
ಅಮರಾವತಿ: ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ.
ಪತ್ರಿಕಾಪ್ರಕಟಣೆ ಮೂಲಕ ಆಂಧ್ರ ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್ ಮಾಹಿತಿ ನೀಡಿದ್ದು, ‘ಫ್ರಾನ್ಸ್ನಿಂದ ತರಿಸಲಾಗುತ್ತಿರುವ ಇ-ಟಂಗ್ ವ್ಯವಸ್ಥೆಯು ತುಪ್ಪದ ರುಚಿ ನೋಡಿ ಗುಣಮಟ್ಟ ಪತ್ತೆ ಮಾಡಲಿದೆ.
ಅಂತೆಯೇ ಇ-ನೋಸ್ನಿಂದ ಘಮವನ್ನು ಆಘ್ರಾಣಿಸಿ ಕಲಬೆರಕೆಯನ್ನು ಪತ್ತೆಹಚ್ಚಲಾಗುವುದು. ಈ ಎಲೆಕ್ಟ್ರಾನಿಕ್ ಉಪಕರಣಗಳಿಂದ, ತುಪ್ಪದ ಗುಣಮಟ್ಟದಲ್ಲಿ ಸಣ್ಣ ಕೊರತೆಯಾದರೂ ತಿಳಿಯುತ್ತದೆ’ ಎಂದಿದ್ದಾರೆ. 25 ಕೋಟಿ ರು. ವೆಚ್ಚದಲ್ಲಿ ಸ್ಥಾಪನೆಯಾಗಲಿರುವ ಈ ಲ್ಯಾಬ್ ಮುಂದಿನ ತಿಂಗಳಿಂದ ಕಾರ್ಯಾಚರಿಸಲಿದ್ದು, ತುಪ್ಪ, ಒಣಹಣ್ಣು ಸೇರಿ ಪ್ರಸಾದಕ್ಕೆ ಬಳಸುವ ವಸ್ತುಗಳ ಪರೀಕ್ಷೆ ನಡೆಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ