ಚಂದ್ರಯಾನ-3 ಇಳಿದ ಸ್ಥಳಕ್ಕೆ ಶಿವಶಕ್ತಿ ಹೆಸರಿಟ್ಟಿದ್ದರಲ್ಲಿ ತಪ್ಪೇನಿಲ್ಲ: ಇಸ್ರೋ ಮುಖ್ಯಸ್ಥ ಸೋಮನಾಥ್‌

Published : Aug 28, 2023, 07:26 AM IST
ಚಂದ್ರಯಾನ-3 ಇಳಿದ ಸ್ಥಳಕ್ಕೆ ಶಿವಶಕ್ತಿ ಹೆಸರಿಟ್ಟಿದ್ದರಲ್ಲಿ ತಪ್ಪೇನಿಲ್ಲ: ಇಸ್ರೋ ಮುಖ್ಯಸ್ಥ ಸೋಮನಾಥ್‌

ಸಾರಾಂಶ

‘ಚಂದ್ರಯಾನ-3 ಯೋಜನೆಯ ಲ್ಯಾಂಡರ್‌ ಇಳಿದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ‘ಶಿವಶಕ್ತಿ’ ಎಂದು ನಾಮಕರಣ ಮಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌ ಹೇಳಿದ್ದಾರೆ.

ತಿರುವನಂತಪುರ: ‘ಚಂದ್ರಯಾನ-3 ಯೋಜನೆಯ ಲ್ಯಾಂಡರ್‌ ಇಳಿದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ‘ಶಿವಶಕ್ತಿ’ ಎಂದು ನಾಮಕರಣ ಮಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌ ಹೇಳಿದ್ದಾರೆ.

ಇಲ್ಲಿನ ಪೌರ್ಣಮಿ ಕಾವು ಭದ್ರಕಾಳಿ ದೇಗುಲಕ್ಕೆ (Bhadrakali Temple) ಭೇಟಿ ನೀಡಿ ಮಾತನಾಡಿದ ಅವರು,‘ಈ ಹೆಸರು ಇಡುವ ಹಿಂದಿನ ಮಹತ್ವವನ್ನು ಪ್ರಧಾನಿ ಅವರು ನಮಗೆ ವಿವರಿಸಿದ್ದಾರೆ. ಹಾಗಾಗಿ ಇದರಲ್ಲಿ ಯಾವುದೇ ತಪ್ಪಿಲ್ಲ. ಅಲ್ಲದೇ ಅವರು ಚಂದ್ರಯಾನ-2 ನೌಕೆ (Chandrayaan 2) ಬಿದ್ದ ಜಾಗಕ್ಕೆ ತಿರಂಗಾ ಪಾಯಿಂಟ್‌ (Tiranga point) ಎಂದು ಹೆಸರಿಟ್ಟಿದ್ದಾರೆ. ಇವರೆರಡೂ ಸಹ ಭಾರತದ ಹೆಸರುಗಳಾಗಿದೆ. ನಾವು ಏನು ಮಾಡುತ್ತಿದ್ದೇವೆ ಎಂಬುದರ ಮಹತ್ವ ನಮಗೆ ಅರಿವಿರಬೇಕು. ದೇಶದ ಪ್ರಧಾನಿಯಾಗಿ ಅವರು ಈ ಪ್ರದೇಶಗಳಿಗೆ ಹೆಸರಿಡುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

Chandrayaan-3 ಯಶಸ್ಸಿನ ಬಳಿಕ ಕೇರಳದ ಭದ್ರಕಾಳಿ ದೇಗುಲದಲ್ಲಿ ಇಸ್ರೋ ಅಧ್ಯಕ್ಷರ ಪ್ರಾರ್ಥನೆ: ಸೂರ್ಯ ಶಿಕಾರಿಗೆ ರೆಡಿ!

ದೇಗುಲ ಭೇಟಿ ಬಗ್ಗೆ ಮಾತನಾಡಿದ ಅವರು,ನಾನು ಜ್ಞಾನವನ್ನು ಬಯಸುವವನು. ಹಾಗಾಗಿಯೇ ಚಂದ್ರನ ಅಧ್ಯಯನ ಮಾಡುತ್ತಿದ್ದೇನೆ. ಬಾಹ್ಯಾಕಾಶದ ಅಧ್ಯಯನ (Space Reserch) ಮಾಡುತ್ತೇನೆ. ಇದರೊಂದಿಗೆ ಆಧ್ಯಾತ್ಮವನ್ನು ಅರಿಯುವುದು ಸಹ ನನ್ನ ಪಯಣವೇ ಆಗಿದೆ. ಹೀಗೆ ಆಂತರಿಕವಾಗಿ ವಿಕಸಿತನಾಗಲು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವೆ, ಧಾರ್ಮಿಕ ಗ್ರಂಥಗಳನ್ನು ಓದುವೆ. ನಮ್ಮ ಬಗ್ಗೆ ತಿಳಿದುಕೊಳ್ಳಲು ಇದರ ಅಧ್ಯಯನ ಅಗತ್ಯವಾಗಿದೆ. ಈ ಎರಡು ವಿಷಯಗಳು ವಿಭಿನ್ನವಾದದ್ದು. ಇದನ್ನು ಬೆರೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಇಸ್ರೋ ಆಧ್ಯಕ್ಷ ಸೋಮನಾಥ್‌ ಬೆನ್ನುತಟ್ಟಿ ಶ್ಲಾಘಿಸಿದ ಪ್ರಧಾನಿ ಮೋದಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!