ಥಾಣೆಯ ಅಪಾರ್ಟ್‌ಮೆಂಟ್ ಕಿಟಕಿಯಲ್ಲಿ ಸಿಲುಕಿಕೊಂಡಿದ್ದ ಭಾರೀ ಗಾತ್ರದ ಹಾವಿನ ರಕ್ಷಣೆ: ವೀಡಿಯೋ ವೈರಲ್

Published : Sep 28, 2023, 11:55 AM ISTUpdated : Sep 28, 2023, 11:58 AM IST
ಥಾಣೆಯ ಅಪಾರ್ಟ್‌ಮೆಂಟ್ ಕಿಟಕಿಯಲ್ಲಿ ಸಿಲುಕಿಕೊಂಡಿದ್ದ ಭಾರೀ ಗಾತ್ರದ ಹಾವಿನ ರಕ್ಷಣೆ: ವೀಡಿಯೋ ವೈರಲ್

ಸಾರಾಂಶ

ಸುರಕ್ಷಿತ ಸ್ಥಳ ಅರಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಲು ಯತ್ನಿಸಿದ ಹಾವೊಂದನ್ನು ಇಬ್ಬರು ಯುವಕರು ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಯುವಕರ ಈ ಸಾಹಸದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ..

ಮಳೆಗಾಲದ ಸಮಯದಲ್ಲಿ ಹಾವುಗಳು ಸುರಕ್ಷಿತ ಜಾಗವನ್ನು ಅರಸಿ ಮನೆಯೊಳಗೆ ವಾಹನದೊಳಗೆ ನುಗ್ಗುವುದು ಸಾಮಾನ್ಯವಾಗಿದೆ. ಹಾಗೆಯೇ ಮಹಾರಾಷ್ಟ್ರ ಹಾಗೂ ಪುಣೆಯಲ್ಲಿ ಕಳೆದ ಕೆಲ ದಿನಗಳಿಂದ ಜೋರಾಗಿ ಸುರಿದ ಮಳೆಗೆ ಹಾವುಗಳು ಬೆಚ್ಚನೆಯ ಜಾಗ ಅರಸಿ ಮನೆ ಕಾಡು ಪೊದೆಗಳ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿವೆ. ಅದೇ ರೀತಿ ಸುರಕ್ಷಿತ ಸ್ಥಳ ಅರಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಲು ಯತ್ನಿಸಿದ ಹಾವೊಂದನ್ನು ಇಬ್ಬರು ಯುವಕರು ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಯುವಕರ ಈ ಸಾಹಸದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ..

ಅಪಾರ್ಟ್‌ಮೆಂಟ್‌ನ ಕಿಟಕಿಯ ಮೂಲಕ ಒಳನುಗ್ಗಿದ್ದ ಭಾರೀ ಗಾತ್ರದ ಹಾವು

ಸ್ನೇಹ ಎಂಬುವವರು ಈ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಇಬ್ಬರು ಯುವಕರು ಅಪಾರ್ಟ್‌ಮೆಂಟ್‌ನ ಕಿಟಕಿಯಲ್ಲಿ ನೇತಾಡುತ್ತಿದ್ದ ಬೃಹತ್ ಗಾತ್ರದ ಹಾವನ್ನು ರಕ್ಷಣೆ ಮಾಡಿದ್ದಾರೆ. ಮಹಾರಾಷ್ಟ್ರದ ಥಾಣೆಯ ಅಪಾರ್ಟ್‌ಮೆಂಟೊಂದರಲ್ಲಿಈ ಘಟನೆ ನಡೆದಿದೆ. ವೀಡಿಯೋದಲ್ಲಿ ಕಾಣಿಸುವಂತೆ ಹಾವೊಂದು ಅಪಾರ್ಟ್‌ಮೆಂಟ್ ಒಳಗೆ ಹೊಗುವುದಕ್ಕಾಗಿ ಕಿಟಕಿಯಲ್ಲಿ ನುಗ್ಗಿದ್ದು, ಕಿಟಕಿಯ ಸರಳುಗಳ ಮಧ್ಯೆ ಸಿಲುಕಿಕೊಂಡಿದೆ. ಇದನ್ನು ಅಲ್ಲಿಂದ ಬಿಡಿಸುವುದಕ್ಕಾಗಿ ರಕ್ಷಣಾ ತಂಡದ ಇಬ್ಬರು ಯುವಕರು ಸಾಹಸ ಮಾಡುತ್ತಿದ್ದಾರೆ. ಇದಕ್ಕಾಗಿ ಓರ್ವ ಯುವಕ ಕಿಟಕಿಯ ಸನ್‌ಶೇಡ್ ಮೇಲೆ ನಿಂತಿದ್ದರೆ ಮತ್ತೋರ್ವ ಕಿಟಕಿಯ ಮೇಲೆಯೇ ನಿಂತು ಹಾವನ್ನು ಸರಳುಗಳ ನಡುವಿನಿಂದ ಬಿಡಿಸಲು ಪ್ರಯತ್ನಿಸುತ್ತಿದ್ದಾನೆ. ಕೊನೆಗೂ ಹಾವು ಕಿಟಕಿಯಿಂದ ಕೆಳಗೆ ಬಿದ್ದಿದೆ. 

ರೈಲು ಬರಲು ಕೆಲ ಕ್ಷಣಗಳಿರುವಾಗ ರೈಲುಹಳಿಗೆ ಬಿದ್ದ ಅಂಧ ತಾಯಿಯ ಮಗ: ಆಮೇಲಾಗಿದ್ದು ಪವಾಡ..!

ಈ ವಿಡಿಯೋ ನೋಡಿದ ಅನೇಕರು ಹಾವಿನ ಗಾತ್ರವನ್ನು ನೋಡಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಹಾವನ್ನು ರಕ್ಷಿಸಿದ ಯುವಕರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 

ಪುಸ್ತಕದೊಳಗೆ ಫೋನ್‌: ಅಮ್ಮನಿಗೆ ಸಿಕ್ಕಿಬಿದ್ದ ಬಾಲಕ: ವೀಡಿಯೋ ನೋಡಿ ಮಗ ಇವತ್ತು ಸತ್ತಾ ಎಂದ ನೆಟ್ಟಿಗರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?