ಭಾರತ-ಪಾಕ್ ಕದನವಿರಾಮದ ಹಿಂದಿನ ರಹಸ್ಯ ಬಯಲು! ಎರಡು ದೇಶಗಳಿಗೆ ಟ್ರಂಪ್ ಬೆದರಿಕೆ ಏನು?

Published : May 13, 2025, 05:52 AM ISTUpdated : May 13, 2025, 06:02 AM IST
ಭಾರತ-ಪಾಕ್ ಕದನವಿರಾಮದ ಹಿಂದಿನ ರಹಸ್ಯ ಬಯಲು! ಎರಡು ದೇಶಗಳಿಗೆ ಟ್ರಂಪ್ ಬೆದರಿಕೆ ಏನು?

ಸಾರಾಂಶ

‘ನಮ್ಮ ಮಧ್ಯಸ್ಥಿಕೆಯಲ್ಲೇ ಭಾರತ ಮತ್ತು ಪಾಕಿಸ್ತಾನದ ಕದನ ವಿರಾಮ ನಿರ್ಧಾರವಾಗಿತ್ತು’ ಎಂದು ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ‘ಯುದ್ಧವನ್ನು ನಿಲ್ಲಿಸಿದರೆ ನಿಮ್ಮೊಂದಿಗೆ ವ್ಯಾಪಾರ ಮಾಡುತ್ತೇವೆ. ಇಲ್ಲದಿದ್ದರೆ ಎಲ್ಲ ವ್ಯಾಪಾರವನ್ನು ನಿಲ್ಲಿಸುತ್ತೇವೆ ಎಂದು ಉಭಯ ದೇಶಗಳಿಗೆ ಹೇಳಿದ್ದೆ’ ಎಂದಿದ್ದಾರೆ. ಈ ಮೂಲಕ ಕದನವಿರಾಮಕ್ಕೆ ಅಮೆರಿಕವು ವ್ಯಾಪಾರ ಒಪ್ಪಂದದ ನೀತಿಯನ್ನು ದಾಳವಾಗಿ ಬಳಸಿತ್ತು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಜೊತೆಗೆ ಭಾರತ-ಪಾಕ್‌ ನಡುವಣ ಪರಮಾಣು ದಾಳಿ ತಡೆದಿದ್ದು ತಮ್ಮ ಸಾಧನೆ ಎಂದು ಬಣ್ಣಿಸಿದ್ದಾರೆ.

ವಾಷಿಂಗ್ಟನ್‌: ‘ನಮ್ಮ ಮಧ್ಯಸ್ಥಿಕೆಯಲ್ಲೇ ಭಾರತ ಮತ್ತು ಪಾಕಿಸ್ತಾನದ ಕದನ ವಿರಾಮ ನಿರ್ಧಾರವಾಗಿತ್ತು’ ಎಂದು ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ‘ಯುದ್ಧವನ್ನು ನಿಲ್ಲಿಸಿದರೆ ನಿಮ್ಮೊಂದಿಗೆ ವ್ಯಾಪಾರ ಮಾಡುತ್ತೇವೆ. ಇಲ್ಲದಿದ್ದರೆ ಎಲ್ಲ ವ್ಯಾಪಾರವನ್ನು ನಿಲ್ಲಿಸುತ್ತೇವೆ ಎಂದು ಉಭಯ ದೇಶಗಳಿಗೆ ಹೇಳಿದ್ದೆ’ ಎಂದಿದ್ದಾರೆ. ಈ ಮೂಲಕ ಕದನವಿರಾಮಕ್ಕೆ ಅಮೆರಿಕವು ವ್ಯಾಪಾರ ಒಪ್ಪಂದದ ನೀತಿಯನ್ನು ದಾಳವಾಗಿ ಬಳಸಿತ್ತು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಜೊತೆಗೆ ಭಾರತ-ಪಾಕ್‌ ನಡುವಣ ಪರಮಾಣು ದಾಳಿ ತಡೆದಿದ್ದು ತಮ್ಮ ಸಾಧನೆ ಎಂದು ಬಣ್ಣಿಸಿದ್ದಾರೆ.

ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಟ್ರಂಪ್‌, ‘ಶನಿವಾರ ನನ್ನ ಆಡಳಿತವು ಭಾರತ ಮತ್ತು ಪಾಕಿಸ್ತಾನದ ನಡುವೆ ಪೂರ್ಣ ಮತ್ತು ತಕ್ಷಣದ, ಬಹುಶಃ ಶಾಶ್ವತವಾದ ಕದನ ವಿರಾಮ ಜಾರಿಗೆ ಮಧ್ಯಸ್ಥಿಕೆ ವಹಿಸಿತು. ಇದು ಸಾಕಷ್ಟು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಎರಡು ರಾಷ್ಟ್ರಗಳ ಅಪಾಯಕಾರಿ ಸಂಘರ್ಷವನ್ನು ಕೊನೆಗೊಳಿಸಿತು. ಅವರು ತೀವ್ರವಾಗಿ ಯುದ್ಧ ಮಾಡುತ್ತಿದ್ದರು. ಅದು ನಿಲ್ಲುವ ಲಕ್ಷಣವೇ ಇರಲಿಲ್ಲ. ನಾವು ಅವರ ವ್ಯಾಪಾರಕ್ಕೆ ಸಹಾಯ ಮಾಡಿದ್ದೇವೆ. ಯುದ್ಧವನ್ನು ನಿಲ್ಲಿಸಿದರೆ ನಿಮ್ಮೊಂದಿಗೆ ವ್ಯಾಪಾರ ಮಾಡುತ್ತೇವೆ. ಇಲ್ಲದಿದ್ದರೆ ಎಲ್ಲ ವ್ಯಾಪಾರವನ್ನು ನಿಲ್ಲಿಸುತ್ತೇವೆ ಎಂದು ಹೇಳಿದೆ. ಇದ್ದಕ್ಕಿದ್ದಂತೆ ಎರಡೂ ದೇಶಗಳು ತಾವು ಯುದ್ಧವನ್ನು ನಿಲ್ಲಿಸುತ್ತೇವೆ ಎಂದು ಮುಂದೆ ಬಂದವು. ಜೊತೆಗೆ ವ್ಯಾಪಾರ ಒಪ್ಪಂದವನ್ನು ನಮ್ಮಷ್ಟು ಪರಿಣಾಮಕಾರಿ ಯಾರೂ ಬಳಸಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌! ಇದರ ವಿಶೇಷತೆ ಏನು?

‘ನಾನು ವ್ಯಾಪಾರ ನಿಲ್ಲಿಸುವುದಾಗಿ ಹೇಳಿದ ತಕ್ಷಣ ಅವರು ಯುದ್ಧ ನಿಲ್ಲಿಸುತ್ತೇವೆ ಎಂದರು. ಯುದ್ಧ ನಿಲ್ಲಿಸಲು ಅವರಿಗೆ ಹಲವು ಕಾರಣಗಳಿರಬಹುದು. ಆದರೆ ವ್ಯಾಪಾರ (ಅಮೆರಿಕದೊಂದಿಗೆ) ಬಹುದೊಡ್ಡ ಕಾರಣ. ನಾವು ಭಾರತ ಮತ್ತು ಪಾಕಿಸ್ತಾನದೊಂದಿಗೆ ಬಹಳಷ್ಟು ವ್ಯಾಪಾರ ಮಾಡಲಿದ್ದೇವೆ. ಇದೀಗ ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಶೀಘ್ರದಲ್ಲೇ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲಿದ್ದೇವೆ. ನಾವು ಪರಮಾಣು ಸಂಘರ್ಷವೊಂದನ್ನು ತಪ್ಪಿಸಿದ್ದೇವೆ’ ಎಂದರು.

ಕದನವಿರಾಮ ಈಗ ಅಧಿಕೃತ ಜಾರಿ

ನವದೆಹಲಿ: ಭಾರತ-ಪಾಕ್‌ ಕದನವಿರಾಮ ಈಗ ಅಧಿಕೃತವಾಗಿದೆ. ಸೋಮವಾರ ನಡೆದ ಭಾರತ-ಪಾಕ್‌ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರ ಸಭೆಯಲ್ಲಿ ಇನ್ನು ಗಡಿಯಲ್ಲಿ ಒಂದೂ ಗುಂಡು ಹಾರಿಸಬಾರದು ಎಂಬ ಒಪ್ಪಂದ ಮುಂದುವರಿಸಲು ಹಾಗೂ ಗಡಿಯಲ್ಲಿ ಪರಸ್ಪರ ಸೇನಾ ಕಡಿತ ಮಾಡಲು ಸಮ್ಮತಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ