ಪ್ಲ್ಯಾನ್‌ ಮಾಡಿ ರಾಧಿಕಾ ಕೊಲೆ : ತಂದೆ ದೀಪಕ್‌ ತಪ್ಪೊಪ್ಪಿಗೆ

Published : Jul 13, 2025, 05:27 AM IST
tennis player radhika yadav

ಸಾರಾಂಶ

ರಾಷ್ಟ್ರಮಟ್ಟದ ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್‌ರನ್ನು ಅವರ ತಂದೆ ದೀಪಕ್‌ ಆಕಸ್ಮಿಕವಾಗಿ ಅಥವಾ ಕ್ಷಣಿಕ ಕೋಪದಿಂದ ಕೊಂದಿದ್ದಲ್ಲ. ಬದಲಿಗೆ ಅವರು ಮೊದಲೇ ಯೋಜನೆ ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರ ವಿಚಾರಣೆ ವೇಳೆ ತಿಳಿದುಬಂದಿದೆ.

 ಗುರುಗ್ರಾಮ: ರಾಷ್ಟ್ರಮಟ್ಟದ ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್‌ರನ್ನು ಅವರ ತಂದೆ ದೀಪಕ್‌ ಆಕಸ್ಮಿಕವಾಗಿ ಅಥವಾ ಕ್ಷಣಿಕ ಕೋಪದಿಂದ ಕೊಂದಿದ್ದಲ್ಲ. ಬದಲಿಗೆ ಅವರು ಮೊದಲೇ ಯೋಜನೆ ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರ ವಿಚಾರಣೆ ವೇಳೆ ತಿಳಿದುಬಂದಿದೆ.

‘ಪ್ರತಿದಿನ ಬೆಳಗ್ಗೆ ದೀಪಕ್‌ ಖುದ್ದಾಗಿ ಹಾಲು ತರಲು ಹೋಗುತ್ತಿದ್ದರು. ಆದರೆ ಅಂದು ತಮ್ಮ ಮಗನನ್ನು ಕಳಿಸಿ, ಮಗಳು ಮನೆಯಲ್ಲಿ ಒಬ್ಬಳೇ ಇರುವಂತೆ ನೋಡಿಕೊಂಡಿದ್ದರು. ಆಕೆ ತಿಂಡಿ ತಯಾರಿಸುತ್ತಿದ್ದ ವೇಳೆ ಅಡುಗೆಕೋಣೆಗೆ ನುಗ್ಗಿ ಗುಂಡು ಹಾರಿಸಿದ್ದರು. ಈ ಬಗ್ಗೆ ದೀಪಕ್‌ ಒಪ್ಪಿಕೊಂಡಿದ್ದಾರೆ’ ಎಂದು ಗುರುಗ್ರಾಮದ ಸಾರ್ವಜನಿಕ ಸಂಪರ್ಕಾಧಿಕಾರಿ ಸಂದೀಪ್‌ ಕುಮಾರ್‌ ತಿಳಿಸಿದ್ದಾರೆ. ‘ನಾನು ಕನ್ಯಾ ವಧೆ ಮಾಡಿದ್ದೇನೆ. ನನಗೆ ಗಲ್ಲು ಶಿಕ್ಷೆ ವಿಧಿಸಬೇಕು, ಹಾಗೆ ಎಫ್‌ಐಆರ್‌ ಬರೆಯಿರಿ ಎಂದು ಪೊಲೀಸರ ಮುಂದೆ ದೀಪಕ್‌ ಹೇಳಿದ್ದರು’ ಎಂದು ಅವರ ಸಹೋದರ ಹೇಳಿದ್ದಾರೆ.

ಟೆನ್ನಿಸ್‌ ಕೋರ್ಟ್‌ ಬುಕ್‌ ಮಾಡಿ ಆಸಕ್ತರಿಗೆ ರಾಧಿಕಾ ಟ್ರೈನಿಂಗ್‌: ತಂದೆ ಅಸಮಾಧಾನ

ಗುರುಗ್ರಾಮ: ರಾಧಿಕಾ ಬಳಿ ಸ್ವಂತ ಟೆನ್ನಿಸ್‌ ಅಕಾಡಮಿ ಇರಲಿಲ್ಲ. ಆಕೆ ವಿವಿಧ ಕೋರ್ಟ್‌ಗಳಲ್ಲಿ ಆಸಕ್ತರಿಗೆ ಟೆನ್ನಿಸ್‌ ಹೇಳಿಕೊಡುತ್ತಿದ್ದರು. ಇದಕ್ಕೆ ಅವರ ತಂದೆ ದೀಪಕ್‌ ಆಕ್ಷೇಪಿಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಈ ಮೊದಲು, ರಾಧಿಕಾ ಸ್ವಂತ ಅಕಾಡಮಿ ಹೊಂದಿದ್ದರು. ಅದಕ್ಕಾಗಿ ದೀಪಕ್‌ ಕೋಟ್ಯಂತರ ರುಪಾಯಿ ವ್ಯಯಿಸಿದ್ದರು. ಆಸಕ್ತರಿಗೆ ಟೆನ್ನಿಸ್‌ ಕಲಿಸಿ ರಾಧಿಕ ಗಳಿಸುತ್ತಿದ್ದ ಹಣದಲ್ಲಿ ಬದುಕುತ್ತಿರುವುದಾಗಿ ಪರಿಚಿತರು ಹಂಗಿಸುತ್ತಿದ್ದ ಕಾರಣ ಕೋಪಗೊಂಡ ದೀಪಕ್‌ ಆಕೆಯನ್ನು ಗುಂಡಿಕ್ಕಿ ಕೊಂದಿದ್ದರು ಎಂದು ಪೊಲೀಸರು ತಿಳಿಸಿದ್ದರು. ಅವರ ಸಂಬಂಧಿಯೊಬ್ಬರು ಹೇಳಿರುವ ಪ್ರಕಾರ, ಚಿಕ್ಕದಿನಿಂದ ರಾಧಿಕಾರ ಟೆನ್ನಿಸ್‌ ವೃತ್ತಿಗೆ ತಂದೆ ದೀಪಕ್‌ ಬೆಂಬಲಿಸುತ್ತಿದ್ದರು. ಆದರೆ ಆಕೆ ಅನ್ಯರಿಗೆ ಕಲಿಸತೊಡಗಿದಾಗ ಅದು ಅವರಿಗೆ ಹಿಡಿಸಿರಲಿಲ್ಲ. ಅದನ್ನು ನಿಲ್ಲಿಸುವಂತೆ ಅನೇಕ ಬಾರಿ ಸೂಚಿಸಿದ್ದರೂ ರಾಧಿಕಾ ಒಪ್ಪಿರಲಿಲ್ಲ. ಇದು ಆಗಾಗ ತಂದೆ-ಮಗಳ ನಡುವೆ ಮನಸ್ತಾಪಕ್ಕೆ ಕಾರಣವಾಗುತ್ತಿತ್ತು ಎನ್ನಲಾಗಿದೆ.

ಅಕ್ಟೋಬರ್‌ನಲ್ಲಿ ವಿದೇಶಕ್ಕೆ ಹೋಗಲು ರಾಧಿಕಾ ಪ್ಲ್ಯಾನ್

ಗುರುಗ್ರಾಮ: ತಂದೆಯಿಂದಲೇ ಹತ್ಯೆಗೀಡಾದ ಹರ್ಯಾಣದ ಟೆನ್ನಿಸ್ ಆಟಗಾರ್ತಿ ರಾಧಿಕಾ ಯಾದವ್, ಮನೆಯ ಕಠಿಣ ವಾತಾವರಣದಿಂದ ಬೇಸತ್ತು, ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ವಿದೇಶಕ್ಕೆ ತೆರಳಲು ಯೋಚಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ರಾಧಿಕಾ ತಮ್ಮ ಕೋಚ್ ಅಜಯ್ ಯಾದವ್ ಜೊತೆ ನಡೆಸಿದ ವಾಟ್ಸಾಪ್ ಸಂಭಾಷಣೆಯಿಂದ ಈ ವಿಷಯ ಬಹಿರಂಗವಾಗಿದೆ.

‘ಏನಾದರೂ ಮಾಡಿ ನಾನು ಒಂದೆರಡು ತಿಂಗಳ ಮಟ್ಟಿಗಾದರೂ ಇಲ್ಲಿಂದ ಹೊರಹೋಗಬೇಕು. ಕೆಲ ಸಮಯ ಸ್ವತಂತ್ರವಾಗಿ ಬದುಕಬೇಕು. ಇಲ್ಲಿ (ಮನೆಯಲ್ಲಿ) ತುಂಬಾ ನಿರ್ಬಂಧಗಳಿವೆ. ನನಗೆ ಲೈಫ್ ಎಂಜಾಯ್ ಮಾಡಬೇಕಿದೆ. ಚೀನಾಕ್ಕೆ ಹೋದರೆ ಆಹಾರದ ಸಮಸ್ಯೆಯಾಗುತ್ತದೆ. ದುಬೈ, ಆಸ್ಟ್ರೇಲಿಯಾ ಮೊದಲಾದ ದೇಶಗಳು ಓಕೆ. ಆಸ್ಟ್ರೇಲಿಯಾದಲ್ಲಿ ನನಗೆ ಕುಟುಂಬವಿದೆ. ದುಬೈನಲ್ಲಿ ನೀವಿದ್ದೀರ’ ಎಂದು ರಾಧಿಕಾ ಅಜಯ್ ಯಾದವ್‌ಗೆ ಸಂದೇಶ ಕಳಿಸಿದ್ದಾರೆ.‘ಅಪ್ಪನ ಜೊತೆ ಮಾತಾಡಿದೆ. ಆದರೆ ನನ್ನ ಮಾತನ್ನು ಕೇಳಲು ಅವರು ಸಿದ್ಧರಿಲ್ಲ. ಸಾಕಷ್ಟು ದುಡ್ಡು ಇಲ್ಲ ಎನ್ನುತ್ತಾರೆ’ ಎಂತಲೂ ರಾಧಿಕಾ ಮೆಸೇಜ್‌ನಲ್ಲಿ ಉಲ್ಲೇಖಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..