ಮತ್ತೆ 79 ವಿಮಾನಗಳಿಗೆ ಹುಸಿಬಾಂಬ್‌ ಬೆದರಿಕೆ: ಕಿಡಿಗೇಡಿಗಳ ಕೃತ್ಯಕ್ಕೆ 600 ಕೋಟಿ ನಷ್ಟ!

Published : Oct 23, 2024, 08:26 AM IST
ಮತ್ತೆ 79 ವಿಮಾನಗಳಿಗೆ ಹುಸಿಬಾಂಬ್‌ ಬೆದರಿಕೆ: ಕಿಡಿಗೇಡಿಗಳ ಕೃತ್ಯಕ್ಕೆ 600 ಕೋಟಿ ನಷ್ಟ!

ಸಾರಾಂಶ

ಕಳೆದ 9 ದಿನಗಳ ಅವಧಿಯಲ್ಲಿ ವಿಮಾನಗಳಿಗೆ ಕಿಡಿಗೇಡಿಗಳು ಹುಸಿಬಾಂಬ್ ಕರೆ ಮಾಡಿರುವುದರಿಂದ 170 ವಿಮಾನಗಳ ಹಾರಾಟಕ್ಕೆ ತೊಂದರೆಯಾಗಿದೆ. ಇದರಿಂದ ವಿಮಾನಯಾನ ಕಂಪನಿಗಳಿಗೆ 600 ಕೋಟಿ ರು. ನಷ್ಟವಾಗಿದೆ. 

ನವದೆಹಲಿ(ಅ.23):  ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕುವ ಕುಕೃತ್ಯಗಳು ಮಂಗಳವಾರವೂ ಮುಂದುವರಿದಿವೆ. ಭಾರತದ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ 79 ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳಿಗೆ ಸೋಮವಾರ ರಾತ್ರಿಯಿಂದ ಮಂಗಳವಾರ ರಾತ್ರಿವರೆಗೆ ಬಾಂಬ್ ಬೆದರಿಕೆ ಸಂದೇಶಗಳನ್ನು ರವಾನಿಸಲಾಗಿದೆ. ಇದರೊಂದಿಗೆ ಕಳೆದ 9 ದಿನದಲ್ಲಿ 170 ಬೆದರಿಕೆಗಳು ಬಂದಂತಾಗಿದೆ. ಇಂಡಿಗೋ (23), ವಿಸ್ತಾರ(21), ಆಕಾಸಾ (12) ಏರ್ ಇಂಡಿಯಾ (23) ವಿಮಾನಗಳಿಗೆ ಈ ಸಂದೇಶ ಬಂದಿವೆ. 

ಇವುಗಳಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನ ಕೂಡ ಸೇರಿವೆ. ಅಂತಾರಾಷ್ಟ್ರೀಯ ವಿಮಾನಗಳ ಪೈಕಿ ಸೌದಿ ಅರೇಬಿಯಾದ ಜೆಡ್ಡಾಗೆ ಹೋಗುತ್ತಿದ್ದ 3 ಇಂಡಿಗೋ ವಿಮಾನಗಳನ್ನು ಸೌದಿ ಅರೇಬಿಯಾ ಹಾಗೂ ಕತಾರ್‌ನ ವಿಮಾನ ನಿಲ್ದಾಣಗಳತ್ತ ತಿರುಗಿಸಲಾಗಿದೆ.  ಎಚ್ಚರಿಕೆ ಲಭಿಸುತ್ತಿದ್ದಂತೆ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಹಾಗೂ ತಪಾಸಣೆ ನಡೆಸಲಾಗಿದೆ. ಆದರೆ ತಪಾಸಣೆ ವೇಳೆ ಎಲ್ಲ ಬೆದರಿಕೆಗಳು ಹುಸಿ ಎಂದು ದೃಢಪಟ್ಟಿವೆ. 

ಬೆಂಗಳೂರಿನ ಆಸ್ಪತ್ರೆಗಳಿಗೆ ಹುಸಿಬಾಂಬ್‌ ಬೆದರಿಕೆ ಸಂದೇಶ: ಕೆಲ ಕಾಲ ಆತಂಕ

ಬೆದರಿಕೆ ಸಂದೇಶಗಳ ವರ್ಗೀಕರಣ: 

ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ಸರ್ಕಾರ, ಸುಳ್ಳು ಬೆದರಿಕೆ ಒಡ್ಡುವವರನ್ನು ಹಾರಾಟ ನಿಷೇಧ ಪಟ್ಟಿಗೆ ಸೇರಿಸಲು ಚಿಂತನೆ ನಡೆಸಿದೆ. ಆದರೆ, ತುಂಬಾ ಬೆದರಿಕೆ ಕರೆಗಳು/ಸಂದೇಶಗಳು ಬರುತ್ತಿರುವ ಕಾರಣ ಬೆದರಿಕೆಗಳ ಗಂಭೀರತೆ ಅರಿಯಲು ಸರ್ಕಾರವು 'ನಿರ್ದಿಷ್ಟ' ಹಾಗೂ "ನಿರ್ದಿಷ್ಟವಲ್ಲದ' ಎಂಬ 2 ವರ್ಗೀಕರಣ ಮಾಡಿದೆ. ಬೆದರಿಕೆ ಸಂದೇಶವು ನಿರ್ದಿಷ್ಟ ಸಂಖ್ಯೆಯ ವಿಮಾನವನ್ನು ಹೊಂದಿದ್ದರೆ, ಅಂತಹ ಹಕ್ಕನ್ನು "ನಿರ್ದಿಷ್ಟ' ಎಂದು ವರ್ಗೀಕರಿಸಲಾಗಿದೆ. 

Bengaluru: ಎನ್‌ಪಿಎಸ್‌ ಶಾಲೆಗೆ ಬಾಂಬ್‌ ಬೆದರಿಕೆ ಹಾಕಿದ್ದು ವಿದ್ಯಾರ್ಥಿ: ತಮಾಷೆಗೆ ಇ-ಮೇಲ್‌ ಮಾಡಿದ ಅಪ್ರಾಪ್ತ

ಇನ್ನು ತರ್ಕಬದ್ದವಾಗಿ ಇರದ ಸಂದೇಶಗಳನ್ನು ನಿರ್ದಿಷ್ಟವಲ್ಲದ ಬೆದರಿಕೆ' ಎಂದು ಪರಿಗಣಿಸಲಾಗುತ್ತದೆ. "ನಿರ್ದಿಷ್ಟ' ಎಂದು ವರ್ಗೀಕರಿಸಲಾದ ಬೆದರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ ತಪಾಸಣೆ ಮಾಡಲಾಗುತ್ತದೆ. ಆದರೆ ನಿರ್ದಿಷ್ಟವಲ್ಲದ ಬೆದರಿಕೆಗೆ ಅಷ್ಟು ಪ್ರಾಮುಖ್ಯ ನೀಡುವುದನ್ನು ನಿಲ್ಲಿಸಲಾಗುತ್ತದೆ. ಇದರಿಂದ ವಿಮಾನ ಪ್ರಯಾಣಿಕರಿಗೆ ತೊಂದರೆ ತಪ್ಪಲಿದೆ.
ಕಳೆದ 9 ದಿನಗಳ ಅವಧಿ

ವಿಮಾನ ಸಂಸ್ಥೆಗಳಿಗೆ ₹600 ಕೋಟಿ ನಷ್ಟ 

ಯಲ್ಲಿ ವಿಮಾನಗಳಿಗೆ ಕಿಡಿಗೇಡಿಗಳು ಹುಸಿಬಾಂಬ್ ಕರೆ ಮಾಡಿರುವುದರಿಂದ 170 ವಿಮಾನಗಳ ಹಾರಾಟಕ್ಕೆ ತೊಂದರೆಯಾಗಿದೆ. ಇದರಿಂದ ವಿಮಾನಯಾನ ಕಂಪನಿಗಳಿಗೆ 600 ಕೋಟಿ ರು. ನಷ್ಟವಾಗಿದೆ ಎಂದು ವಿಮಾನ ಕಂಪನಿಯೊಂದರ ಅಧಿಕಾರಿಯೊಬ್ಬರು ತಿಳಿಸಿದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..