70 ವರ್ಷದಲ್ಲಿ ಏನ್ಮಾಡಿದ್ರಿ? ಕೈ ನಾಯಕಿಯ ಉತ್ತರಕ್ಕೆ ಬಿಜೆಪಿಗರು ಫುಲ್ ಸೈಲೆಂಟ್!

Published : Feb 07, 2020, 02:57 PM ISTUpdated : Feb 07, 2020, 05:08 PM IST
70 ವರ್ಷದಲ್ಲಿ ಏನ್ಮಾಡಿದ್ರಿ? ಕೈ ನಾಯಕಿಯ ಉತ್ತರಕ್ಕೆ ಬಿಜೆಪಿಗರು ಫುಲ್ ಸೈಲೆಂಟ್!

ಸಾರಾಂಶ

ಬಿಜೆಪಿ ವಿರುದ್ಧ ಗುಡುಗಿದ ಹಿಮಾಚಲ ಪ್ರದೇಶದ ಕಾಂಗ್ರೆಸ್ ರಾಜ್ಯಸಭಾ ಸದಸ್ಯೆ| 70 ವರ್ಷದಲ್ಲಿ ಏನ್ಮಾಡಿದ್ರಿ ಎಂದು ಪ್ರಶ್ನಿಸಿದವ್ರಿಗೆ ಕೊಟ್ರು ಉತ್ತರ| ಮೋದಿ ವಿರುದ್ಧ ಧ್ವನಿ ಎತ್ತಿದವರಿಗೆ ದೇಶದ್ರೋಹಿ ಪಟ್ಟ ಕಟ್ತೀರಾ? ವಿಪ್ಲವ್ ಠಾಕೂರ್ ಉತ್ತರಕ್ಕೆ ಬಿಜೆಪಿಗರು ಫುಲ್ ಸೈಲೆಂಟ್

ನವದೆಹಲಿ[ಫೆ.07]: ಕಾಂಗ್ರೆಸ್ ನಾಯಕಿ ವಿಪ್ಲವ್ ಠಾಕೂರ್ ಗುರುವಾರದಂದು ರಾಜ್ಯಸಭೆಯಲ್ಲಿ ಮಾತನಾಡಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದ ಬಿಜೆಪಿಗರಿಗೆ ಖಾರವಾಗಿಯೇ ಉತ್ತರಿಸಿರುವ ನಾಯಕಿ, ಏನೇನು ಸಾಧನೆ ಮಾಡಿದ್ದೇವೆಂಬುವುದನ್ನು ವಿವರಿಸಿದ್ದಾರೆ. ವಿಪ್ಲವ್ ಈ ಮಾತಿಗೆ ಬಿಜೆಪಿ ನಾಯಕರು ಫುಲ್ ಸೈಲೆಂಟ್ ಆಗಿದ್ದಾರೆ.

ಹೌದು ರಾಜ್ಯಸಭೆಯಲ್ಲಿ ಬಿಜೆಪಿ ವಿರುದ್ಧ ಗುಡುಗಿದ ಹಿಮಾಚಲ ಪ್ರದೇಶದ ಕೈ ನಾಯಕಿ ವಿಪ್ಲವ್ 'ಅಟಲ್ ಬಿಹಾರಿ ವಾಜಪೇಯಿ ಮಾಜಿ ಪಿಎಂ ಜವಾಹರ ಲಾಲ್ ನೆಹರೂ ವಿರುದ್ಧ ಮಾತನಾಡಿದಾಗ ಯಾರೂ ಅವರನ್ನು ದೇಶದ್ರೋಹಿ ಅನ್ನಲಿಲ್ಲ. ಆದರೆ ಇಂದು ಸರ್ಕಾರದ ವಿರುದ್ಧ ಧ್ವನಿ ಎತ್ತುವವರನ್ನು ಹತ್ತಿಕ್ಕಲಾಗುತ್ತಿದೆ. ಅವರಿಗೆ ದೆಶದ್ರೋಹಿ ಎಂಬ ಪಟ್ಟ ಕಟ್ಟಲಾಗುತ್ತಿದೆ. ಇಂದು ಬಿಜೆಪಿ ಮಾತು ಮಾತಿಗೂ ಪಾಕಿಸ್ತಾನದ ಹೆಸರೆತ್ತುತ್ತಿದೆ. ಕಳೆದ 70 ವರ್ಷಗಳಲ್ಲಿ ಬಹುಶಃ ನಾವೇ ಅಷ್ಟು ಬಾರಿ ಪಾಕಿಸ್ತಾನದ ಹೆಸರು ಬಳಸಿರಲಿಲ್ಲವೇನೋ' ಎಂದಿದ್ದಾರೆ.

ಇದೇ ವೇಳೆ ಬಿಜೆಪಿ ದೇಶವನ್ನು ಧರ್ಮದ ಆಧಾರದಲ್ಲಿ ಹೋಳು ಮಾಡುತ್ತಿದೆ ಎಂದು ಆರೋಪಿಸಿರುವ ವಿಪ್ಲವ್ ದೇಶದಲ್ಲಿ ಸೌಹಾರ್ದ ಭಾವನೆ ಮೂಡಿಸಿ ಜನರನ್ನು ಒಗ್ಗೂಡಿಸುವ ಪ್ರಯತ್ನ ಮಾಡಲು ಮನವಿ ಮಾಡಿಕೊಂಡಿದ್ದಾರೆ. 
 

ಫೆಬ್ರವರಿ 6ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?