
ನವದೆಹಲಿ: ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದ ವೇಳೆ ಸದನದ ಬಾವಿಗಿಳಿದು ಕಿರುಚಿ ಬೊಬ್ಬೆ ಹೊಡೆದು ತಮ್ಮ ವಿರುದ್ಧವೇ ಪ್ರತಿಭಟನೆ ಮಾಡುತ್ತಿದ್ದ ವಿಪಕ್ಷಗಳ ನಾಯಕರಿಗೆ ಮೋದಿ ಕುಡಿಯಲು ನೀರು ನೀಡಿದ ಅಪರೂಪದ ಘಟನೆ ನಡೆದಿದೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬರು ನೀರು ನಿರಾಕರಿಸಿದರೆ, ಮತ್ತೊಬ್ಬರು ನೀರು ಕುಡಿದು ದಾಹ ತೀರಿಸಿಕೊಂಡರು.
ಮೋದಿ ಭಾಷಣಕ್ಕೆ ಪದೇ ಪದೇ ವಿಪಕ್ಷಗಳ ಅಡ್ಡಿ
ನವದೆಹಲಿ: 18ನೇ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 2.5 ತಾಸಿನ ಭಾಷಣ ಮಾಡುವ ವೇಳೆ ವಿಪಕ್ಷ ನಾಯಕರು ಪದೇ ಪದೇ ಅಡ್ಡಿ ಮಾಡಿದರು. ಮಣಿಪುರ್ ಗೋ, ಮಣಿಪುರ್ ವಾಂಟ್ ಜಸ್ಟಿಸ್,ನೀಟ್ ಜಸ್ಟಿಸ್, ಅಗ್ನಿವೀರ್, ಚುನಾವಣಾ ಆಯೋಗ ಇತ್ಯಾದಿ ಘೋಷಣೆಗಳನ್ನು ಕೂಗುತ್ತಲೇ ತಮ್ಮ ಪ್ರತಿಭಟನೆ ಮುಂದುವರೆಸಿದರು. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಯಾವುದಕ್ಕೂ ಗಮನ ನೀಡದೇ ತಮ್ಮ ಪಾಡಿಗೆ ತಾವು ಭಾಷಣ ಮಾಡಿದರು. ಈ ನಡುವೆ, ಮೋದಿ ಭಾಷಣಕ್ಕೆ ವಿಪಕ್ಷಗಳ ಅಡ್ಡಿ ಖಂಡಿಸಿ ಕೊನೆಗೆ ಖಂಡನಾ ಗೊತ್ತುವಳಿಯನ್ನು ಸದನ ಅಂಗೀಕರಿಸಿತು.
18ನೇ ಲೋಕಸಭೆಯ ಮೊದಲ ಅಧಿವೇಶನ ಮುಂದೂಡಿಕೆ
ನವದೆಹಲಿ: ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ವಂದನಾ ನಿರ್ಣಯದ ಅಂಗೀಕಾರದ ನಂತರ 18 ಲೋಕಸಭೆಯ ಮೊದಲ ಅಧಿವೇಶನವನ್ನು ಮಂಗಳವಾರ ಮುಂದೂಡಲಾಯಿತು. ಇನ್ನು ಬಜೆಟ್ ಅಧಿವೇಶನ ಜು.22ರಂದು ಆರಂಭವಾಗುವ ನಿರೀಕ್ಷೆ ಇದೆ. ಜೂ.24 ರಂದು ಆರಂಭವಾದ ಅಧಿವೇಶನವು 34 ಗಂಟೆಗಳ ಕಾಲ ಏಳು ಅಧಿವೇಶನಗಳಲ್ಲಿ ನಡೆದವು. ಸದನದ ಉತ್ಪಾದಕತೆ ಶೇ.103 ರಷ್ಟಿತ್ತು ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹೇಳಿದರು. ವಂದನಾ ನಿರ್ಣಯದ ಮೇಲಿನ ಚರ್ಚೆಗಳು 18 ಗಂಟೆಗಳ ಕಾಲ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಚರ್ಚೆಯಲ್ಲಿ ಉತ್ತರಿಸಿದರು ಎಂದು ಬಿರ್ಲಾ ತಿಳಿಸಿದರು.
ರಾಹುಲ್ ಗಾಂಧಿ ಟೀಕೆಗಳಿಗೆ ಆ ಕ್ಷಣವೇ ಫಟಾಫಟ್ ಉತ್ತರ: ಲೋಕಸಭೆಯಲ್ಲಿ ಅಪರೂಪದ ಕ್ಷಣ
ಪ್ರಧಾನಿ ಮೋದಿ ವಿಪಕ್ಷಗಳಿಗೆ ನೀರು ಕುಡಿಸಿದ ವೀಡಿಯೋ ಇಲ್ಲಿದೆ ನೋಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ