
ಕೊಯ್ಮತ್ತೂರು(ಮೇ.20): ತಮಿಳುನಾಡಿನ ಕೊಯ್ಮತ್ತೂರಿನಲ್ಲಿ ಕೊರೋನಾ ವೈರಸ್ನಿಂದ ಜನರ ರಕ್ಷಣೆಗೆ ಕೊರೋನಾ ದೇವಿ ದೇವಾಲಯವೊಂದನ್ನು ಸ್ಥಾಪಿಸಲಾಗಿದೆ. ಕಾಮಾಚಿಪುರಿ ಅಧೀನಂ ಪೀಠ ಕೊರೋನಾ ದೇವಿಗೆ ಮೀಸಲಾದ ದೇವಾಲಯವನ್ನು ನಿರ್ಮಿಸಿದ್ದು, ಅರ್ಚಕರನ್ನೂ ನೇಮಿಸಿದೆ.
ಈ ದೇವಾಲಯದಲ್ಲಿ 48 ದಿನಗಳ ಕಾಲ ವಿಶೇಷ ಪ್ರಾರ್ಥನೆ ಹಾಗೂ ಪೂಜೆಗಳು ನಡೆಯಲಿವೆ. ಜೊತೆ ಮಹಾ ಯಾಗವನ್ನು ಆಯೋಜಿಸಲಾಗುವುದು ಎಂದು ಅಧೀನಂನ ಮುಖ್ಯಸ್ಥ ಶಿವಲಿಂಗೇಶ್ವರ್ ಹೇಳಿದ್ದಾರೆ.
ತಮಿಳುನಾಡಿನಲ್ಲಿ ರೋಗ ಹಾಗೂ ಸಾಂಕ್ರಾಮಿಕದ ಸಂದರ್ಭದಲ್ಲಿ ದೇವಿಯ ಆರಾದನೆಗೆ ದೇವಸ್ಥಾನಗಳನ್ನು ನಿರ್ಮಿಸುವುದು ಹೊಸದೇನಲ್ಲ.
ಈ ಮುನ್ನ ಪ್ಲೇಗ್ ಮಹಾಮಾರಿ ಕಾಣಿಸಿಕೊಂಡ ಸಂದರ್ಭದಲ್ಲಿ ಕೊಯ್ಮತ್ತೂರಿನಲ್ಲಿ ಪ್ಲೇಗ್ ಮಾರಿಯಮ್ಮ ದೇವಾಲಯವನ್ನು ನಿರ್ಮಿಸಲಾಗಿತ್ತು. ಸಾಂಕ್ರಾಮಿಕದ ಸಂದರ್ಭದಲ್ಲಿ ದೇವಿ ನಮ್ಮನ್ನು ರಕ್ಷಿಸುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ