ಸುಳ್ಳುಸುದ್ದಿ, ದ್ವೇಷದ ಹಾವಳಿ ಜಾಲತಾಣ ಬಳಕೆ ಶೇ.50ರಷ್ಟು ಇಳಿಕೆ

Published : Dec 25, 2023, 07:48 AM ISTUpdated : Dec 25, 2023, 07:49 AM IST
ಸುಳ್ಳುಸುದ್ದಿ, ದ್ವೇಷದ ಹಾವಳಿ  ಜಾಲತಾಣ ಬಳಕೆ ಶೇ.50ರಷ್ಟು ಇಳಿಕೆ

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು, ದ್ವೇಷ ಹಬ್ಬಿಸುವ ಬಳಕೆದಾರರು ಮತ್ತು ಬಾಟ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ 2025ರ ವೇಳೆಗೆ ಸಾಮಾಜಿಕ ಜಾಲತಾಣಗಳ ಬಳಕೆ ಶೇ.50ರಷ್ಟು ಕುಸಿಯಬಹುದು ಎಂದು ಸಮೀಕ್ಷೆಯೊಂದು ತಿಳಿಸಿದೆ.

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು, ದ್ವೇಷ ಹಬ್ಬಿಸುವ ಬಳಕೆದಾರರು ಮತ್ತು ಬಾಟ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ 2025ರ ವೇಳೆಗೆ ಸಾಮಾಜಿಕ ಜಾಲತಾಣಗಳ ಬಳಕೆ ಶೇ.50ರಷ್ಟು ಕುಸಿಯಬಹುದು ಎಂದು ಸಮೀಕ್ಷೆಯೊಂದು ತಿಳಿಸಿದೆ. ಗಾರ್ಟನರ್‌ ಎಂಬ ಸಂಸ್ಥೆ ಈ ಸಮೀಕ್ಷೆ ನಡೆಸಿದ್ದು, ಕಳೆದ 5 ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ಜಾಲತಾಣಗಳು ಸಾಕಷ್ಟು ಬದಲಾವಣೆ ಕಂಡಿವೆ. ಹೀಗಾಗಿ ಶೇ.53ರಷ್ಟು ಜನರು 2025ರ ಹೊತ್ತಿಗೆ ಜಾಲತಾಣವನ್ನು ಸಂಪೂರ್ಣವಾಗಿ ತ್ಯಜಿಸಬಹುದು ಅಥವಾ ತಮ್ಮ ವ್ಯವಹಾರವನ್ನು ಮಿತಗೊಳಿಸಬಹುದು ಎಂದು ಸಮೀಕ್ಷೆ ಹೇಳಿದೆ.

ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿಗೆ ಕೃತಕ ಬುದ್ದಿಮತ್ತೆಯ ಬಳಕೆ ಹೆಚ್ಚಾಗಿದ್ದು, ಇದು ಬಳಕೆದಾರರ ಅನುಭವಕ್ಕೆ ಧಕ್ಕೆ ಉಂಟು ಮಾಡುತ್ತಿದೆ ಎಂದು 10ರಲ್ಲಿ 7ಕ್ಕಿಂತ ಹೆಚ್ಚು ಗ್ರಾಹಕರು ಒಪ್ಪಿದ್ದಾರೆ. ಡಿಜಿಟಲ್‌ ಮಾರ್ಕೆಟಿಂಗ್‌ನಲ್ಲಿ ಹೂಡಿಕೆ ಮಾಡಲು ಸಾಮಾಜಿಕ ಜಾಲತಾಣಗಳು ಪ್ರಮುಖವಾಗಿದೆ. ಆದರೆ ಬಳಕೆದಾರರು ಕಡಿಮೆಯಾಗುವುದು ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. 5 ವರ್ಷಗಳ ಹಿಂದಕ್ಕೆ ಹೋಲಿಸಿದರೆ ತಮ್ಮ ಬದುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ತೆರೆದಿಡುತ್ತಿರುವವರ ಪ್ರಮಾಣ ಕುಸಿಯುತ್ತಿದೆ ಎಂದು ಸಮೀಕ್ಷೆ ಹೇಳಿದೆ.

ಮಂಗಳೂರು: ಹಣ ದ್ವಿಗುಣಗೊಳಿಸುವ ಆ್ಯಪ್‌ನಿಂದ 21 ಲಕ್ಷ ರೂ. ಕಳೆದುಕೊಂಡ ಮಹಿಳೆ ಆತ್ಮಹತ್ಯೆಗೆ ಶರಣು!

ಶಾರುಖ್‌ರ ಡಂಕಿ ರಾಷ್ಟ್ರಪತಿ ಭವನದಲ್ಲಿ ವಿಶೇಷ ಪ್ರದರ್ಶನ

ನವದೆಹಲಿ: ಶಾರುಖ್‌ ಖಾನ್‌ ನಟನೆಯ ಡಂಕಿ ಚಿತ್ರ ಬಿಡುಗಡೆಯಾಗಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ, ಈ ಚಿತ್ರವನ್ನು ಭಾನುವಾರ ರಾಷ್ಟ್ರಪತಿ ಭವನದಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಪ್ರದರ್ಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಹಲವು ಅಧಿಕಾರಿಗಳು ವೀಕ್ಷಿಸಿದರು. ಡಂಕಿ ಅಕ್ರಮ ವಲಸೆ ಹಾಗೂ ದೇಶದ ಬಗೆಗಿನ ಪ್ರೀತಿಯನ್ನು ಹೊಂದಿರುವ ವಿಶೇಷ ಕಥಾ ಹಂದರ ಹೊಂದಿರುವ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಶಾರುಖ್‌ ಖಾನ್‌ರ ಜೊತೆಗೆ ತಾಪ್ಸಿ ಪನ್ನೂ, ವಿಕ್ಕಿ ಕೌಶಲ್, ಬೊಮ್ಮನ್‌ ಇರಾನಿ ನಟಿಸಿದ್ದಾರೆ. ಈ ಚಿತ್ರ ಬಿಡುಗಡೆಯಾದ 3 ದಿನದಲ್ಲಿ 157 ಕೋಟಿ ರು. ಬಾಚಿದೆ.

ಸೋಷಿಯಲ್ ಮೀಡಿಯಾ ಬಿಡಿ… ಯಾಕೆ ನಿಮ್ಮ ಜೀವನವನ್ನು ಪ್ರೈವೆಟ್ ಆಗಿಡಬೇಕು ತಿಳಿಯಿರಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!