
ನವದೆಹಲಿ(ಜೂ.23): 2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು ದೆಹಲಿಯಲ್ಲಿ ತೃತೀಯ ರಂಗ ರಚನೆಯ ಯತ್ನ ಆರಂಭವಾಗಿರುವಾಗಲೇ, ತೃತೀಯ ರಂಗ ಎಂಬುದು ಒಂದು ವಿಫಲ ಪ್ರಯತ್ನ. ಇತಿಹಾಸ ಗಮನಿಸಿದರೆ ಈ ಥರದ ಯತ್ನಗಳೆಲ್ಲ ಫಲ ನೀಡಿಲ್ಲ ಎಂಬುದು ವಿದಿತವಾಗುತ್ತದೆ ಎಂದು ಚುನಾವಣಾ ರಣನೀತಿ ತಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ತೃತೀಯ ರಂಗ ರಚನೆಯ ನೇತೃತ್ವ ವಹಿಸಿರುವ ಎನ್ಸಿಪಿಯ ಶರದ್ ಪವಾರ್ ಅವರ ಹಿಂದಿನ ಶಕ್ತಿ ಸ್ವತಃ ಪ್ರಶಾಂತ್ ಕಿಶೋರ್ ಎಂದು ಬಣ್ಣಿತವಾಗಿರುವಾಗಲೇ ಅವರೇ ನೀಡಿರುವ ಈ ಹೇಳಿಕೆ ಸಾಕಷ್ಟುಕುತೂಹಲ ಮೂಡಿಸಿದೆ.
ಟೀವಿ ಚಾನಲ್ ಒಂದರ ಜತೆ ಮಾತನಾಡಿದ ಪ್ರಶಾಂತ್, ‘ಮೋದಿ ನೇತೃತ್ವದ ಬಿಜೆಪಿಗೆ 3ನೇ ಅಥವಾ 4ನೇ ರಂಗವು ಸವಾಲು ಹಾಕಲಿದೆ ಎಂದು ನಾನು ನಂಬುವುದಿಲ್ಲ. ಇತಿಹಾಸ ಈಗಾಗಲೇ ಎಲ್ಲವನ್ನೂ ತೋರಿಸಿದೆ. ಜೊತೆಗೆ, ಮಂಗಳವಾರ ನಡೆದ ಪ್ರತಿಪಕ್ಷಗಳ ಸಭೆಗೂ ತೃತೀಯ ರಂಗ ರಚನೆ ಯತ್ನಕ್ಕೂ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ ‘ಮಂಗಳವಾರ ವಿಪಕ್ಷಗಳ ಸಭೆ ನಡೆಸಿದ ಶರದ್ ಪವಾರ್ ಜತೆ ನಾನು ರಾಜಕೀಯ ವಿದ್ಯಮಾನ ಹಾಗೂ 2024ರ ಚುನಾವಣೆ ಬಗ್ಗೆ ಚರ್ಚಿಸಿದೆ’ ಎಂದು ಅವರು ಖಚಿತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ