ತಿರುಪತಿಯಲ್ಲಿ ಇನ್ನು ಕ್ಯೂ ನಿಲ್ಲೋ ಅಗತ್ಯವಿಲ್ಲ: ಒಂದೇ ಗಂಟೆಯಲ್ಲಿ ವೆಂಕಟೇಶನ ದರ್ಶನ- ಹೀಗಿದೆ ನೋಡಿ ವ್ಯವಸ್ಥೆ

Published : Dec 17, 2024, 11:53 AM ISTUpdated : Dec 20, 2024, 07:02 PM IST
ತಿರುಪತಿಯಲ್ಲಿ ಇನ್ನು ಕ್ಯೂ ನಿಲ್ಲೋ ಅಗತ್ಯವಿಲ್ಲ: ಒಂದೇ ಗಂಟೆಯಲ್ಲಿ ವೆಂಕಟೇಶನ ದರ್ಶನ- ಹೀಗಿದೆ ನೋಡಿ ವ್ಯವಸ್ಥೆ

ಸಾರಾಂಶ

ತಿರುಪತಿಯಲ್ಲಿ ಭಕ್ತರ ದಟ್ಟಣೆ ಕಡಿಮೆ ಮಾಡಲು ಮುಖ ಗುರುತಿಸುವಿಕೆ ತಂತ್ರಜ್ಞಾನ ಬಳಸಿ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಆರು ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿರುವ ಈ AI ಆಧರಿತ ವ್ಯವಸ್ಥೆಯಿಂದ ಒಂದು ಗಂಟೆಯೊಳಗೆ ದರ್ಶನ ಸಾಧ್ಯವಾಗಲಿದೆ. ವಿಮಾನ ನಿಲ್ದಾಣದ ಡಿಜಿ ಯಾತ್ರಾ ಮಾದರಿಯಲ್ಲಿ 20 ಕೇಂದ್ರಗಳಲ್ಲಿ ಮುಖ ಸ್ಕ್ಯಾನ್ ಮಾಡಿ ದರ್ಶನಕ್ಕೆ ಸಮಯ ನಿಗದಿಪಡಿಸಲಾಗುವುದು. ಬೆಂಗಳೂರು ಮೂಲದ ಕಂಪನಿಯೊಂದು ಪ್ರಾಯೋಗಿಕ ಯೋಜನೆ ಆರಂಭಿಸಿದೆ.

ವಿಶ್ವದ ಅತ್ಯಂತ ಶ್ರೀಮಂತ ದೇವರಲ್ಲಿ ಒಂದು ಎಂದೆನಿಸಿಕೊಳ್ಳುತ್ತಿರುವ ತಿರುಪತಿಯ ವೆಂಕಟೇಶ್ವರನ ದರ್ಶನಕ್ಕೆ ಪ್ರತಿನಿತ್ಯವೂ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಆನ್​ಲೈನ್​ ಮೂಲಕ ಮೂರು ತಿಂಗಳ ಮೊದಲೇ ಬುಕ್ಕಿಂಗ್​ ವ್ಯವಸ್ಥೆಯಿದ್ದು, ಐದೇ ನಿಮಿಷಗಳಲ್ಲಿ ಎಲ್ಲಾ ದರ್ಶನಗಳೂ ಕ್ಲೋಸ್​ ಆಗುವುದೇ ಇದಕ್ಕೆ ಸಾಕ್ಷಿಯಾಗಿದೆ. ಆನ್​ಲೈನ್​ ಬುಕ್ಕಿಂಗ್​ ಮಾಡುವವರಷ್ಟೇ ಅಲ್ಲದೇ, ಬುಕ್ಕಿಂಗ್​ ಇಲ್ಲದೆಯೂ ಬರುವವರ ಸಂಖ್ಯೆಯೂ ಹೆಚ್ಚಿದೆ. ಇದೇ ಕಾರಣಕ್ಕೆ ಎಷ್ಟೇ ಆಧುನಿಕ ವ್ಯವಸ್ಥೆಯನ್ನು ಅಲ್ಲಿ ಜಾರಿ ಮಾಡಿದರೂ ಕೆಲವೊಮ್ಮೆ ಹಲವು ಗಂಟೆ ಕ್ಯೂನಲ್ಲಿ ನಿಲ್ಲಲೇಬೇಕಾದ ಅನಿವಾರ್ಯತೆ ಇದೆ. ವಿಶೇಷ ಸಂದರ್ಭಗಳಲ್ಲಂತೂ ದಿನಪೂರ್ತಿ ಕ್ಯೂನಲ್ಲಿ ನಿಲ್ಲುವ ಉದಾಹರಣೆಗಳೂ ಸಾಕಷ್ಟಿವೆ. ಈ ಸಮಸ್ಯೆ ನಿವಾರಣೆಗೆ ಈಗ ಹೊಸ ಆಡಳಿತ ಮಂಡಳಿಯು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದೆ. ಇದರಿಂದಾಗಿ ಶೀಘ್ರದಲ್ಲಿಯೇ ಇದು ಜಾರಿಗೊಳ್ಳಲಿದ್ದು, ಒಂದು ಗಂಟೆಯಲ್ಲಿಯೇ ದರ್ಶನ ಪಡೆಯಲು ಸಾಧ್ಯವಾಗಿದೆ.

ಮುಖ ಗುರುತಿಸುವಿಕೆ ಆಧರಿತ ಕೃತಕ ಬುದ್ಧಿಮತ್ತೆ (facial recognition-based Artificial Intelligence (AI)) ಬಳಸಿ ಈ ಹೊಸ ಪದ್ಧತಿ ಅಳವಡಿಸಲಾಗಿದೆ. ಇದರಿಂದ ಭಕ್ತರ ಕಾಯುವ ಸಮಯ ಕಡಿಮೆ ಆಗಲಿದೆ. ಈ ಕುರಿತು, ತಿರುಮಲ ತಿರುಪತಿ ದೇವಸ್ತಾನಮ್​ (ಟಿಟಿಡಿ) ಟ್ರಸ್ಟ್ ಬೋರ್ಡ್​ ತಿಳಿಸಿದೆ. ಇನ್ನು ಆರು ತಿಂಗಳೊಳಗೆ ಎಐ-ಚಾಲಿತ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಒಮ್ಮೆ ಇದನ್ನು ಸ್ಥಾಪಿಸಿದ ನಂತರ ಸಾಮಾನ್ಯ ಭಕ್ತರು 1 ಗಂಟೆಯೊಳಗೆ ಭಗವಾನ್ ವೆಂಕಟೇಶ್ವರ ಸ್ವಾಮಿಯ ದರ್ಶನವನ್ನು ಪೂರ್ಣಗೊಳಿಸಬಹುದು. ಬೆಂಗಳೂರು ಮೂಲದ ಕಂಪೆನಿಯೊಂದು ಈಗಾಗಲೇ ತಿರುಪತಿ ಮತ್ತು ತಿರುಮಲದಲ್ಲಿ ಪ್ರಾಯೋಗಿಕ ಯೋಜನೆಯ ತಯಾರಿಯನ್ನು ಆರಂಭಿಸಿದೆ ಎಂದು ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಹೇಳಿದ್ದಾರೆ. 

ಅಮೆರಿಕಕ್ಕೆ ತೆರಳುವ ಮುನ್ನ ಶಿವಣ್ಣ ಫ್ಯಾಮಿಲಿ ಹೋಟೆಲ್​ನಲ್ಲಿ ಕಾಣಿಸಿಕೊಂಡದ್ದು ಹೀಗೆ... ವಿಡಿಯೋ ವೈರಲ್​

 ವಿಮಾನ ನಿಲ್ದಾಣಗಳಲ್ಲಿ ಬಳಸುವ ಡಿಜಿ ಯಾತ್ರಾ ವ್ಯವಸ್ಥೆಯಿಂದ ಪ್ರೇರಿತವಾದ AI-ಚಾಲಿತ ಮುಖ ಗುರುತಿಸುವಿಕೆ ವ್ಯವಸ್ಥೆಯನ್ನು ಪರಿಚಯಿಸುತ್ತಿದ್ದೇವೆ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಅಲಿಪಿರಿ ಸೇರಿದಂತೆ 20 ಆಯಕಟ್ಟಿನ ಸ್ಥಳಗಳಲ್ಲಿ ಭಕ್ತರ ಮುಖವನ್ನು ಸ್ಕ್ಯಾನ್ ಮಾಡಲಾಗುತ್ತದೆ ಮತ್ತು ದರ್ಶನಕ್ಕೆ ನಿರ್ದಿಷ್ಟ ಸಮಯದ ಸ್ಲಾಟ್ ಅನ್ನು ನಿಗದಿಪಡಿಸಲಾಗುತ್ತದೆ. ಅವರು ನಿಗದಿತ ಸಮಯದ ಒಂದು ಗಂಟೆಯೊಳಗೆ ಸರತಿ ಸಾಲಿನಲ್ಲಿ ಸೇರಬಹುದು ಮತ್ತು ಮುಂದಿನ ಒಂದು ಗಂಟೆಯಲ್ಲಿ ದರ್ಶನ ಪಡೆಯುತ್ತಾರೆ ಎಂದು ತಿಳಿಸಿದರು. 

ಈ ವಿನೂತನ ವ್ಯವಸ್ಥೆಯನ್ನು ಪ್ರಸ್ತುತ ಬೆಂಗಳೂರು ಮೂಲದ ಕಂಪನಿಯು ಡೆಮೋ ಮಾಡುತ್ತಿದೆ, ಉದಾರ ದಾನಿಗಳು ಪ್ರಾಯೋಜಿಸಿತ್ತಿದ್ದಾರೆ. ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ, ನಾವು ಬ್ಲ್ಯಾಕ್​ ಟಿಕೆಟಿಂಗ್​ ಅನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದ್ದೇವೆ. ಭಕ್ತರನ್ನು ವಿಭಾಗಿಸುವ ಪ್ರಸ್ತುತ ವ್ಯವಸ್ಥೆಯು ಹಳತಾಗಿದೆ.  ಎಲ್ಲ ಭಕ್ತರೂ ತಡೆರಹಿತ ಮತ್ತು ಗೌರವಾನ್ವಿತ ಅನುಭವವನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ. ಜನಸಂದಣಿಯನ್ನು ನಿರ್ವಹಿಸಲು ಈ ಹಿಂದೆ ಪರಿಚಯಿಸಲಾದ ಸಮಯ-ಸ್ಲಾಟ್ ಆಧರಿತ ದರ್ಶನ ವ್ಯವಸ್ಥೆಯು ಬ್ಲ್ಯಾಕ್​ ಟಿಕೆಟಿಂಗ್​ನಿಂದಾಗಿ ಹಾಳಾಗಿದೆ. ಇದಲ್ಲದೆ, ದರ್ಶನ ಕಾಯುವ ಸಮಯವು ದೀರ್ಘವಾಗಿದೆ. ಈ ಸುರಕ್ಷಿತ ವ್ಯವಸ್ಥೆಯಿಂದ ಯಾವುದೇ ಭಕ್ತರು, ಅವರ ಮೂಲವನ್ನು ಲೆಕ್ಕಿಸದೆ, ಒಂದು ಗಂಟೆಯೊಳಗೆ ದರ್ಶನವನ್ನು ಹೊಂದಲು ಅನುವು ಮಾಡಿಕೊಡುತ್ತದೆ. ಮುಂದಿನ ಆರು ತಿಂಗಳೊಳಗೆ ಈ ವ್ಯವಸ್ಥೆಯನ್ನು ಜಾರಿಗೆ ತರುವ ಗುರಿ ಹೊಂದಿದ್ದೇವೆ, ಸಾಧ್ಯವಾದರೆ ಇನ್ನೂ ಬೇಗ ಇದನ್ನು ಪರಿಚಯಿಸುವ ಗುರಿಯನ್ನು ಹೊಂದಿದ್ದೇವೆ ಎಂದಿದ್ದಾರೆ. 

ಮದುವೆ ಒಳ್ಳೆಯದ್ದಾ, ಕೆಟ್ಟದ್ದಾ? ಸದ್ಗುರು ಒಳ್ಳೆಯವರಾ, ಕೆಟ್ಟವರಾ? ನಟಿ ಸುಹಾನಿಸಿ ಪ್ರಶ್ನೆಗೆ ಅವರು ಹೇಳಿದ್ದೇನು ಕೇಳಿ...
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..