
ಹೈದ್ರಾಬಾದ್(ಮೇ.24): ತಿರುಪತಿ ತಿಮ್ಮಪ್ಪನ ಭಕ್ತರು ನೀಡಿದ್ದ, ತಮಿಳುನಾಡಿನ ವಿವಿಧ ಭಾಗಗಳಲ್ಲಿನ 23 ಆಸ್ತಿಗಳನ್ನು ಹರಾಜು ಆಗಲು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕುರಿತು ಅದು ಹರಾಜು ನೋಟಿಸ್ ಅನ್ನೂ ಪ್ರಕಟಿಸಿದೆ.
ವೆಲ್ಲೂರು, ಕಾಂಚೀಪುರಂ ಮತ್ತು ತಿರುವಳ್ಳೂರು ಜಿಲ್ಲೆಯಲ್ಲಿನ ಮನೆ, ಸೈಟ್ ಮತ್ತು ಕೆಲ ಕೃಷಿ ಭೂಮಿಯನ್ನು ಹರಾಜು ಮಾಡಲು ನಿರ್ಧರಿಸಲಾಗಿದೆ. ಇವುಗಳಿಂದ ಅಂದಾಜು 2 ಕೋಟಿ ರು. ಸಂಗ್ರಹವಾಗುವ ನಿರೀಕ್ಷೆಯನ್ನು ಟಿಟಿಡಿ ಇಟ್ಟುಕೊಂಡಿದೆ.
ಈ ನಡುವೆ ಲಾಕ್ಡೌನ್ನಿಂದಾಗಿ ದೇಗುಲ ಹಣಕಾಸಿನ ಕೊರತೆ ಎದುರಿಸುತ್ತಿದೆ. ಈ ಕಾರಣಕ್ಕಾಗಿ ಆಸ್ತಿ ಹರಾಜು ಮಾಡಲಾಗುತ್ತಿದೆ ಎಂಬ ವರದಿಗಳನ್ನು ಟಿಟಿಡಿ ತಳ್ಳಿಹಾಕಿದೆ. ಇವೆಲ್ಲಾ ನಿರುಪಯುಕ್ತ ಆಸ್ತಿಗಳು. ಇವುಗಳ ನಿರ್ವಹಣೆಗೇ ಹೆಚ್ಚಿನ ಹಣ ವೆಚ್ಚ ಮಾಡಬೇಕಾಗಿ ಬರುತ್ತಿದೆ. ಹೀಗಾಗಿ ಫೆ.29ರಂದು ನಡೆದ ಟಿಟಿಡಿ ಮಂಡಳಿ ಸಭೆಯಲ್ಲಿ ಇವುಗಳ ಮಾರಾಟಕ್ಕೆ ನಿರ್ಧರಿಸಲಾಗಿತ್ತು. ಇದು ಆದಾಯ ಕುಸಿತದಿಂದಾದ ನಷ್ಟಭರ್ತಿಗೆ ರೂಪಿಸಿದ ಯೋಜನೆ ಅಲ್ಲ ಎಂದು ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ