ಆದಿ ದ್ರಾವಿಡ ಹಾಸ್ಟೆಲ್‌ನಲ್ಲಿ ಉಪಹಾರ ಸೇವಿಸಿ 30 ವಿದ್ಯಾರ್ಥಿನಿಯರು ಅಸ್ವಸ್ಥ

Published : Jun 14, 2025, 01:12 PM IST
hotel food

ಸಾರಾಂಶ

ತಂಜಾವೂರು ಜಿಲ್ಲೆಯ ಪಟ್ಟುಕೊಟ್ಟೈನಲ್ಲಿರುವ ಸರ್ಕಾರಿ ಆದಿ ದ್ರಾವಿಡ ಬಾಲಕಿಯರ ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿದ ಬಳಿಕ ಸುಮಾರು 30 ವಿದ್ಯಾರ್ಥಿನಿಯರು ಅಸ್ವಸ್ಥರಾದರು. ಫುಡ್‌ ಪಾಯಿಸನ್ ಆಗಿ ಈ ಘಟನೆ ನಡೆದಿದ್ದು, ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ತಮಿಳುನಾಡು: ತಂಜಾವೂರು ಜಿಲ್ಲೆಯ ಪಟ್ಟುಕೊಟ್ಟೈನಲ್ಲಿ ಇರುವ ಸರ್ಕಾರಿ ಆದಿ ದ್ರಾವಿಡ ಬಾಲಕಿಯರ ಹಾಸ್ಟೆಲ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಉಪಾಹಾರ ಸೇವಿಸಿದ ಬಳಿಕ ಸುಮಾರು 30 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ನಡೆದಿದೆ. ಫುಡ್‌ ಪಾಯಿಸನ್ ಆಗಿ ಈ ಘಟನೆ ನಡೆದಿದ್ದು, ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರ ಮಾಹಿತಿಯ ಪ್ರಕಾರ, ಈ ಹಾಸ್ಟೆಲ್ ಕಳೆದ ಮೂರು ವರ್ಷಗಳಿಂದ ಖಾಸಗಿ ಮದುವೆ ಮಂಟಪದಲ್ಲಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿಯ ವಿದ್ಯಾರ್ಥಿನಿಯರು ಪಟ್ಟುಕೊಟ್ಟೈನಲ್ಲಿರುವ ಸರ್ಕಾರಿ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಶುಕ್ರವಾರ ಬೆಳಿಗ್ಗೆ ಉಪಾಹಾರಕ್ಕೆ ಪುಳಿಯೊಗರೆ ಮತ್ತು ಆಲೂಗಡ್ಡೆ ಫ್ರೈ ವಿತರಿಸಲಾಗಿತ್ತು. ಉಪಾಹಾರ ಸೇವಿಸಿದ ನಂತರ ವಿದ್ಯಾರ್ಥಿನಿಯರು ಎಂದಿನಂತೆ ಶಾಲೆಗೆ ಹಾಜರಾದರು. ಆದರೆ ಬೆಳಿಗ್ಗೆ ಸುಮಾರು 11 ಗಂಟೆಯ ಸುಮಾರಿಗೆ ಆರು ವಿದ್ಯಾರ್ಥಿನಿಯರು ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡರು. ಕೆಲವರು ಮೂರ್ಛೆಹೋದರು. ಇದನ್ನು ಗಮನಿಸಿದ ಶಿಕ್ಷಕರು ತಕ್ಷಣ ಅವರನ್ನು ಪಟ್ಟುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಆಹಾರದಲ್ಲಿ ಸಮಸ್ಯೆಯಾಗಿದೆ ಎಂಬುದು ಕಂಡುಬಂದಿದೆ.

ಶೀಘ್ರದಲ್ಲೇ ಉಳಿದ 22 ವಿದ್ಯಾರ್ಥಿನಿಯರು ಸಹ ವಾಂತಿ, ತಲೆ ತಿರುಗುವಿಕೆ ಮತ್ತು ಹೊಟ್ಟೆನೋವು ಸೇರಿದಂತೆ ಕೆಲವು ಲಕ್ಷಣಗಳನ್ನು ತೋರಿದ ಹಿನ್ನೆಲೆ, ಅವರನ್ನು ಕೂಡ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ತಪಾಸಣೆಯಲ್ಲಿ ಇದು ಆಹಾರ ವಿಷಯುಕ್ತವಾಗಿ ಸಂಭವಿಸಿದೆ ಎಂಬುದು ದೃಢಪಟ್ಟಿದೆ. ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿದ್ದು, ಸಂಜೆ ಹೊತ್ತಿಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಘಟನೆ ಕುರಿತು ತನಿಖೆ ಆರಂಭವಾಗಿದ್ದು, ಪಟ್ಟುಕೊಟ್ಟೈ ಉಪ ವಿಭಾಗಾಧಿಕಾರಿ (ಆರ್‌ಡಿಒ) ಶಂಕರ್, ತಹಶೀಲ್ದಾರ್ ಧರ್ಮೇಂದ್ರ ಮತ್ತು ಡಿಎಸ್‌ಪಿ ರವಿಚಂದ್ರನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸ್ಥಿತಿಗತಿಯನ್ನಿರೀಕ್ಷಿಸಿದರು. ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ತಕ್ಷಣವೇ ಹಾಸ್ಟೆಲ್‌ನಲ್ಲಿ ಉಪಯೋಗಿಸಲಾದ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಕಳುಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್