
ವಿಲಕ್ಷಣ ಘಟನೆಯೊಂದರಲ್ಲಿ, ದರೋಡೆಕೋರರ ಗುಂಪೊಂದು ತಮಿಳು ನಿರ್ದೇಶಕ ಮಣಿಕಂದನ್ ಅವರ ಮಧುರೈ ನಿವಾಸದಿಂದ ಕದ್ದ ರಾಷ್ಟ್ರೀಯ ಪ್ರಶಸ್ತಿ ಪದಕಗಳನ್ನು ಹಿಂದಿರುಗಿಸಿದ್ದೇ ಅಲ್ಲದೆ, ಜೊತೆಗೆ ಕ್ಷಮೆಯಾಚನೆಯ ಟಿಪ್ಪಣಿಯನ್ನು ಸಹ ಕಳುಹಿಸಿದ್ದಾರೆ.
ಕೆಲವು ದಿನಗಳ ಹಿಂದೆ ತಮಿಳುನಾಡಿನ ಮಧುರೈನಲ್ಲಿರುವ ಮಣಿಕಂದನ್ ಅವರ ಉಸಿಲಂಪಟ್ಟಿ ನಿವಾಸದಲ್ಲಿ ಕಳ್ಳತನ ನಡೆದಿತ್ತು. ಈ ಸಮಯದಲ್ಲಿ ಮನೆ ಮಂದಿಯೆಲ್ಲ ಚೆನ್ನೈಗೆ ತೆರಳಿದ್ದರು. ಈ ವೇಳೆ ನಗದು ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದ್ದು, ಪೊಲೀಸರು ಕಳ್ಳರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕೆಲವು ದಿನಗಳ ಬಳಿಕ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾಗ, ಮನೆಯ ಕಾಂಪೌಂಡ್ ಗೋಡೆಗೆ ನೇತಾಡುತ್ತಿದ್ದ ಪಾಲಿಥಿನ್ ಬ್ಯಾಗ್, ಅದರೊಳಗೆ ಮಣಿಕಂದನ್ ಅವರ ರಾಷ್ಟ್ರೀಯ ಪ್ರಶಸ್ತಿ ಪದಕ ಮತ್ತು ಕ್ಷಮೆ ಯಾಚನೆಯ ಟಿಪ್ಪಣಿಯನ್ನು ಕಂಡುಕೊಂಡರು. 'ಸರ್, ದಯವಿಟ್ಟು ನಮ್ಮನ್ನು ಕ್ಷಮಿಸಿ, ನಿಮ್ಮ ಶ್ರಮದ ಫಲ ನಿಮ್ಮದೇ' ಎಂದು ಟಿಪ್ಪಣಿ ಬರೆಯಲಾಗಿದೆ.
ಹೌದು, ಕಳ್ಳರು, ನಿರ್ದೇಶಕರ ಮನೆಯ ಕಳ್ಳತನಕ್ಕೇ ಟ್ವಿಸ್ಟ್ ಕೊಟ್ಟು ಅವರಿಗೆ ಕ್ಷಮೆಯಾಚನೆ ಪತ್ರ ಬರೆದಿದ್ದಾರೆ. ಜೊತೆಗೆ, ರಾಷ್ಟ್ರ ಪ್ರಶಸ್ತಿ ಫಲಕ ಹಿಂದಿರುಗಿಸಿದ್ದಾರೆ.
ಮಣಿಕಂದನ್ ಅವರು 'ಕಾಕ ಮುತ್ತೈ' ಚಿತ್ರದ ನಿರ್ದೇಶನದೊಂದಿಗೆ ಗುರುತಿಸಿಕೊಂಡರು. ಇದು ಅತ್ಯುತ್ತಮ ಮಕ್ಕಳ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ಅವರ ಕೊನೆಯ ಚಿತ್ರ 'ಕಡೈಸಿ ವಿವಸಾಯಿ' ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಪ್ರಸ್ತುತ, ಅವರು ತಮ್ಮ ಮುಂದಿನ OTT ಯೋಜನೆಗಾಗಿ ವಿಜಯ್ ಸೇತುಪತಿ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಯೋಜನೆಯ ವಿವರಗಳನ್ನು ಇನ್ನೂ ಮುಚ್ಚಿಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ