ಭಕ್ತಾದಿಗಳೇ ಎಚ್ಚರ.. ತಿರುಪತಿ ತಿಮ್ಮಪ್ಪನಿಗೂ ನೀರಿಲ್ಲ, ಮಿತವಾಗಿ ಬಳಸುವಂತೆ ಸೂಚನೆ!

Published : Aug 25, 2024, 08:24 AM ISTUpdated : Aug 25, 2024, 08:26 AM IST
ಭಕ್ತಾದಿಗಳೇ ಎಚ್ಚರ.. ತಿರುಪತಿ ತಿಮ್ಮಪ್ಪನಿಗೂ ನೀರಿಲ್ಲ, ಮಿತವಾಗಿ ಬಳಸುವಂತೆ ಸೂಚನೆ!

ಸಾರಾಂಶ

Tirumala stares unusual water crisis ಕಡಿಮೆ ಮುಂಗಾರು ಮಳೆಯಿಂದಾಗಿ ತಿರುಮಲದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಡ್ಯಾಂಗಳಲ್ಲಿ ಕೇವಲ 120-130 ದಿನಗಳಿಗೆ ಸಾಕಾಗುವಷ್ಟು ನೀರು ಮಾತ್ರ ಉಳಿದಿದೆ. ಈ ಹಿನ್ನೆಲೆಯಲ್ಲಿ ಟಿಟಿಡಿ ಭಕ್ತರಲ್ಲಿ ನೀರನ್ನು ಮಿತವಾಗಿ ಬಳಸುವಂತೆ ಮನವಿ ಮಾಡಿದೆ.

ತಿರುಪತಿ (ಆ.25): ಸರಾಸರಿಗಿಂತ ಕಡಿಮೆ ಮುಂಗಾರು ಮಳೆಯಿಂದಾಗಿ ಶ್ರೀಕ್ಷೇತ್ರ ತಿರುಮಲದಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ಡ್ಯಾಂಗಳಲ್ಲಿ 120-130 ದಿನಕ್ಕೆ ಸಾಕಾಗುವಷ್ಟು ಮಾತ್ರ ನೀರಿದೆ. ಹೀಗಾಗಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಆಡಳಿತವನ್ನು ನೋಡಿಕೊಳ್ಳುತ್ತಿರುವ ತಿರುಮಲ ತಿರುಪತಿ ದೇವಸ್ಥಾನ ಸಮಿತಿಯು (ಟಿಟಿಡಿ) ಭಕ್ತರು ನೀರನ್ನು ಮಿತವಾಗಿ ಬಳಸಬೇಕು ಎಂದು ಸೂಚಿಸಿದೆ ಹಾಗೂ ಮುಂದಿನ ದಿನಗಳಲ್ಲಿ ನೀರಿನ ಬಳಕೆಗೆ ಕಠಿಣ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ತಿರುಮಲವು ಪಾಪವಿನಾಶನಂ ಅಣೆಕಟ್ಟು, ಆಕಾಶ ಗಂಗೆ, ಗೋಗರ್ಭಂ, ಕುಮಾರಧಾರ-ಪಸುಪುಧಾರ ಮತ್ತು ಕಲ್ಯಾಣಿ ಅಣೆಕಟ್ಟಿನಿಂದ ನೀರಿನ ಮೇಲೆ ಸಂಪೂರ್ಣ ಅವಲಂಬಿತವಾಗಿದೆ. ವೆಂಕಟೇಶ್ವರ ದೇವಸ್ಥಾನ ದಿನಕ್ಕೆ ಸುಮಾರು 70 ಸಾವಿರದಿಂದ 1 ಲಕ್ಷ ಯಾತ್ರಾರ್ಥಿಗಳನ್ನು ಆಕರ್ಷಿಸುತ್ತದೆ ಮತ್ತು ದಿನಕ್ಕೆ ಸುಮಾರು 43 ಲಕ್ಷ ಗ್ಯಾಲನ್‌ ನೀರು ಅಗತ್ಯವಿದೆ. ಆದರೆ, ಈ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟವು ವೇಗವಾಗಿ ಖಾಲಿಯಾಗುತ್ತಿರುವುದು ತಿರುಪತಿ ಟ್ರಸ್ಟ್‌ಗೆ ಕಳವಳ ಉಂಟುಮಾಡಿದೆ.

ಈ ಮುಂಗಾರಿನಲ್ಲಿ ಆಂಧ್ರಪ್ರದೇಶದ ಅನೇಕ ಕಡೆ ಉತ್ತಮ ಮಳೆ ಆಗಿದ್ದರೂ, ತಿರುಪತಿ ಭಾಗವು ಮಾತ್ರ ಮಳೆ ಕೊರತೆ ಎದುರಿಸುತ್ತಿದೆ. ಟಿಟಿಡಿ ಪ್ರಕಾರ, ತಿರುಮಲ ಸುತ್ತಲಿನ ಎಲ್ಲ 5 ಅಣೆಕಟ್ಟುಗಳ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 14,304 ಲಕ್ಷ ಗ್ಯಾಲನ್‌ಗಳು. ಆದಾಗ್ಯೂ, ಈಗ ಕೇವಲ 5,800 ಲಕ್ಷ ಗ್ಯಾಲನ್‌ ಮಾತ್ರ ಲಭ್ಯವಿದೆ. ಈ ನೀರು ಇನ್ನು 120-130 ದಿನಗಳಿಗೆ ಮಾತ್ರ ಸಾಕಾಗುತ್ತದೆ. ಈಗ ಮಳೆ ಬಾರದೇ ಹೋದರೆ ಡಿಸೆಂಬರ್‌ ನಂತರ ಜಲಕ್ಷಾಮ ಉಂಟಾಗುವ ಭೀತಿ ಇದೆ.

25 ಕೇಜಿ ಚಿನ್ನಾಭರಣ ಧರಿಸಿ ತಿರುಪತಿ ಬಾಲಾಜಿ ದರ್ಶನ ಪಡೆದ ಗೋಲ್ಡ್‌ಮ್ಯಾನ್ ಕುಟುಂಬ

ಆದ್ದರಿಂದ ಇಲ್ಲಿ ನಿತ್ಯ ಆಗಮಿಸಿವ ಭಕ್ತರು ಹಾಗೂ ಮುಂಬರುವ ಕೃಷ್ಣ ಜನ್ಮಾಷ್ಟಮಿ, ದಸರಾ, ದೀಪಾವಳಿ, ಬ್ರಹ್ಮೋತ್ಸವ ಸೇರಿದಂತೆ ಹಲವು ಹಬ್ಬಗಳಲ್ಲಿ ಇಲ್ಲಿ ನೆರೆಯುವ ಲಕ್ಷಾಂತರ ಜನರು ನೀರನ್ನು ಮಿತವಾಗಿ ಬಳಸಬೇಕು. ಇದೇ ಸನ್ನಿವೇಶ ಮುಂದುವರಿದರೆ ಮುಂದಿನ ದಿನಗಳಲ್ಲಿ ಮನೆಗಳು ಮತ್ತು ವಾಣಿಜ್ಯ ಸಂಸ್ಥೆಗಳಿಗೆ ನೀರು ಪೂರೈಕೆ ಕಡಿಮೆ ಮಾಡಬಹುದು ಎಂದು ದೇವಸ್ಥಾನಂ ಅಧಿಕಾರಿಗಳು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ನಿತ್ಯ ಒಂದಿಲ್ಲೊಂದು ಅಚರಣೆ ಇರುತ್ತದೆ. ವರ್ಷಕ್ಕೆ ಒಟ್ಟು 450 ಹಬ್ಬಗಳನ್ನು ದೇಗುಲದಲ್ಲಿ ಆಚರಿಸಲಾಗುತ್ತದೆ.

ತಿರುಪತಿ ದರ್ಶನಕ್ಕೆ ಕಾಯ್ತಿದ್ದೀರಾ, ಆನ್ಲೈನ್ ಟಿಕೆಟ್ ಬುಕ್ಕಿಂಗ್ ಕೋಟಾ ಬಿಡುಗಡೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್