ನವದೆಹಲಿ: ಸ್ಕೂಟ್ಸ್ ಏರ್ಲೈನ್ಸ್ಗೆ ಸೇರಿದ ವಿಮಾನವೊಂದು30 ಪ್ರಯಾಣಿಕರನ್ನು ಅಮೃತಸರ ವಿಮಾನ ನಿಲ್ದಾಣದಲ್ಲೇ ಬಿಟ್ಟು, 5 ಗಂಟೆ ಮುಂಚಿತವಾಗಿಯೇ ಸಿಂಗಾಪುರಕ್ಕೆ ತೆರಳಿದ ಘಟನೆ ಬುಧವಾರ ನಡೆದಿದೆ. ಈ ಕುರಿತು ವರದಿಗೆ ವಿಮಾನಯಾನ ಸಂಸ್ಥೆಗೆ ಡಿಜಿಸಿಎ ನೋಟಿಸ್ ಜಾರಿ ಮಾಡಿದೆ. ಈ ನಡುವೆ ಘಟನೆ ಕುರಿತು ಸ್ಪಷ್ಟನೆ ನೀಡಿರುವ ಕಂಪನಿ, ವಿಮಾನ ರಾತ್ರಿ 7.55ಕ್ಕೆ ಹೊರಡಬೇಕಿತ್ತು. ಆದರೆ ಅಷ್ಟು ಹೊತ್ತಿಗೆ ಪ್ರತಿಕೂಲ ಹವಾಮಾನದ ವರದಿ ಇದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನ 3.45ಕ್ಕೆ ವಿಮಾನ ಸಂಚಾರ ಕೈಗೊಂಡಿತು. ಪ್ರಯಾಣಿಕರಿಗೆ, ಏಜೆಂಟರಿಗೆ ಈ ಕುರಿತು ಮೊದಲೇ ಮಾಹಿತಿ ನೀಡಲಾಗಿತ್ತು. ಆದರೆ ಕೆಲ ಏಜೆಂಟ್ಗಳು ಮಾಹಿತಿ ಹಂಚಿಕೊಳ್ಳದ ಕಾರಣ ಘಟನೆ ಸಂಭವಿಸಿದೆ ಎಂದು ಹೇಳಿದೆ. ವಾರದ ಹಿಂದೆ ಗೋಫಸ್ಟ್ ವಿಮಾನ ಕೂಡಾ ಬೆಂಗಳೂರಿನಲ್ಲಿ 55 ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ತೆರಳಿತ್ತು.
1,508 ರೂ.ಗೆ ವಿಮಾನದಲ್ಲಿ ಪ್ರಯಾಣಿಸಿ: ಗೋ ಫಸ್ಟ್ನಿಂದ ಇಂಡಿಪೆಂಡೆನ್ಸ್ ಡೇ ಸೇಲ್
ಬೆಂಗಳೂರು ವಿಮಾನ ನಿಲ್ದಾಣದಲ್ಲಿ Happy Journey ಹೇಳೋ ಸ್ವೀಪರ್, ನೀವು ಥ್ಯಾಂಕ್ಸ್ ಹೇಳ್ತೀರಾ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ