ವಿಮಾನ ನಿಲ್ದಾಣದ ಕಸದ ಗುಂಡಿಗೆ ಬಿದ್ದು 3 ವರ್ಷದ ಮಗು ಸಾವು!

Published : Feb 07, 2025, 04:35 PM IST
ವಿಮಾನ ನಿಲ್ದಾಣದ ಕಸದ ಗುಂಡಿಗೆ ಬಿದ್ದು 3 ವರ್ಷದ ಮಗು ಸಾವು!

ಸಾರಾಂಶ

ನೆಡುಂಬಾಶ್ಶೇರಿಯಲ್ಲಿ ವಿಮಾನ ನಿಲ್ದಾಣದ ತ್ಯಾಜ್ಯದ ಗುಂಡಿಗೆ ಬಿದ್ದು ಸಾವನ್ನಪ್ಪಿದೆ. ಪೋಷಕರ ಜೊತೆ ವಿಮಾನದಿಂದ ಇಳಿದಿದ್ದ ಮಗು ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಕೊಚ್ಚಿ (ಫೆ.7): ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ತೆರೆದಿಟ್ಟಿದ್ದ ತ್ಯಾಜ್ಯದ ಗುಂಡಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದೆ. ರಾಜಸ್ಥಾನ ಮೂಲದ ರಿಧಾನ್ ಜಾಜು ಮೃತಪಟ್ಟ ಮಗು. ಪೋಷಕರ ಜೊತೆ ವಿಮಾನದಿಂದ ಇಳಿದಿದ್ದ ಕುಟುಂಬ ಮಗುವಿನೊಂದಿಗೆ ವಿಮಾನ ನಿಲ್ದಾಣದ ದೇಶೀಯ ಟರ್ಮಿನಲ್ ಹೊರಗಿನ ಕೆಫೆಗೆ ಹೊಕಿತ್ತು. ಈ ವೇಳೆ ಕೆಫೆಯ ಹೊರಗಡೆ ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಖಾಸಗಿ ಆಸ್ಪತ್ರೆಗೆ ಸಾಗಿಸಲಾದರೂ ಮಗುವಿನ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ದೇಶೀಯ ಆಗಮನ ಟರ್ಮಿನಲ್ ಬಳಿ ಇಂದು ಮಧ್ಯಾಹ್ನ ಈ ದುರ್ಘಟನೆ ನಡೆದಿದೆ.

ಸಾರ್ವಜನಿಕರಿಗೆ ಪ್ರವೇಶವಿಲ್ಲದ ಸ್ಥಳದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಸಿಯಾಲ್ ಪ್ರಕಟಣೆಯಲ್ಲಿ ತಿಳಿಸಿದೆ. ದೇಶೀಯ ಟರ್ಮಿನಲ್‌ನ ಹೊರಗಿರುವ ಅನ್ನ ಸಾರಾ ಕೆಫೆಯ ಹಿಂಭಾಗದಲ್ಲಿ ಸಾರ್ವಜನಿಕರಿಗೆ ಪ್ರವೇಶವಿಲ್ಲದ ಸ್ಥಳದಲ್ಲಿ ಈ ದುರ್ಘಟನೆ ನಡೆದಿದೆ. ವಿಮಾನನಿಲ್ದಾಣದ ಕೆಫೆಗೆ ಮಗುವಿನ ಪೋಷಕರು ಬಂದಿದ್ದಾಗ ಈ ಘಟನೆ ನಡೆದಿದೆ. ಸ್ವಲ್ಪ ಸಮಯದ ನಂತರ ಮಗು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಸಿಯಾಲ್ ಭದ್ರತಾ ವಿಭಾಗದ ಸಹಾಯದಿಂದ ಸಿಸಿಟಿವಿ ಪರಿಶೀಲಿಸಿದಾಗ, ಮಗು ಬೇಲಿ ದಾಟಿ ಗುಂಡಿಗೆ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಮಗುವನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ರಾಜ್ಯವಾಳುವವರಿಗೆ ಕೆಡುಕಾಗಲಿದ್ಯಾ, 4 ದಶಕದಿಂದ ಉರಿಯುತ್ತಿದ್ದ ಚಿಗಳ್ಳಿ ದೀಪ ನಂದಿಹೋಯ್ತು!

'ಇಂದು ನೆಡುಂಬಸ್ಸೆರಿ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಕಸದ ಗುಂಡಿಗೆ ಬಿದ್ದು ಮೂರು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಮೃತನನ್ನು ರಿಧಾನ್ ಎಂದು ಗುರುತಿಸಲಾಗಿದೆ. ವಿಮಾನ ನಿಲ್ದಾಣದ ದೇಶೀಯ ಟರ್ಮಿನಲ್ ಹೊರಗಿನ ಕೆಫೆಯ ಹಿಂದೆ ಈ ಘಟನೆ ನಡೆದಿದೆ. ತನ್ನ ಅಣ್ಣನೊಂದಿಗೆ ಹೊರಗೆ ಆಟವಾಡುತ್ತಿದ್ದ ಮಗು ಕಸ ತುಂಬಿದ ಗುಂಡಿಗೆ ಬಿದ್ದಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

Haveri: ದೇವಸ್ಥಾನದ ಮೇಲೆ ಕಳಸ ಕೂರಿಸುವಾಗ ಕ್ರೇನ್‌ ಬಕೆಟ್‌ ಕಟ್‌ ಆಗಿ ವ್ಯಕ್ತಿಯ ಸಾವು!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..