ಟಿಪ್ಪುವಿನ ಆಯ್ದ ಅಂಶಗಳಷ್ಟೇ ತೆಗೆದುಕೊಂಡು ವೈಭವೀಕರಣ : ಜೈಶಂಕರ್‌

Published : Dec 02, 2024, 10:00 AM IST
ಟಿಪ್ಪುವಿನ ಆಯ್ದ ಅಂಶಗಳಷ್ಟೇ ತೆಗೆದುಕೊಂಡು ವೈಭವೀಕರಣ : ಜೈಶಂಕರ್‌

ಸಾರಾಂಶ

ಟಿಪ್ಪು ಸುಲ್ತಾನ್ ಒಬ್ಬ ಸಂಕೀರ್ಣ ವ್ಯಕ್ತಿ. ಆತನ ಬಗ್ಗೆ ಆಯ್ದ ಅಂಶಗಳನ್ನು ಮಾತ್ರ ವೈಭವೀಕರಿಸಲಾಗಿದ್ದು, ಹಲವು ಅಂಶಗಳನ್ನು ನಿರ್ಲಕ್ಷಿಸಲಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ. 

 ನವದೆಹಲಿ : ಟಿಪ್ಪು ಸುಲ್ತಾನ್ ವಾಸ್ತವವಾಗಿ ಇತಿಹಾಸದಲ್ಲಿ ಬಹಳ ಸಂಕೀರ್ಣ ವ್ಯಕ್ತಿ. ಟಿಪ್ಪು ಬಗ್ಗೆ ಆಯ್ದ ಅಂಶಗಳನ್ನು ಮಾತ್ರ ವೈಭವೀಕರಿಸಿ ಪ್ರಚಾರ ಮಾಡಲಾಗುತ್ತಿದೆ. ಅನೇಕ ಅಂಶಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅಭಿಪ್ರಾಯಪಟ್ಟಿದ್ದಾರೆ.  ಇತಿಹಾಸಕಾರ ವಿಕ್ರಮ್ ಸಂಪತ್ ಅವರ ‘ಟಿಪ್ಪು ಸುಲ್ತಾನ್: ದಿ ಸಾಗಾ ಆಫ್ ದಿ ಮೈಸೂರು ಇಂಟರ್‌ರೆಗ್ನಮ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಂದೆಡೆ ಭಾರತದ ಮೇಲೆ ಬ್ರಿಟಿಷರ ವಸಾಹತುಶಾಹಿ ನಿಯಂತ್ರಣವನ್ನು ವಿರೋಧಿಸಿದ ಪ್ರಮುಖ ವ್ಯಕ್ತಿ ಎಂಬ ಖ್ಯಾತಿ ಟಿಪ್ಪುಗಿದೆ. ಇನ್ನೊಂದು ಕಡೆ ಟಿಪ್ಪು ವಿರುದ್ಧ ಕೆಲವು ಪ್ರತಿಕೂಲ ಭಾವನೆ ಉಂಟು ಮಾಡುವ ಅಂಶಗಳೂ ಇವೆ. ಕೆಲ ಇತಿಹಾಸಕಾರರು ಟಿಪ್ಪುವಿನ ಆಯ್ದ ಅಂಶಗಳನ್ನು ಮಾತ್ರ ವೈಭವೀಕರಿಸಿದ್ದಾರೆ. ಆದರೆ ವಿಕ್ರಮ್‌ ಸಂಪತ್‌ ಅವರ ಪುಸ್ತಕ ಟಿಪ್ಪುವಿನ ಎಲ್ಲ ಆಯಾಮಗಳನ್ನು ತೆರೆದಿಟ್ಟಿದೆ. ಟಿಪ್ಪು ಹೇಗಿದ್ದ ಎಂಬುದನ್ನು ಓದುಗರೇ ನಿರ್ಧರಿಸಲಿದ್ದಾರೆ ಎಂದರು.

ಟಿಪ್ಪು ಹೊಂದಿದ್ದ ಎನ್ನಲಾದ ವಿರೋಧಾಭಾಸಗಳನ್ನು ವಿಶ್ಲೇಷಿಸಿದ ಅವರು, ಬ್ರಿಟಿಷರ ವಿರುದ್ಧ ದನಿ ಎತ್ತಿದ ಪ್ರಮುಖ ವ್ಯಕ್ತಿ ಎಂಬ ಖ್ಯಾತಿ ಟಿಪ್ಪುಗಿದೆ. ಟಿಪ್ಪು ಬ್ರಿಟಿಷರ ವಿರೋಧಿ ವ್ಯಕ್ತಿ ಎಂಬುದು ನಿಸ್ಸಂದೇಹ. ಟಿಪ್ಪುವಿನ ಸೋಲು ಹಾಗೂ ಆತನ ಸಾವು ದಕ್ಷಿಣ ಭಾರತದ ಇತಿಹಾಸದಲ್ಲೇ ಒಂದು ಟರ್ನಿಂಗ್‌ ಪಾಯಿಂಟ್‌. ಆದರೆ ಇದೇ ವೇಳೆ, ಆತ ಫ್ರೆಂಚರ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಹಿಂಜರಿಯಲಿಲ್ಲ. ಇದು ಆತ ವಿದೇಶಿ-ವಿರೋಧಿ ಮನಸ್ಥಿತಿ ಹೊಂದಿದ್ದ ಎಂಬ ತೀರ್ಮಾನಕ್ಕೆ ಬರಲು ಅಡ್ಡಿ ಮಾಡುವ ಅಂಶವಾಗಿದೆ ಎಂದರು.

ಮೈಸೂರು, ಕೊಡಗು, ಮಲಬಾರ್‌ ಪ್ರದೇಶದಲ್ಲಿ ಟಿಪ್ಪು ಸುಲ್ತಾನ್ ಆಳ್ವಿಕೆಯ ಪ್ರತಿಕೂಲ ಪರಿಣಾಮಗಳ ಬಗ್ಗೆ ಇತಿಹಾಸದಲ್ಲಿ ವಿಶ್ಲೇಷಿಸಲಾಗಿದೆ. ಟಿಪ್ಪು ಆಳ್ವಿಕೆಯ ಬಗ್ಗೆ ಮೈಸೂರಿನಲ್ಲೇ ಮಿಶ್ರ ಪ್ರತಿಕ್ರಿಯೆಗಳಿವೆ. ಆದರೆ ಇತಿಹಾಸದಲ್ಲಿ ಆಯ್ದ ಅಂಶಗಳನ್ನು ಮಾತ್ರ ವೈಭವೀಕರಿಸಿ ಉಳಿದ ವಿಷಯಗಳನ್ನು ನಿರ್ಲಕ್ಷಿಸಲಾಗಿದೆ’ ಎಂದು ಅವರು ವಿಷಾದಿಸಿದರು. ಫ್ರೆಂಚ್‌ ಹಾಗೂ ಟರ್ಕಿಯಂತಹ ವಿದೇಶಿ ಪಾಲುದಾರರಿಂದ ಟಿಪ್ಪು ಕಂಡಿದ್ದ ನಿರೀಕ್ಷೆಗಳು, ಅದಕ್ಕಾಗಿ ನೀಡಲು ಉದ್ದೇಶಿಸಿದ್ದ ಕೊಡುಗೆಗಳು ಆತನ ಮನಸ್ಥಿತಿಯನ್ನು ತಿಳಿಸುತ್ತವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ