ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ದೋಷವಿದೆ: ರಾಹುಲ್‌ ಆರೋಪ

Published : Jan 16, 2025, 07:59 AM IST
ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ 
ದೋಷವಿದೆ: ರಾಹುಲ್‌ ಆರೋಪ

ಸಾರಾಂಶ

ಚುನಾವಣೆಯ ಪಾರದರ್ಶಕತೆಯನ್ನು ಖಚಿತಪಡಿಸುವುದು ಆಯೋಗದ ಕೆಲಸ ಹಾಗೂ ಪವಿತ್ರ ಜವಾಬ್ದಾರಿ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ‘ಭಾರತದ ಚುನಾವಣಾ ಪ್ರಕ್ರಿಯೆಯಲ್ಲಿ ಗಂಭೀರ ದೋಷವಿದ್ದು, ಚುನಾವಣೆ ಪಾರದರ್ಶಕವಾಗಿ ನಡೆಯುವಂತೆ ಚುನಾವಣಾ ಆಯೋಗ ನೋಡಿಕೊಳ್ಳಬೇಕು’ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್‌ನ ನೂತನ ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಅವರು, ‘ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆ ನಡುವೆ ಬರೋಬ್ಬರಿ 1 ಕೋಟಿ ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಇದನ್ನು ಪರಿಶೀಲಿಸಲು ರಾಜ್ಯದ ಮತದಾರರ ಪಟ್ಟಿ ಕೇಳಿದರೆ, ಅದನ್ನು ಕೊಡಲು ಚುನಾವಣಾ ಆಯೋಗ ನಿರಾಕರಿಸುತ್ತಿದೆ’ ಎಂದು ಆರೋಪಿಸಿದ್ದಾರೆ.

ಅಂತೆಯೇ, ‘ಚುನಾವಣೆಯ ಪಾರದರ್ಶಕತೆಯನ್ನು ಖಚಿತಪಡಿಸುವುದು ಆಯೋಗದ ಕೆಲಸ ಹಾಗೂ ಪವಿತ್ರ ಜವಾಬ್ದಾರಿ. ಆದರೆ, ಹರ್ಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾರರ ಪಟ್ಟಿ ನೀಡಲು ಅದು ನಿರಾಕರಿಸುತ್ತಿದೆ’ ಎಂದರು.

ಇದನ್ನೂ ಓದಿ: 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರೋನ್ ಪ್ರತಾಪ್ ಮೊಬೈಲ್‌ 'wallpaper'ನಲ್ಲಿ ಕಿಚ್ಚ ಸುದೀಪ್-ಪ್ರಿಯಾ ಸುದೀಪ್.. ಏನ್ ಇದರ ರಹಸ್ಯ?
ಸತ್ತಿದ್ದಾನೆಂದು ಕುಟುಂಬ ಭಾವಿಸಿತ್ತು, 29 ವರ್ಷಗಳ ನಂತರ SIR ದಾಖಲೆಗಾಗಿ ಮನೆಗೆ ಬಂದ!