'ಎಚ್ಚರ.. 3ನೇ ಅಲೆ ಸನ್ನಿಹಿತ: ಪ್ರವಾಸ, ಯಾತ್ರೆ, ಧಾರ್ಮಿಕ ಉತ್ಸವ ಮುಂದೂಡಿ!'

Published : Jul 13, 2021, 07:14 AM IST
'ಎಚ್ಚರ.. 3ನೇ ಅಲೆ ಸನ್ನಿಹಿತ: ಪ್ರವಾಸ, ಯಾತ್ರೆ, ಧಾರ್ಮಿಕ ಉತ್ಸವ ಮುಂದೂಡಿ!'

ಸಾರಾಂಶ

* 2ನೇ ಅಲೆ ಬಳಿಕ ​ಜನರ ನಿರ್ಲಕ್ಷ್ಯ ನೋಡಿದರೆ ನೋವಾಗ್ತಿದೆ * ಎಚ್ಚರ.. 3ನೇ ಅಲೆ ಸನ್ನಿಹಿತ: ಐಎಂಎ * ಪ್ರವಾಸ, ಯಾತ್ರೆ, ಧಾರ್ಮಿಕ ಉತ್ಸವಗಳನ್ನು ಮುಂದೂಡಿ

ನವದೆಹಲಿ(ಜು.13): ಕೊರೋನಾ 2ನೇ ಅಲೆ ಇಳಿಕೆಯ ನಂತರ ಜನರು ಪ್ರವಾಸಿ ತಾಣಗಳಿಗೆ ಮುಗಿಬೀಳುತ್ತಿರುವ ಬಗ್ಗೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆತಂಕ ವ್ಯಕ್ತಪಡಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದಕ್ಕೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದೆ.

‘3ನೇ ಅಲೆ ಬರುವುದು ಸನ್ನಿಹಿತ. ಜಗತ್ತಿನಲ್ಲಿ ಲಭ್ಯವಿರುವ ಸಾಕ್ಷ್ಯಗಳನ್ನು ನೋಡಿದರೆ ಹಾಗೂ ಯಾವುದೇ ಸಾಂಕ್ರಾಮಿಕ ರೋಗದ ಇತಿಹಾಸವನ್ನು ಗಮನಿಸಿದರೆ ಕೊರೋನಾದ 3ನೇ ಅಲೆ ಕೂಡ ಬಂದೇ ಬರುತ್ತದೆ ಎಂದು ಅನುಮಾನವಿಲ್ಲದೆ ಹೇಳಬಹುದು. ದೇಶದ ವೈದ್ಯಕೀಯ ಸಮುದಾಯದ ಅವಿರತ ಪರಿಶ್ರಮ ಹಾಗೂ ರಾಜಕೀಯ ನಾಯಕತ್ವದ ಇಚ್ಛಾಶಕ್ತಿಯಿಂದಾಗಿ ಈಗಷ್ಟೇ ಎರಡನೇ ಅಲೆಯಿಂದ ಹೊರಗೆ ಬಂದಿದ್ದೇವೆ. ಈ ಹಂತದಲ್ಲಿ ಜನರು ಹಾಗೂ ಸರ್ಕಾರಗಳು ಕೋವಿಡ್‌ ಜೊತೆ ಮಾಡಿಕೊಳ್ಳುತ್ತಿರುವ ರಾಜಿಯನ್ನು ನೋಡಿದರೆ ಆತಂಕವಾಗುತ್ತದೆ’ ಎಂದು ಐಎಂಎ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

‘ಪ್ರವಾಸ, ಯಾತ್ರೆ, ಧಾರ್ಮಿಕ ಉತ್ಸವಗಳು ನಮಗೆ ಬೇಕು ಎಂಬುದು ನಿಜ. ಆದರೆ ಇನ್ನೂ ಕೆಲ ತಿಂಗಳು ಅವುಗಳನ್ನು ಮುಂದೂಡಬೇಕು. ಸರಿಯಾಗಿ ಎಲ್ಲರಿಗೂ ಲಸಿಕೆ ಸಿಗದೆ ಸಾಮೂಹಿಕವಾಗಿ ಜನರು ಒಂದೆಡೆ ಸೇರಲು ಅವಕಾಶ ಮಾಡಿಕೊಟ್ಟರೆ ಅಲ್ಲಿ ಸೇರುವ ಜನರೆಲ್ಲ 3ನೇ ಅಲೆಗೆ ಸೂಪರ್‌ ಸೆ್ೊ್ರಡರ್‌ಗಳಾಗಬಹುದು. ಕಳೆದ ಒಂದೂವರೆ ವರ್ಷದ ಅನುಭವದಲ್ಲಿ ಹೇಳುವುದಾದರೆ ಎಲ್ಲರಿಗೂ ಲಸಿಕೆ ನೀಡುವುದು ಹಾಗೂ ಕೋವಿಡ್‌ ಸನ್ನಡತೆಯನ್ನು ಅಳವಡಿಸಿಕೊಳ್ಳುವುದರಿಂದ 3ನೇ ಅಲೆಯ ತೀವ್ರತೆಯನ್ನು ಕಡಿಮೆ ಮಾಡಲು ಸಾಧ್ಯವಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು’ ಎಂದು ಐಎಂಎ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ