ಅಯೋಧ್ಯೆಯಲ್ಲಿ ಕಳ್ಳರ ಹಾವಳಿ; ರಾಮಪಥದ ₹50 ಲಕ್ಷ ಮೌಲ್ಯದ 3800 ಬಿದಿರಿನ ಬೀದಿ ದೀಪ, 36 ಪ್ರಾಜೆಕ್ಟರ್‌ ಕಳವು!

Published : Aug 15, 2024, 08:03 AM ISTUpdated : Aug 16, 2024, 08:31 AM IST
 ಅಯೋಧ್ಯೆಯಲ್ಲಿ ಕಳ್ಳರ ಹಾವಳಿ; ರಾಮಪಥದ ₹50 ಲಕ್ಷ ಮೌಲ್ಯದ 3800 ಬಿದಿರಿನ ಬೀದಿ ದೀಪ, 36 ಪ್ರಾಜೆಕ್ಟರ್‌ ಕಳವು!

ಸಾರಾಂಶ

ರಾಮಮಂದಿರ ಇರುವ ಅಯೋಧ್ಯೆಯಲ್ಲಿ ಕಳ್ಳರ ಕಾಟ ಆರಂಭವಾಗಿದ್ದು, 50 ಲಕ್ಷ ರು.ಗೂ ಹೆಚ್ಚಿನ ಬಿದಿರಿನ ಬೀದಿ ದೀಪಗಳು ಹಾಗೂ 36 ಪ್ರಾಜೆಕ್ಟರ್‌ ದೀಪಗಳು ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ದೀಪ ಅಳವಡಿಸಿದ್ದ ಕಂಪನಿ ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

Ayodhya Ram Path News  ರಾಮಮಂದಿರ ಇರುವ ಅಯೋಧ್ಯೆಯಲ್ಲಿ ಕಳ್ಳರ ಕಾಟ ಆರಂಭವಾಗಿದ್ದು, 50 ಲಕ್ಷ ರು.ಗೂ ಹೆಚ್ಚಿನ ಬಿದಿರಿನ ಬೀದಿ ದೀಪಗಳು ಹಾಗೂ 36 ಪ್ರಾಜೆಕ್ಟರ್‌ ದೀಪಗಳು ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ದೀಪ ಅಳವಡಿಸಿದ್ದ ಕಂಪನಿ ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ರಾಮ ಮಂದಿರ ನಿರ್ಮಾಣದ ವೇಳೆ ಇಲ್ಲಿನ ರಾಮಪಥ ಹಾಗೂ ಭಕ್ತಿ ಪಥಗಳನ್ನು 6400 ಬಿದಿರಿನ ಬೀದಿ ದೀಪಗಳು (ಬಿದಿರಿನ ಬುಟ್ಟಿಯಲ್ಲಿ ಬಲ್ಬ್‌ ಹಾಕಿ ಇರಿಸುವ ಅಲಂಕಾರಕ ದೀಪ) ಹಾಗೂ 96 ಪ್ರಾಜೆಕ್ಟರ್‌ ದೀಪಗಳನ್ನು ಅಳವಡಿಸಲಾಗಿತ್ತು. ಮಾ.19ರವರೆಗೂ ಈ ದೀಪಗಳು ಎಂದಿನಂತೆಯೇ ಇದ್ದವು. ಆದರೆ ಮೇ 9ರಂದು ನಡೆದ ಪರಿಶೀಲನೆ ವೇಳೆ ಇವುಗಳಲ್ಲಿ 3800 ಬಿದಿರಿನ ದೀಪಗಳು ಮತ್ತು 36 ಪ್ರಾಜೆಕ್ಟರ್‌ ದೀಪಗಳು ಕಾಣೆಯಾಗಿವೆ ಎಂದು ದೀಪ ಅಳವಡಿಸಿದ್ದ ಯಶ್‌ ಎಂಟರ್‌ಪ್ರೈಸಸ್‌ನ ಪ್ರತಿನಿಧಿ ಶೇಖರ್‌ ಶರ್ಮಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಹೊಸ ಟೆಕ್ಕಿಗಳಿಗೆ ಕೇವಲ ಮಾಸಿಕ ₹21 ಸಾವಿರ ಸಂಬಳ ಆಫರ್‌ ನೀಡಿದ ಕಂಪನಿ! ನಿರುದ್ಯೋಗಿಯಾಗಿರುವುದೇ ವಾಸಿ ಎಂದ ನೆಟ್ಟಿಗರು!

ಆದರೆ ಮೇ ತಿಂಗಳಲ್ಲಿಯೇ ಕಳವಾಗಿದ್ದು ಗೊತ್ತಿದ್ದರೂ ಆಗಸ್ಟ್‌ನಲ್ಲಿ ದೂರು ನೀಡಿದ್ದೇಕೆ ಎಂಬ ಪ್ರಶ್ನೆಯೂ ಉದ್ಧವಿಸಿದೆ.

ರಾಮ ಮಂದಿರ ನಿರ್ಮಾಣದ ವೇಳೆ ಅಯೋಧ್ಯೆಯನ್ನು ಅಲಂಕರಿಸುವ ಸಲುವಾಗಿ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಬೀದಿ ದೀಪಗಳ ಅಳವಡಿಕೆಗೆ ಯಶ್‌ ಕಂಪನಿಗೆ ಗುತ್ತಿಗೆ ನೀಡಿತ್ತು. ಅದರನ್ವಯ ಯಶ್‌ ಎಂಟರ್‌ಪ್ರೈಸಸ್‌ ಬೀದಿ ದೀಪ ಅಳವಡಿಸಿತ್ತು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!