ಟಿಟಿಡಿ ಸರ್ಕಾರಿ ಹಿಡಿತದಿಂದ ಮುಕ್ತ: ತಿರುಪತಿ ಲೋಕ ಕದನಕ್ಕೆ ಬಿಜೆಪಿ ಪ್ರಣಾಳಿಕೆ!

Published : Apr 13, 2021, 09:25 AM IST
ಟಿಟಿಡಿ ಸರ್ಕಾರಿ ಹಿಡಿತದಿಂದ ಮುಕ್ತ: ತಿರುಪತಿ ಲೋಕ ಕದನಕ್ಕೆ ಬಿಜೆಪಿ ಪ್ರಣಾಳಿಕೆ!

ಸಾರಾಂಶ

ಏ.17ರಂದು ನಡೆಯಲಿರುವ ತಿರುಪತಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ- ಜನಸೇನಾ ಮೈತ್ರಿಕೂಟ ಚುನಾವಣೆ ಪ್ರಣಾಳಿಕೆ ಬಿಡುಗಡೆ| ತಿರುಪತಿ ದೇವಾಲಯ ನಿರ್ವಹಿಸುತ್ತಿರುವ ಟಿಟಿಡಿ ಟ್ರಸ್ಟ್‌ ಅನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವುದಾಗಿ ಭರವಸೆ 

ತಿರುಪತಿ(ಏ.13): ಏ.17ರಂದು ನಡೆಯಲಿರುವ ತಿರುಪತಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ- ಜನಸೇನಾ ಮೈತ್ರಿಕೂಟ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ತಿರುಪತಿ ದೇವಾಲಯ ನಿರ್ವಹಿಸುತ್ತಿರುವ ಟಿಟಿಡಿ ಟ್ರಸ್ಟ್‌ ಅನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವುದಾಗಿ ಭರವಸೆ ನೀಡಿದೆ.

ಕರ್ನಾಟಕದ ಮಾಜಿ ಮುಖ್ಯಕಾರ್ಯದರ್ಶಿ ರತ್ನ ಪ್ರಭಾ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಬಿಜೆಪಿ ರಾಜ್ಯ ಅಧ್ಯಕ್ಷ ಸೋಮು ವೀರಾಜು ಹಾಗೂ ಇತರ ಮುಖಂಡರ ಉಪಸ್ಥಿತಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಟಿಟಿಡಿಯ ಆಸ್ತಿಗಳನ್ನು ನಿರ್ವಹಿಸಲು ‘ಧರ್ಮಾಚಾರ್ಯ ಮಂಡಳಿ’ಯನ್ನು ರಚಿಸಲಾಗುವುದು.

ಸರ್ಕಾರದ ಬದಲು ಸಾಧು ಸಂತರನ್ನು ಒಳಗೊಂಡ ಸಂಸ್ಥೆಯೊಂದು ಟಿಟಿಡಿ ಟ್ರಸ್ಟ್‌ ಅನ್ನು ಮೇಲ್ವಿಚಾರಣೆ ಮಾಡಲಿದೆ. ರಾಜ್ಯದ ಇತರ ದೇವಾಲಯಗಳಲ್ಲಿಯೂ ಇದೇ ರೀತಿಯ ವ್ಯವಸ್ಥೆಯನ್ನು ತರಲಾಗುವುದು ಎಂದು ಪ್ರಾಣಾಳಿಕೆಯಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ