
ತಿರುಪತಿ(ಸೆ.21): ತಿರುಮಲ ತಿರುಪತಿ ದೇವಸ್ಥಾನಮ್ ಸಮಿತಿ (ಟಿಟಿಡಿ) ವೆಂಕಟೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನದ ಅವಧಿಯನ್ನು ರಾತ್ರಿ 11.30ರವರೆಗೆ ಹೆಚ್ಚಿಸಿದೆ.
ಈವರೆಗೆ 10 ಗಂಟೆಗೆ ದರ್ಶನದ ಅವಧಿ ಮುಕ್ತಾಯವಾಗುತ್ತಿತ್ತು. ಇನ್ನು 11.30ರವರೆಗೆ ದರ್ಶನ ಭಾಗ್ಯ ಭಕ್ತಾದಿಗಳಿಗೆ ಲಭಿಸಲಿದೆ. ನಂತರ ಏಕಾಂತ ಸೇವೆ ನಡೆಯಲಿದ್ದು, ರಾತ್ರಿ 12 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಾಗುತ್ತದೆ ಎಂದು ತಿಳಿಸಲಾಗಿದೆ.
ತಿರುಪತಿ ತಿರುಮಲ ಟ್ರಸ್ಟ್ ಸದಸ್ಯರಾಗಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ
ಭಕ್ತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಟಿಟಿಡಿ ದರ್ಶನದ ಅವಧಿಯನ್ನು ಹೆಚ್ಚಿಸಿದೆ. ತಿರುಪತಿ ದೇವಸ್ಥಾನದಲ್ಲಿ ನೀಡುವ ಉಚಿತ ದರ್ಶನದ ಟೋಕನ್ಗಳ ಪ್ರಮಾಣವನ್ನು ಹೆಚ್ಚಿಸುವುದಾಗಿ ಟಿಟಿಡಿಯ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಹೇಳಿದ್ದಾರೆ.
ತಿಮ್ಮಪ್ಪನಿಗೆ ಕೊಟ್ಟ ಹೂ ಬಳಸಿ ತಯಾರಿಸಿದ ಅಗರಬತ್ತಿ ಬಿಡುಗಡೆ!
ಈಗ ಪ್ರತಿದಿನ ಸರಾಸರಿ 25 ಸಾವಿರ ಭಕ್ತಾದಿಗಳು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ಶನಿವಾರ 29 ಸಾವಿರ ಭಕ್ತರು ಭೇಟಿ ಕೊಟ್ಟಿದ್ದರು. ಹುಂಡಿಯಿಂದ 2.30 ಕೋಟಿ ರು. ಆದಾಯ ಸಂಗ್ರಹವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ