ದಿಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆಯನ್ನೇ ಎಳೆದೊಯ್ದ ಕಾರು!

Published : Jan 20, 2023, 08:16 AM ISTUpdated : Jan 20, 2023, 08:18 AM IST
ದಿಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆಯನ್ನೇ ಎಳೆದೊಯ್ದ ಕಾರು!

ಸಾರಾಂಶ

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯನ್ನೂ ಕುಡುಕ ಕಾರು ಚಾಲಕನೊಬ್ಬ 10 ರಿಂದ 15 ಮೀಟರ್‌ ದೂರ ಎಳೆದುಕೊಂಡು ಹೋದ ಆಘಾತಕಾರಿ ಘಟನೆ ನಡೆದಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕಾರೊಂದು ಯುವತಿಗೆ ಡಿಕ್ಕಿ ಹೊಡೆದು ಆಕೆಯನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಘಟನೆ ಇನ್ನೂ ಹಸಿರಾಗಿರುವಾಗಲೇ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯನ್ನೂ ಕುಡುಕ ಕಾರು ಚಾಲಕನೊಬ್ಬ ಅದೇ ರೀತಿ 10-15 ಮೀಟರ್‌ ದೂರ ಎಳೆದುಕೊಂಡು ಹೋದ ಆಘಾತಕಾರಿ ಘಟನೆ ನಡೆದಿದೆ. ಗುರುವಾರ ಬೆಳಗಿನ ಜಾವ ಮಹಿಳಾ ಆಯೋಗದ (Women Commission) ಅಧ್ಯಕ್ಷೆ ಸ್ವಾತಿ ಮಲಿವಾಲ್‌ (Swati Maliwal) ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಪರಿಶೀಲನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ಚಾಲಕ ಸ್ವಾತಿಯ ಕೈ ಕಿಟಕಿಯ ಗಾಜಿನ ನಡುವೆ ಸಿಕ್ಕಿಬಿದ್ದಿರುವಾಗ ಕಾರು ಓಡಿಸಿಕೊಂಡು ಹೋಗಿದ್ದಾನೆ.

ಈ ಕುರಿತು ಪೊಲೀಸರಿಗೆ ಸ್ವಾತಿ ಮಲಿವಾಲ್‌ ದೂರು ನೀಡಿದ್ದು, 47 ವರ್ಷದ ಕಾರು ಚಾಲಕನನ್ನು ಬಂಧಿಸಲಾಗಿದೆ. ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗವು ದೆಹಲಿ ಪೊಲೀಸರಿಂದ ಹೆಚ್ಚಿನ ಮಾಹಿತಿ ಕೇಳಿದೆ.

ತುಂಡುಡುಗೆ ಸಹವಾಸ ಉರ್ಫಿಗೆ ಸಂಕಟ, ರಕ್ಷಣೆ ನೀಡುವಂತೆ ಪೊಲೀಸರಿಗೆ ಮಹಿಳಾ ಆಯೋಗ ಸೂಚನೆ!

ಘಟನೆ ನಡೆದಿದ್ದು ಹೇಗೆ:

ಸ್ವಾತಿ ನೀಡಿರುವ ದೂರಿನ ಪ್ರಕಾರ, ಬುಧವಾರ ಮಧ್ಯರಾತ್ರಿ ಏಮ್ಸ್‌ನ ಗೇಟ್‌ ನಂ.2ರ ಬಳಿ ಅವರ ತಂಡವು ಮಹಿಳಾ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸುತ್ತಿತ್ತು. ಈ ವೇಳೆ ಸ್ವಾತಿ ಒಂಟಿಯಾಗಿ ನಿಂತಿದ್ದರು. ಆಗ ವ್ಯಕ್ತಿಯೊಬ್ಬ ಬಂದು ಕಾರು ನಿಲ್ಲಿಸಿ ‘ಬಾ, ಕಾರು ಹತ್ತು’ ಎಂದು ಕರೆದಿದ್ದಾನೆ. ಸ್ವಾತಿ ನಿರಾಕರಿಸಿದಾಗ ಮುಂದೆ ಹೋಗಿ ಮತ್ತೆ ಮರಳಿ ಬಂದು ಇನ್ನೊಮ್ಮೆ ‘ಕಾರು ಹತ್ತು’ ಎಂದು ಕರೆದಿದ್ದಾನೆ. ಆಗ ಸ್ವಾತಿ ಕಾರಿನ ಕಿಟಕಿಯೊಳಗೆ ಕೈಹಾಕಿ ಡ್ರೈವರ್‌ನನ್ನು ಹಿಡಿದು ಬೈಯಲು ಮುಂದಾಗಿದ್ದಾರೆ. ಆಗ ಇದ್ದಕ್ಕಿದ್ದಂತೆ ಕಾರಿನ ಗಾಜು ಏರಿಸಿದ ಚಾಲಕ ಕಾರನ್ನು ಮುಂದೆ ಒಯ್ದಿದ್ದಾನೆ. ಪರಿಣಾಮ, ಕೈ ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಸ್ವಾತಿಯನ್ನು ಕಾರು 10-15 ಮೀಟರ್‌ನಷ್ಟುಎಳೆದೊಯ್ದಿದೆ.

ಮಹಿಳಾ ಆಯೋಗಕ್ಕೆ ಇನ್ನಷ್ಟು ಬಲ: ಸಿಎಂ ಬೊಮ್ಮಾಯಿ ಭರವಸೆ

ನಂತರ ಸ್ವಾತಿ ಆಘಾತದಿಂದ ಫುಟ್‌ಪಾತ್‌ ಬಳಿ ನಿಂತಿದ್ದಾಗ ಪೊಲೀಸ್‌ ಗಸ್ತು ವಾಹನ ಬಂದಿದೆ. ಅವರಿಗೆ ಸ್ವಾತಿ ದೂರು ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಕಾರನ್ನು ಪತ್ತೆಹಚ್ಚಿ ದಕ್ಷಿಣ ದೆಹಲಿಯ ಸಂಗಮ್‌ ವಿಹಾರ್‌ ಪ್ರದೇಶದ ಹರೀಶ್‌ ಚಂದ್ರ ಎಂಬುವನನ್ನು ಬಂಧಿಸಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆಯಾದ ನನಗೇ ಈ ಸ್ಥಿತಿಯಾದರೆ ದೆಹಲಿಯಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಊಹಿಸಿಕೊಳ್ಳಬಹುದು ಎಂದು ಸ್ವಾತಿ ಟ್ವೀಟ್‌ ಮಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!