ರಾಜಸ್ಥಾನದ ಬಂಡಾಯ ನಾಯಕ ಪೈಲಟ್‌ ದಾರಿ ಬದಲಿಸಿದ್ದೇಕೆ?

Published : Aug 11, 2020, 08:07 AM ISTUpdated : Aug 11, 2020, 01:22 PM IST
ರಾಜಸ್ಥಾನದ ಬಂಡಾಯ ನಾಯಕ ಪೈಲಟ್‌ ದಾರಿ ಬದಲಿಸಿದ್ದೇಕೆ?

ಸಾರಾಂಶ

ರಾಜಸ್ಥಾನದ ಬಂಡಾಯ ನಾಯಕ ಮತ್ತೆ ಕಾಂಗ್ರೆಸ್ಸಿಗೆ| ಪೈಲಟಟ್ ಮರಳಿ ಕಾಂಗ್ರೆಸ್‌ಗೆ ಬರಲು ಏನು ಕಾರಣ?

ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿತ ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸೋಮವಾರ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೈಲಟ್‌ರನ್ನು ರಾಉಲ್ ಹಾಗೂ ಪ್ರಿಯಾಂಕಾ ಗಾಂಧಿ ಮನವೊಲಿಸಲು ಯಶಸ್ವಿಯಾಗಿರುವುದಾಗಿಯೂ ತಿಳಿದು ಬಂದಿದೆ. ಹಾಗಾಧ್ರೆ ಇದ್ದಕ್ಕಿದ್ದಂತೆ ಪೈಲಲಟ್ ದಾರಿ ಬದಲಿಸಿದ್ದು ಯಾಕೆ? ಇಲ್ಲಿದೆ 5 ಕಾರಣ.

ಪ್ರಿಯಾಂಕಾ ತಂತ್ರಗಾರಿಕೆ: ಪೈಲಟ್‌ ಮತ್ತೆ ‘ಕೈ’ವಶ!

1. ಜತೆಯಲ್ಲಿ ಬರುತ್ತೇನೆ ಎಂದವರು ಗೆಹ್ಲೋಟ್‌ ಪಾಳಯಕ್ಕೆ ಹಾರಿದರು. ಬೆಂಬಲಕ್ಕೆ ನಿಂತದ್ದು 19 ಶಾಸಕರು ಮಾತ್ರ. ಹೀಗಾಗಿ ಸರ್ಕಾರ ಬೀಳಿಸಲು ಆಗದು ಎಂಬುದು ಸಚಿನ್‌ಗೆ ಖಾತ್ರಿ ಆಯಿತು

2. ಪೈಲಟ್‌ ಏನಾದರೂ ಬಿಜೆಪಿಗೆ ಸೇರಿದರೆ ಮಾಜಿ ಸಿಎಂ ವಸುಂಧರಾ ರಾಜೆ ಬೆಂಬಲಿಗ ಶಾಸಕರು ಅಡ್ಡಮತದಾನ ಮಾಡುವ ಸೂಚನೆ ದೊರಕಿತು

3. ಬಿಜೆಪಿ ಸೇರಬೇಕೋ? ಹೊಸ ಪಕ್ಷ ಕಟ್ಟಬೇಕೋ ಎಂಬ ವಿಚಾರದಲ್ಲಿ ಸ್ಪಷ್ಟನಿಲುವು ತಳೆಯಲು ಸಚಿನ್‌ ವಿಫಲರಾದರು

ರಾಹುಲ್-ಪ್ರಿಯಾಂಕಾ ಭೇಟಿ ಮಾಡಿ ಪೈಲಟ್ ನೀಡಿದ ವಾಗ್ದಾನ!

4. ಬಂಡಾಯ ಸಾರಿದರೂ ನೆಹರು-ಗಾಂಧಿ ಕುಟುಂಬ ಪೈಲಟ್‌ ವಿರುದ್ಧ ಒಂದು ಮಾತನ್ನೂ ಆಡಲಿಲ್ಲ. ಬದಲಿಗೆ ಮನವೊಲಿಕೆ ಕಸರತ್ತು ನಡೆಸಿತು

5. ಬಾಲ್ಯದಿಂದಲೂ ನೆಹರು- ಗಾಂಧಿ ಕುಟುಂಬದ ಜತೆ ಸಚಿನ್‌ಗೆ ಒಡನಾಟ ಹೆಚ್ಚು. ರಾಹುಲ್‌- ಪ್ರಿಯಾಂಕಾ ಜತೆ ಮಾತನಾಡಿದಾಗ ಎಲ್ಲವೂ ಸರಿಹೋಯಿತು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ