ಪುಲ್ವಾಮಾದಲ್ಲಿ ಮೂವರು ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ!

By Suvarna NewsFirst Published Aug 29, 2020, 4:41 PM IST
Highlights

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ| ಘರ್ಷಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ| ದಾಳಿಯಲ್ಲಿ ಓರ್ವ ಯೋಧ ಹುತಾತ್ಮ

ಪುಲ್ವಾಮಾ(ಆ.29): ಜಮ್ಮು ಕಾಶ್ಮೀರದ ಪುಲ್ವಾಮಾದ ಜದುರಾ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಘರ್ಷಣೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಈ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಕೂಡ ಹುತಾತ್ಮರಾಗಿದ್ದಾರೆ.

ವಾಯುದಾಳಿ ತಡೆಗೆ ಏರ್‌ಡಿಫೆನ್ಸ್ ಕಮಾಂಡ್ ಸ್ಥಾಪನೆ..?

ಆ.29 ರಂದು ಈ ಘಟನೆ ವರದಿಯಾಗಿದ್ದು, ಗುಂಡಿನ ಚಕಮಕಿ ರಾತ್ರಿ ಸುಮಾರು ಒಂದ ಗಂಟೆಗೆ ನಡೆದಿದೆ ಎನ್ನಲಾಗಿದೆ. ಜಮ್ಮು-ಕಾಶ್ಮೀರ ಪೊಲೀಸ್, ಭಾರತೀಯ ಸೇನೆ, ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಪುಲ್ವಾಮದ ಜದುರಾದಲ್ಲಿ ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ. 

ಎನ್‌ಕೌಂಟರ್ ನಡೆದ ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತರಾದ ಉಗ್ರರು ಯಾವ ಸಂಘಟನೆಯವರೆಂದು ಇನ್ನಷ್ಟೇ ತಿಳಿಯಬೇಕಿದೆ.

J&K: Three unidentified terrorists killed by Police & security forces in an encounter that started last night in Zadoora area of Pulwama. Search is going on. More details awaited. (Visuals deferred by unspecified time) pic.twitter.com/QBUQfM85Qn

— ANI (@ANI)

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 18 ಗಂಟೆಗಳಲ್ಲಿ 7 ಭಯೋತ್ಪಾದಕರು ಹತರಾಗಿದ್ದಾರೆ. ಶನಿವಾರ ಪುಲ್ವಾಮಾದಲ್ಲಿ 3 ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರೆ, ನಿನ್ನೆ ಶೋಪಿಯಾನ್‌ನಲ್ಲಿ 4 ಭಯೋತ್ಪಾದಕರು ಸಾವನ್ನಪ್ಪಿದ್ದು, ಓರ್ವನನ್ನು ಜೀವಂತವಾಗಿ ಹಿಡಿಯಲಾಯಿತು. 

40 ಯೋಧರ ಬಲಿ ಪಡೆದ ಪುಲ್ವಾಮಾ ದಾಳಿಗೆ ಖರ್ಚಾಗಿದ್ದು ಐದೇ ಲಕ್ಷ..!

ಪೊಲೀಸ್ ಐಜಿ ವಿಜಯ್ ಕುಮಾರ್ ಅವರ ಪ್ರಕಾರ ಶೋಪಿಯಾನ್‌ನ ಕಿಲುರಾ ಗ್ರಾಮದಲ್ಲಿ ನಿನ್ನೆ ಎರಡೂವರೆ ಗಂಟೆಗಳಲ್ಲಿ 4 ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಮತ್ತು 2 ಎಕೆ 47 ಮತ್ತು 4 ಪಿಸ್ತೂಲ್‌ಗಳನ್ನು ಸಹ ಭಯೋತ್ಪಾದಕರಿಂದ ವಶಪಡಿಸಿಕೊಳ್ಳಲಾಗಿದೆ. ಸರ್ಪಂಚ್ ಸುಹೇಲ್ ಭಟ್ ಅವರನ್ನು ಕೊಂದು ಅಪಹರಿಸಿದ ಭಯೋತ್ಪಾದಕನನ್ನು ಸಹ ಕೊಲ್ಲಲಾಗಿದೆ. ಈ ವರ್ಷ ಇಲ್ಲಿಯವರೆಗೆ ಕಣಿವೆಯಲ್ಲಿ 150 ಭಯೋತ್ಪಾದಕರು ಹತರಾಗಿದ್ದಾರೆ.
 

click me!