2009ರಲ್ಲಿ ಪ್ರಕಟವಾದ ಪಾಕೆಟ್‌ ಸಂವಿಧಾನಕ್ಕೆ ಈಗ ಭಾರಿ ಡಿಮ್ಯಾಂಡ್‌: ರಾಹುಲ್‌ ಎಫೆಕ್ಟ್‌ ಎಂದ ಪ್ರಕಾಶಕ

Published : Jun 17, 2024, 01:38 PM IST
2009ರಲ್ಲಿ ಪ್ರಕಟವಾದ ಪಾಕೆಟ್‌ ಸಂವಿಧಾನಕ್ಕೆ ಈಗ ಭಾರಿ ಡಿಮ್ಯಾಂಡ್‌: ರಾಹುಲ್‌ ಎಫೆಕ್ಟ್‌ ಎಂದ ಪ್ರಕಾಶಕ

ಸಾರಾಂಶ

2024ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪ್ರಚಾರದ ವೇಳೆಯಲ್ಲಿ ಹಲವು ಸಲ ವೇದಿಕೆ ಮೇಲೆ ಪುಟ್ಟ ಸಂವಿಧಾನವನ್ನು ತೋರಿಸಿ, ಮೋದಿ ಸರ್ಕಾರದ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿ ಗಮನ ಸೆಳೆದಿದ್ದರು. ಈ ಪುಟ್ಟ ಪುಸ್ತಕಕ್ಕೆ ಈಗ ಭಾರಿ ಡಿಮಾಂಡ್‌ ಬಂದಿದೆಯಂತೆ.

ಲಖನೌ: 2024ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪ್ರಚಾರದ ವೇಳೆಯಲ್ಲಿ ಹಲವು ಸಲ ವೇದಿಕೆ ಮೇಲೆ ಪುಟ್ಟ ಸಂವಿಧಾನವನ್ನು ತೋರಿಸಿ, ಮೋದಿ ಸರ್ಕಾರದ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿ ಗಮನ ಸೆಳೆದಿದ್ದರು. ಈ 20 ಸೆಂ.ಮೀ ಉದ್ದ ಮತ್ತು 9 ಸೆಂ.ಮೀ ಅಗಲದ ಸಂವಿಧಾನ ಪುಸ್ತಕಕ್ಕೆ ಈಗ ಭಾರಿ ಡಿಮಾಂಡ್‌ ಬಂದಿದೆಯಂತೆ.

ಈ ಕಿರು ಸಂವಿಧಾನ ಪುಸ್ತಕದ ಮೇಲೆ ಜನರು ಇದೀಗ ಹೆಚ್ಚುಆಸಕ್ತಿ ತೋರಿಸುತ್ತಿದ್ದಾರೆ. ಹಿಂದಿಗಿಂತ ಹೆಚ್ಚು ಬೇಡಿಕೆ ಬರುತ್ತಿದೆ ಎಂದು ಪಾಕೆಟ್‌ ಸಂವಿಧಾನ ಪುಸ್ತಕ ಪ್ರಕಟಿಸುವ ಈಸ್ಟರ್ನ್‌ ಬುಕ್ ಕಂಪೆನಿ ಪ್ರಕಾಶಕ ಸುಮಿತ್ ಮಲ್ಲಿಕ್ ‘ಪಿಟಿಐ’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ‘ಮೊದಲ ಆವೃತ್ತಿಯಲ್ಲಿ 700-800 ಕಾಪಿ ಮುದ್ರಿಸಿದ್ದೆವು. 16ನೇ ಆವೃತ್ತಿಯಲ್ಲಿ 5000 6000 ಮುದ್ರಿಸಿದ್ದೆವು. ಈಗ ಮತ್ತಷ್ಟು ಬೇಡಿಕೆ ಬಂದಿದೆ’ ಎಂದು ಮಲಿಕ್‌ ಹೇಳಿದ್ದಾರೆ.

ಐಡಿಯಾ ಬಂದಿದ್ದು ಹೇಗೆ?:

ಪಾಕೆಟ್‌ ಸಂವಿಧಾನ ಮುದ್ರಿಸುವ ಆಲೋಚನೆ ಸುಪ್ರೀಂಕೋರ್ಟ್‌ ವಕೀಲ ಗೋಪಾಲ್ ಶಂಕರ್‌ ನಾರಾಯಣನ್‌ ಎನ್ನುವವರಿಂದ ಬಂದಿತ್ತು. ಅವರ ಸಲಹೆಯಿಂದ ಮೊದಲು ಪಾಕೆಟ್‌ ಸಂವಿಧಾನ ಪ್ರಕಟವಾಯಿತು ಎಂದು ತಿಳಿಸಿದ್ದಾರೆ.

ನಾವು 25 ಕೋಟಿ, ಭಾರತದ ಸಂವಿಧಾನ ಕಿತ್ತು ಶರಿಯಾ ಕಾನೂನು ತರುತ್ತೇವೆ: ಸೋಷಿಯಲ್ ಮೀಡಿಯಾದ ಈ ವೀಡಿಯೋ ಡೀಪ್ ಫೇಕಾ?

ಈ ಪುಸ್ತಕವನ್ನು ಮೊದಲು 2009ರಲ್ಲಿ ಈಸ್ಟರ್ನ್‌ ಬುಕ್ ಕಂಪೆನಿಯವರು ಮೊದಲ ಬಾರಿ ಮುದ್ರಿಸಿದ್ದರು. ಈವರೆಗೆ ಈ ಪುಸ್ತಕ ಸುಮಾರು 16 ಮುದ್ರಣಗಳನ್ನು ಕಂಡಿದೆ. ಇದೇ ಪುಸ್ತಕವನ್ನು ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಬಿಜೆಪಿಯನ್ನು ಟೀಕಿಸುವ ಸಂದರ್ಭದಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಿದ್ದರು. ಬಳಿಕ ಸಣ್ಣ ಗಾತ್ರದ ಸಂವಿಧಾನದ ಬಗ್ಗೆ ಜನರಲ್ಲಿ ಆಸಕ್ತಿ ಹುಟ್ಟಿಕೊಂಡಿದೆ ಎಂದು ಮಲಿಕ್‌ ಹೇಳಿದ್ದಾರೆ.

ಕೇವಲ ರಾಹುಲ್‌ ಗಾಂಧಿ ಮಾತ್ರವಲ್ಲದೇ, ಅನೇಕ ವಕೀಲರು ಮತ್ತು ನ್ಯಾಯಾಧೀಶರು ಇದನ್ನು ಖರೀದಿಸಿದ್ದರು. ಅಲ್ಲದೇ ಗಣ್ಯರ ಉಡುಗೊರೆಯಾಗಿ ಬಳಕೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇದನ್ನು ರಾಮನಾಥ್ ಕೋವಿಂದ್‌ ಅವರು ರಾಷ್ಟ್ರಪತಿಯಾಗಿದ್ದ ಸಂದರ್ಭದಲ್ಲಿ ಉಡುಗೊರೆಯಾಗಿ ನೀಡಿದ್ದರು ಎಂದು ಮಲಿಕ್‌ ತಿಳಿಸಿದ್ದಾರೆ.

Constitution Day: ಸತ್ಯದ ಪರ ನಿಲ್ಲಿ: ವಕೀಲರಿಗೆ ಸುಪ್ರೀಂಕೋರ್ಟ್‌ ಚೀಪ್‌ ರಮಣ್‌ ಮನವಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!