ದಿಲ್ಲಿಯಲ್ಲಿ ವಾಕಿಂಗ್ ಹೋಗಿದ್ದ ಕೈ ಸಂಸದೆ ಸರ ಎಗರಿಸಿದ ಕಳ್ಳರು

Kannadaprabha News   | Kannada Prabha
Published : Aug 05, 2025, 04:39 AM IST
MP Sudha Ramakrishnan

ಸಾರಾಂಶ

ದೆಹಲಿಯ ಚಾಣಕ್ಯಪುರಿಯಲ್ಲಿ ಸೋಮವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಕಾಂಗ್ರೆಸ್‌ ಸಂಸದೆ ಸುಧಾ ರಾಮಕೃಷ್ಣನ್ ಅವರ ಸರವನ್ನು ಕಳ್ಳರು ಎಗರಿಸಿ ಕೈಚಳಕ ತೋರಿದ ಘಟನೆ ನಡೆದಿದೆ.

ನವದೆಹಲಿ: ದೆಹಲಿಯ ಚಾಣಕ್ಯಪುರಿಯಲ್ಲಿ ಸೋಮವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಕಾಂಗ್ರೆಸ್‌ ಸಂಸದೆ ಸುಧಾ ರಾಮಕೃಷ್ಣನ್ ಅವರ ಸರವನ್ನು ಕಳ್ಳರು ಎಗರಿಸಿ ಕೈಚಳಕ ತೋರಿದ ಘಟನೆ ನಡೆದಿದೆ.

ಸದ್ಯ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಿದ್ದ ತಮಿಳುನಾಡಿನ ಮೈಲಾದುತುರೈ ಸಂಸದೆ ಸುಧಾ, ಡಿಎಂಕೆ ಶಾಸಕಿ ರಜಥಿ ಅವರೊಂದಿಗೆ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೂಡ ಅವರು ಪತ್ರ ಬರೆದಿದ್ದು , ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ‘ ಸ್ಕೂಟಿಯಲ್ಲಿ ಹೆಲ್ಮೆಟ್‌ ಧರಿಸಿ ಬಂದಿದ್ದ ವ್ಯಕ್ತಿ ಚಿನ್ನದ ಸರವನ್ನ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಸರವನ್ನು ಕಿತ್ತುಕೊಳ್ಳುವಾಗ ನನ್ನ ಕುತ್ತಿಗೆಗೆ ಗಾಯಗಳಾಗಿವೆ. ಸಂಸದೆಯಾಗಿರುವ ನನ್ನ ಮೇಲೆ ನಡೆದಿರುವ ದಾಳಿ ಆಘಾತಕಾರಿಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿರುವ ಇಂತಹ ಪ್ರದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿರಲು ಹೇಗೆ ಸಾಧ್ಯ?’ ಎಂದು ಪ್ರಶ್ನಿಸಿದ್ದಾರೆ. ಇನ್ನು ‘4 ಗ್ರಾಂ ಚಿನ್ನದ ಸರ ಕಳುವಾಗಿದೆ. ದಯವಿಟ್ಟು ಹುಡುಕಿಕೊಡಿ’ ಎಂದು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟ್ರಂಪ್‌ಗೆ ಮುಯ್ಯಿಗೆ ಮುಯ್ಯಿ, ಪುಟಿನ್‌ ಜೊತೆ ಭಾಯಿ ಭಾಯಿ!
ಇನ್ನೂ 10 ದಿನಗಳ ಕಾಲ ಇಂಡಿಗೋಳು