ಮೈಸೂರು ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿ ಬಿದ್ದ ದುರಂತ ಉದ್ದೇಶಪೂರ್ವಕ ಕೃತ್ಯ: ತನಿಖೇಲಿ ಪತ್ತೆ

Published : Oct 20, 2024, 05:29 AM IST
ಮೈಸೂರು ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿ ಬಿದ್ದ ದುರಂತ ಉದ್ದೇಶಪೂರ್ವಕ ಕೃತ್ಯ: ತನಿಖೇಲಿ ಪತ್ತೆ

ಸಾರಾಂಶ

ಮೈಸೂರಿನಿಂದ ಬಿಹಾರದ ದರ್ಭಂಗಾಕ್ಕೆ ಅ.11ರಂದು ತೆರಳುತ್ತಿದ್ದ ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು, ಮುಖ್ಯ ಮಾರ್ಗ ಬದಲಿಸಿ ಪಕ್ಕದ ಮಾರ್ಗದಲ್ಲಿ ನಿಂತಿದ್ದ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದ್ದರ ಹಿಂದೆ ವಿಧ್ವಂಸಕ ಕೃತ್ಯ ಅಡಗಿದೆ ಎಂಬ ಸಂಗತಿ ರೈಲ್ವೆ ಇಲಾಖೆಯ ತನಿಖೆ ವೇಳೆ ಪತ್ತೆಯಾಗಿದೆ. 

ಚೆನ್ನೈ (ಅ.20): ಮೈಸೂರಿನಿಂದ ಬಿಹಾರದ ದರ್ಭಂಗಾಕ್ಕೆ ಅ.11ರಂದು ತೆರಳುತ್ತಿದ್ದ ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು, ಮುಖ್ಯ ಮಾರ್ಗ ಬದಲಿಸಿ ಪಕ್ಕದ ಮಾರ್ಗದಲ್ಲಿ ನಿಂತಿದ್ದ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದ್ದರ ಹಿಂದೆ ವಿಧ್ವಂಸಕ ಕೃತ್ಯ ಅಡಗಿದೆ ಎಂಬ ಸಂಗತಿ ರೈಲ್ವೆ ಇಲಾಖೆಯ ತನಿಖೆ ವೇಳೆ ಪತ್ತೆಯಾಗಿದೆ. ರೈಲು ದುರಂತ ಸಂಭವಿಸಿದ ಕವರೈಪೇಟೆ ನಿಲ್ದಾಣದ ಬಳಿ ರೈಲು ಹಳಿಗೆ ಅಳವಡಿಸಲಾಗಿದ್ದ ನಟ್‌ಗಳು ಹಾಗೂ ಬೋಲ್ಟ್‌ಗಳನ್ನು ಉದ್ದೇಶಪೂರ್ವಕವಾಗಿ ಕಳಚಲಾಗಿತ್ತು ಎಂಬ ಸಂಗತಿ ಬಯಲಾಗಿದೆ.

ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ಅವರ ಎದುರು ವಿಚಾರಣೆಗೆ ಹಾಜರಾದ ಟ್ರ್ಯಾಕ್‌ಮ್ಯಾನ್‌, ಲೋಕೋಪೈಲಟ್‌, ಸ್ಟೇಷನ್‌ ಮಾಸ್ಟರ್‌ ಸೇರಿದಂತೆ 15 ರೈಲ್ವೆ ಸಿಬ್ಬಂದಿ, ಈ ದುರಂತದ ಹಿಂದೆ ಯಾವುದೇ ತಾಂತ್ರಿಕ ದೋಷವಿಲ್ಲ ಎಂದು ತಿಳಿಸಿದರು. ಆದರೆ ಹಳಿಗೆ ಅಳವಡಿಸಲಾಗಿದ್ದ ನಟ್‌ಗಳು ಹಾಗೂ ಬೋಲ್ಟ್‌ಗಳನ್ನು ಉದ್ದೇಶಪೂರ್ವಕವಾಗಿ ಕಳಚಿದ್ದ ಸಂಗತಿಯನ್ನು ಬಹಿರಂಗಪಡಿಸಿದರು.

ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆಗೆ ಒತ್ತಡ ಇದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ರೈಲ್ವೆ ಹಳಿಯಿಂದ 6 ಬೋಲ್ಟ್‌ಗಳು ಹಾಗೂ ನಟ್‌ಗಳನ್ನು ತೆಗೆಯಲಾಗಿತ್ತು. ಹೀಗಾಗೇ ರೈಲು ಮುಖ್ಯ ಮಾರ್ಗ ಬದಲಿಸಿ ಪಕ್ಕದ ಲೂಪ್‌ ಮಾರ್ಗಕ್ಕೆ ನುಗ್ಗಿದೆ. ನಟ್‌-ಬೋಲ್ಟ್‌ ತೆಗೆಯಲು ಅನುಭವಿ ವ್ಯಕ್ತಿಗೆ 30 ನಿಮಿಷ ಬೇಕಾಗುತ್ತದೆ. ಮಷಿನ್‌ಗಳನ್ನು ಬಳಸಿದರೂ 15ರಿಂದ 20 ನಿಮಿಷಗಳು ಬೇಕಾಗುತ್ತವೆ. ಈ ದುರಂತದಲ್ಲಿ ಅತ್ಯಂತ ನಿಖರವಾಗಿ ವಿಧ್ವಂಸಕ ಕೃತ್ಯವನ್ನು ನಡೆಸಲಾಗಿದೆ. ಹಾನಿ ಮಾಡುವ ಉದ್ದೇಶ ಸ್ಪಷ್ಟವಿದೆ ಎಂದು ರೈಲ್ವೆ ಪೊಲೀಸ್‌ ಇಲಾಖೆಯ ಸಹಾಯಕ ಆಯುಕ್ತ ಕರ್ಣನ್‌ ತಿಳಿಸಿದ್ದಾರೆ.

ದುರಂತ ನಡೆದ ದಿನ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಟ್ರ್ಯಾಕ್‌ಮ್ಯಾನ್‌ ಕರ್ತವ್ಯದಲ್ಲಿದ್ದ. ಆ ವೇಳೆ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ನಡೆದಿಲ್ಲ. ಆದರೆ ರಾತ್ರಿ 8.26ರ ವೇಳೆ ಈ ಕೃತ್ಯ ನಡೆದಿರುವಂತಿದೆ. ಏಕೆಂದರೆ ಆ ವೇಳೆಗೆ ಒಂದು ಎಮು ರೈಲು ಅದೇ ಮಾರ್ಗದಲ್ಲಿ ಹಾದು ಹೋಗಿದೆ. ಇದರಿಂದ ಹಳಿ ಮತ್ತಷ್ಟು ಸಡಿಲವಾಗಿವೆ. ಅದಾದ 12 ನಿಮಿಷದಲ್ಲೇ ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿ ದುರಂತ ಸಂಭವಿಸಿದೆ.

ಬೈಎಲೆಕ್ಷನ್‌ನಿಂದ ಡಿಕೆಶಿಗೆ ಚನ್ನಪಟ್ಟಣ ನೆನಪಾಗ್ತಿದೆ: ಎಚ್.ಡಿ.ಕುಮಾರಸ್ವಾಮಿ

‘ಬಾಗ್ಮತಿ ಎಕ್ಸ್‌ಪ್ರೆಸ್‌ಗೆ ಮುಖ್ಯ ಮಾರ್ಗದಲ್ಲಿ ಸಾಗಲು ಹಸಿರು ಸಿಗ್ನಲ್‌ ತೋರಲಾಗಿತ್ತು. ಆದರೆ ಅದು ಹೇಗೆ ಪಕ್ಕದ ಲೂಪ್‌ಲೈನ್‌ಗೆ ಹೋಯಿತು ಎಂದು ಗೊತ್ತಾಗಿಲ್ಲ’ ಎಂದು ಲೋಕೋಪೈಲಟ್‌ ತಿಳಿಸಿದ್ದರೆ, ‘ನಾನು ಕೂಡ ಮುಖ್ಯ ಹಳಿಯಲ್ಲಿ ಸಾಗಲು ಹಸಿರು ಸಿಗ್ನಲ್‌ ನೀಡಿದ್ದೆ. ಆದರೂ ರೈಲು ಹೇಗೆ ಲೂಪ್‌ಲೈನ್‌ಗೆ ಹೋಯಿತು’ ಎಂದು ಗೊತ್ತಿಲ್ಲ ಎಂದು ಸ್ಟೇಷನ್‌ ಮಾಸ್ಟರ್‌ ತಿಳಿಸಿದ್ದಾರೆ. ಮುಖ್ಯ ಹಳಿಯ ಬದಲು ಲೂಪ್‌ಲೈನ್‌ಗೆ ಬಾಗ್ಮತಿ ಎಕ್ಸ್‌ಪ್ರೆಸ್‌ ಅ.11ರಂದು ನುಗ್ಗಿದ್ದರಿಂದ 12 ಬೋಗಿಗಳು ಹಳಿ ತಪ್ಪಿ 20 ಮಂದಿಗೆ ಗಾಯಗಳಾಗಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್