌

Kannadaprabha News   | Kannada Prabha
Published : Aug 01, 2025, 04:48 AM IST
Chinab Rail Bridge

ಸಾರಾಂಶ

ಪಾಕಿಸ್ತಾನಕ್ಕೆ ಮತ್ತೊಂದು ಜಲಾಘಾತ ನೀಡುವತ್ತ ಭಾರತ ಹೆಜ್ಜೆ ಇಡುತ್ತಿದೆ. ಭಾರತದಿಂದ ಪಾಕ್‌ಗೆ ಹರಿಯುವ ಚಿನಾಬ್‌ ನದಿಗೆ ಅಡ್ಡಲಾಗಿ ದೇಶದ ಅತಿದೊಡ್ಡ ಜಲವಿದ್ಯುತ್‌ ಯೋಜನೆ ನಿರ್ಮಾಣಕ್ಕೆ 44 ವರ್ಷಗಳ ಬಳಿಕ ಸರ್ಕಾರ ಟೆಂಡರ್‌ ಕರೆದಿದೆ.

ಶ್ರೀನಗರ: ಭಯೋತ್ಪಾದನೆ, ಒಳನುಸುಳುವಿಕೆ, ಗಡಿಯಲ್ಲಿನ ಕಿರಿಕಿರಿಯಿಂದ ಬಗಲಲ್ಲಿರುವ ಮುಳ್ಳಿನಂತೆ ಕಾಡುತ್ತಿರುವ ಪಾಕಿಸ್ತಾನಕ್ಕೆ ಮತ್ತೊಂದು ಜಲಾಘಾತ ನೀಡುವತ್ತ ಭಾರತ ಹೆಜ್ಜೆ ಇಡುತ್ತಿದೆ. ಭಾರತದಿಂದ ಪಾಕ್‌ಗೆ ಹರಿಯುವ ಚಿನಾಬ್‌ ನದಿಗೆ ಅಡ್ಡಲಾಗಿ ದೇಶದ ಅತಿದೊಡ್ಡ ಜಲವಿದ್ಯುತ್‌ ಯೋಜನೆ ನಿರ್ಮಾಣಕ್ಕೆ 44 ವರ್ಷಗಳ ಬಳಿಕ ಸರ್ಕಾರ ಟೆಂಡರ್‌ ಕರೆದಿದೆ.

ಪಹಲ್ಗಾಂ ಉಗ್ರದಾಳಿಯ ಕೆಲ ತಿಂಗಳುಗಳ ಬಳಿಕ ಪಾಕ್‌ ಜತೆಗಿನ ಸಿಂಧು ಜಲ ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿತ್ತು. ಇದರಿಂದ ನೆರೆದೇಶ ಕೆಲಕಾಲ ಬಾಯಾರಿತ್ತು. ಇದೀಗ ಪಾಕ್‌ ಜತೆ ಯಾವುದೇ ಮಾಹಿತಿ ಹಂಚಿಕೊಳ್ಳದೆ, ಸಾವಲ್‌ಕೋಟ್‌ನಲ್ಲಿ 1856 ಮೆಗಾವ್ಯಾಟ್‌ ಜಲವಿದ್ಯುತ್ ಯೋಜನೆಯನ್ನು ಆರಂಭಿಸಲಾಗಿದೆ. ಇದಕ್ಕಾಗಿ ರಾಷ್ಟ್ರೀಯ ಜಲವಿದ್ಯುತ್ ನಿಗಮ(ಎನ್‌ಎಚ್‌ಪಿಸಿ) ಬುಧವಾರ ಟೆಂಡರ್‌ ಕರೆದಿದ್ದು, ಬಿಡ್‌ ಸಲ್ಲಿಸಲು ಸೆ.10 ಕೊನೆ ದಿನವಾಗಿದೆ.

ಎನ್‌ಎಚ್‌ಪಿಸಿ ಮತ್ತು ಜಮ್ಮು ಕಾಶ್ಮೀರ ವಿದ್ಯುತ್ ಅಭಿವೃದ್ಧಿ ನಿಗಮ ಒಟ್ಟಾಗಿ ಈ ಯೋಜನೆ ಸಾಕಾರಕ್ಕೆ ಶ್ರಮಿಸುತ್ತಿದ್ದು, ಇದಕ್ಕೆ 22,704 ಕೋಟಿ ರು. ವ್ಯಯವಾಗುವ ಅಂದಾಜಿದೆ.

ವಿಳಂಬವೇಕೆ?:

ಚಿನಾಬ್‌ ನದಿ ಮೇಲೆ ಜಲವಿದ್ಯುತ್‌ ಸ್ಥಾವರ ನಿರ್ಮಾಣದ ಯೋಜನೆಯನ್ನು 1980ರಲ್ಲೇ ರೂಪಿಸಲಾಗಿತ್ತಾದರೂ, ಪಾಕಿಸ್ತಾನ ಆ ಬಗ್ಗೆ ಕಳವಳ ವ್ಯಕ್ತಪಡಿಸಿ, ಜಾರಿಗೆ ಬರದಂತೆ ನೋಡಿಕೊಂಡಿತ್ತು. ಕಾರಣ, ಭಾರತದಿಂದ ತನ್ನ ನೆಲಕ್ಕೆ ಹರಿಯುವ ನದಿಗೆ ಅಡ್ಡವಾಗಿ ಸ್ಥಾವರ ನಿರ್ಮಾಣವಾದರೆ, ತನಗೆ ನೀರಿನ ಕೊರತೆಯಾಗಬಹುದು ಎಂಬುದು ಪಾಕ್‌ನ ಆತಂಕವಾಗಿತ್ತು. ಜಮ್ಮು ಕಾಶ್ಮೀರ ವಿದ್ಯುತ್ ಅಭಿವೃದ್ಧಿ ನಿಗಮವು 400 ಕೋಟಿ ರು. ವೆಚ್ಚದಲ್ಲಿ ಯೋಜನೆಯನ್ನು ಆರಂಭಿಸಿತ್ತಾದರೂ, ದಶಕದ ಹಿಂದೆ ಅದನ್ನು ನಿಲ್ಲಿಸಲಾಗಿತ್ತು.

ಆದರೆ ಈಗ ಸಿಂಧು ಒಪ್ಪಂದ ಸ್ಥಗಿತವಾಗಿರುವ ಕಾರಣ, ಸಿಂಧುವಿನ ಯಾವ ಉಪನದಿಗಳ ಬಗ್ಗೆಯೂ ಪಾಕಿಸ್ತಾನಕ್ಕೆ ಮಾಹಿತಿ ನೀಡುವ ಅಗತ್ಯವಿಲ್ಲ.

ಮಹತ್ವವೇನು?:

ಸಿಂಧು ಒಪ್ಪಂದ ಸ್ಥಗಿತದ ಬಳಿಕ, ಭಾರತ ತನ್ನ ನೆಲದಲ್ಲಿ ಹರಿಯುವ ನದಿಗಳ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಬಹುದು. ಈ ಯೋಜನೆಯಿಂದ ಭಾರಯ ಇಂಧನ ಸ್ವಾವಲಂಬನೆ ಸಾಧಿಸುವುದಲ್ಲದೆ, ಪಶ್ಚಿಮದ ನದಿಗಳ ಮೇಲೆ ಪೂರ್ಣ ನಿಯಂತ್ರಣ ಸಾಧಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ