ತಿರುಪತಿ ಪ್ರಸಾದಕ್ಕೆ ಕೊಬ್ಬು ಬಳಕೆ: ಪೇಜಾವರ ಶ್ರೀ ತೀವ್ರ ಆಕ್ಷೇಪ

Published : Sep 23, 2024, 05:45 AM ISTUpdated : Sep 23, 2024, 09:37 AM IST
ತಿರುಪತಿ ಪ್ರಸಾದಕ್ಕೆ ಕೊಬ್ಬು ಬಳಕೆ: ಪೇಜಾವರ ಶ್ರೀ ತೀವ್ರ ಆಕ್ಷೇಪ

ಸಾರಾಂಶ

ತಿರುಪತಿ ದೇವಾಲಯದ ಲಡ್ಡು ಪ್ರಸಾದ ತಯಾರಿಕೆಗೆ ಹಸುವಿನ ತುಪ್ಪದ ಬದಲು ಪ್ರಾಣಿಜನ್ಯ ಕೊಬ್ಬು ಬಳಸಿರುವುದು ಹಿಂದೂ ಧರ್ಮಕ್ಕೆ, ದೇವರಿಗೆ ಎಸಗಿರುವ ಅಪಚಾರ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೀವ್ರವಾಗಿ ಆಕ್ಷೇಪಿಸಿದ್ದಾರೆ.

 ಉಡುಪಿ (ಸೆ.23): ತಿರುಪತಿ ದೇವಾಲಯದ ಲಡ್ಡು ಪ್ರಸಾದ ತಯಾರಿಕೆಗೆ ಹಸುವಿನ ತುಪ್ಪದ ಬದಲು ಪ್ರಾಣಿಜನ್ಯ ಕೊಬ್ಬು ಬಳಸಿರುವುದು ಹಿಂದೂ ಧರ್ಮಕ್ಕೆ, ದೇವರಿಗೆ ಎಸಗಿರುವ ಅಪಚಾರ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೀವ್ರವಾಗಿ ಆಕ್ಷೇಪಿಸಿದ್ದಾರೆ.

ಪ್ರಸ್ತುತ ಅಯೋಧ್ಯೆಯಲ್ಲಿರುವ ಶ್ರೀಗಳು, ತಿರುಪತಿಯ ಈ ಬೆಳವಣಿಗೆಯಿಂದ ಖೇದವಾಗಿದೆ. ಪವಿತ್ರ ಪ್ರಸಾದ ತಯಾರಿಕೆಗೆ ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ ಕೊಬ್ಬು ಬಳಸಿದ್ದಾರೆ ಎಂದರೆ ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ, ಇದು ದೇವರಿಗೆ ಬಗೆದಿರುವ ಅಪಚಾರ, ಸ್ವತಃ ಅಲ್ಲಿನ ಸರಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ದೇಗುಲಗಳ ಪ್ರಸಾದಕ್ಕೆ ನಂದಿನಿ ತುಪ್ಪ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

ತಿರುಪತಿಯ ಶ್ರೀನಿವಾಸ ದೇವರು, ಗೋವಿನ ರಕ್ಷಣೆಗೆ ಅವತರಿಸಿದವ. ಅಲ್ಲಿ ಹುತ್ತಕ್ಕೆ ಹಸುವೊಂದು ಹಾಲು ಎರೆಯುತ್ತಿತ್ತಂತೆ, ಮಾಲಕ ಹಸುವನ್ನು ಹೊಡೆಯಲು ಬಂದನಂತೆ, ಆಗ ಹುತ್ತದಿಂದ ಮೇಲೆ ಬಂದ ಶ್ರೀನಿವಾಸ ಮಾಲಕನ ಏಟಿಗೆ ಮೈಯೊಡ್ಡಿ, ಹಸುವನ್ನು ರಕ್ಷಿಸಿದ ಅನ್ನುವುದು ಅಲ್ಲಿನ ಐತಿಹ್ಯ. ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದಾರೆ ಎಂದರೆ ಅದೊಂದು ಘೋರ ಅಪರಾಧವಾಗಿದೆ ಎಂದು ಶ್ರೀಗಳು ಹೇಳಿದ್ದಾರೆ.

ಈ ಘಟನೆ ಹಿಂದುಗಳ ಧಾರ್ಮಿಕ ಶ್ರದ್ಧೆಯ ಮೇಲಿನ ಹಲ್ಲೆ, ಮನೆಗಳಲ್ಲಿ ಕೂಡ ಇಂತಹ ತುಪ್ಪ ಬಳಸುವುದಿಲ್ಲ, ಉಪಯೋಗಕ್ಕೆ ಅನರ್ಹವಾದ ತುಪ್ಪವನ್ನು ದೇವಾಲಯಕ್ಕೆ ಬಳಸಿದ್ದಾರೆ, ಇಂತಹ ತುಪ್ಪ ತಯಾರಿಸುವ ಆಡ್ಡೆಗಳನ್ನು ಕಂಡುಹಿಡಿಯಬೇಕು. ಇನ್ನು ಮುಂದೆ ಇಂತಹ ಘಟನೆ ಮರುಕಳಿಸಬಾರದು ಎಂದವರು ಆಗ್ರಹಿಸಿದ್ದಾರೆ.

ತಿರುಪತಿ ಲಡ್ಡುನಲ್ಲಿ ಪ್ರಾಣಿ ಕೊಬ್ಬಿಗೂ, ಕೆಎಂಫ್‌ನ ನಂದಿನಿ ತುಪ್ಪಕ್ಕೂ ಸಂಬಂಧವೇ ಇಲ್ಲ!

ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಸರ್ಕಾರದ ಹಿಡಿತದಲ್ಲಿ ಇರಬಾರದು, ಶ್ರದ್ಧಾ ಕೇಂದ್ರಗಳು ಹಿಂದೂ ಸಮಾಜದ ಕೈಯಲ್ಲಿರಬೇಕು ಎಂದು ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೇಳಿದೆ. ಆದ್ದರಿಂದ ತಡ ಮಾಡದೇ ದೇವಾಲಯಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಬೇಕು, ಹಿಂದೂಗಳ ಸಂಸ್ಥೆಗೆ ತಿರುಪತಿ ದೇವಾಲಯದ ಆಡಳಿತ ನೀಡಬೇಕು, ಇದು ಸರ್ಕಾರದ ಕರ್ತವ್ಯ ಎಂದು ಶ್ರೀಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್