
ವಿಯೆನ್ನಾ: ಚೀನಾದ ಸೇನಾಪಡೆಗಳೇ ಮೊದಲು ಭಾರತದ ಮೇಲೆ ಅತಿಕ್ರಮಣಕ್ಕೆ ಪ್ರಯತ್ನಿಸಿವೆ ಎಂಬುದಕ್ಕೆ ಉಪಗ್ರಹಗಳ ಬಲವಾದ ಸಾಕ್ಷಿ ಇದೆ. ಹಾಗಾಗಿ ಈ ಕುರಿತಾಗಿ ಚೀನಾ ಭಾರತದ ಮೇಲೆ ಆರೋಪ ಮಾಡಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೋಮವಾರ ಹೇಳಿದ್ದಾರೆ.
ಆಸ್ಟ್ರಿಯಾದ ಸ್ಥಳೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಭಾರತ ಮತ್ತು ಚೀನಾ ಗಡಿಗಳಿಗೆ ಸಂಬಂಧಿಸಿದಂತೆ ಮಾಡಿಕೊಳ್ಳಲಾಗಿರುವ ಒಪ್ಪಂದಗಳನ್ನು ಚೀನಾ ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಹಾಗಾಗಿಯೇ ಗಡಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದ್ದಾರೆ. ‘ಇತ್ತೀಚಿನ ಎಲ್ಲಾ ಘಟನೆಗಳಿಗೂ ಉಪಗ್ರಹಗಳು ಸ್ಪಷ್ಟವಾದ ಸಾಕ್ಷಿಯನ್ನು ಒದಗಿಸುತ್ತವೆ. ಹಾಗಾಗಿ ಗಡಿಯಲ್ಲಿನ ಎಲ್ಲಾ ನಡೆಗಳು ಪಾರದರ್ಶಕವಾಗಿವೆ. ಭಾರತದ ಮೇಲೆ ಚೀನಾ ಸೇನೆ ಮೊದಲು ಅತಿಕ್ರಮಣ ನಡೆಸಿದೆ ಎಂಬುದಕ್ಕೆ ನಮ್ಮ ಬಳಿ ಉಪಗ್ರಹದ ಸಾಕ್ಷಿ ಇದೆ. ಹಾಗಾಗಿ ಭಾರತದ ಮೇಲೆ ಆರೋಪ ಮಾಡಲು ಚೀನಾಗೆ ಅವಕಾಶಗಳಿಲ್ಲ ಎಂದು ಹೇಳಿದ್ದಾರೆ. ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಡಿ.9ರಂದು ಉಭಯ ದೇಶಗಳ ಸೇನೆಯ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದಕ್ಕೂ ಮೊದಲು 2020ರಲ್ಲಿ ಗಲ್ವಾನ್ನಲ್ಲಿ ಸೇನಾಪಡೆಗಳ ನಡುವೆ ಘರ್ಷಣೆ ನಡೆದಿತ್ತು.
ಚೀನಾ ಗಡಿಗೆ ರಾಹುಲ್ ಸೂಚನೆ ಮೇರೆಗೆ ಸೇನೆ ಕಳಿಸಿದ್ದಲ್ಲ: ಜೈಶಂಕರ್ ತಿರುಗೇಟು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ