'ಅಜೆಂಡಾವೇ ಇಲ್ಲದೆ ಪ್ರತಿಭಟನೆ'  ಹೇಮಾ ಮಾಲಿನಿ ಅಖಾಡಕ್ಕೆ

Published : Jan 13, 2021, 04:03 PM ISTUpdated : Jan 13, 2021, 04:16 PM IST
'ಅಜೆಂಡಾವೇ ಇಲ್ಲದೆ ಪ್ರತಿಭಟನೆ'  ಹೇಮಾ ಮಾಲಿನಿ ಅಖಾಡಕ್ಕೆ

ಸಾರಾಂಶ

ಕೇಂದ್ರದ ಕೃಷಿ ಮಸೂದೆಗಳ ವಿರೋಧಿಸಿ ರೈತರ ಪ್ರತಿಭಟನೆ/   ರೈತರಿಗೆ ತಮ್ಮದೆ ಆತ ಅಜೆಂಡಾ ಇಲ್ಲ ಎಂದ ಹೇಮಾಮಾಲಿನಿ/ ಕಾಣದ ಕೈಗಳ ತಾಳಕ್ಕೆ ರೈತರು ಕುಣಿಯುತ್ತಿದ್ದಾರೆ  

ನವದೆಹಲಿ ( ಜ.  13)  ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿದ್ದ ಕೃಷಿ ಕಾಯಿದೆ ತಿದ್ದುಪಡಿ, ಎಪಿಎಂಸಿ ಬಿಲ್ ಮತ್ತು ಭೂಸುಧಾರಣೆ ಕಾಯ್ದೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆದರೆ ರೈತರ ಪ್ರತಿಭಟನೆ ಮಾತ್ರ  ನಿಂತಿಲ್ಲ.  ರೈತರ ಪ್ರತಿಭಟನೆ ಬಗ್ಗೆ ಸಂಸದೆ, ನಟಿ ಹೇಮಾ ಮಾಲಿನಿ ಮಾತನಾಡಿದ್ದಾರೆ.

ತಮಗೆ ಏನು ಬೇಕು ಎನ್ನುವುದು ಗೊತ್ತಿಲ್ಲದೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.. ಕಾಣದ ಕೈಗಳ ತಾಳಕ್ಕೆ ಕುಣಿಯುತ್ತಿದ್ದಾರೆ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.

ಕೃಷಿ ಮಸೂದೆ ಪ್ರತಿ ಸುಟ್ಟು ಹಬ್ಬ ಆಚರಿಸಿದ ರೈತರು! ಹಿಂದೆ ಸರಿಯುವ ಮಾತೇ ಇಲ್ಲ

ತಾವು ಏತಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿದಿಲ್ಲ ಹೀಗಿದ್ದರೂ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ.  ರೈತರು ತಮಗೆ ಏನು ಬೇಕು ಎಂಬುದನ್ನು ಮತ್ತು ಕೃಷಿ ಕಾನೂನುಗಳಿಂದ ಅವರಿಗೆ ಉಂಟಾಗಲಿರುವ ಸಮಸ್ಯೆ ಏನು ಎಂಬುದು  ಕೂಡಾ ಅವರಿಗೆ ತಿಳಿದಿಲ್ಲ. ಯಾರೋ ಹೇಳಿದ ಮಾತು ಕೇಳಿಕೊಂಡು ಧರಣಿ ಮಾಡುತ್ತಿದ್ದಾರೆ ಎನ್ನುವುದು ಹೇಮಾ ಅಭಿಪ್ರಾಯ.

ಪ್ರತಿಭಟನೆ ನಡೆಸುತ್ತಿರುವವರು ನಕಲಿ ರೈತರು ಎಂದು ಬಿಜೆಪಿ ಸಂಸದ ಮುನಿಸ್ವಾಮಿನ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೇಮಾ ಮಾಳಿನಿ ಹಿಂದೊಮ್ಮೆ ಜೋಳದ ಹೊಲದಲ್ಲಿ ಇದ್ದ ಪೋಟೋ ವನ್ನು ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿ ಠಕ್ಕರ್ ನೀಡಿತ್ತು. 

ಸರ್ಕಾರ ಮಾತುಕತೆಗೆ ಕರೆದರೂ ಯಾವುದನ್ನೂ ಒಪ್ಪಿಕೊಳ್ಳುತ್ತಿಲ್ಲ. ರೈತರಿಗೆ ತಮ್ಮದೇ ಆದ ಅಜೆಂಡಾವೂ ಇಲ್ಲ ಎಂದು ಹೇಮಾಮಾಲಿನಿ  ಹೇಳಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!