ತಿರುಪತಿ ದೇವಸ್ಥಾನದ ಮಾಜಿ ಅರ್ಚಕ ಕೊರೋನಾ ವೈರಸ್‌ಗೆ ಬಲಿ!

Suvarna News   | Asianet News
Published : Jul 20, 2020, 08:00 PM ISTUpdated : Jul 20, 2020, 08:01 PM IST
ತಿರುಪತಿ ದೇವಸ್ಥಾನದ ಮಾಜಿ ಅರ್ಚಕ ಕೊರೋನಾ ವೈರಸ್‌ಗೆ ಬಲಿ!

ಸಾರಾಂಶ

ಕೊರೋನಾ ವೈರಸ್ ಯಾರನ್ನೂ ಬಿಡದೆ ಹಿಂಬಾಲಿಸುತ್ತಿದೆ. ರಾಜಕಾರಣಿಗಳು, ಸೆಲೆಬ್ರೆಟಿಗಳು ಇದೀಗ ದೇವಸ್ಥಾನದ ಅರ್ಚಕರಿಗೂ ಕೊರೋನಾ ಸಂಕಷ್ಟ ತರುತ್ತಿದೆ. ಕೊರೋನಾ ವೈರಸ್‌ಗೆ ತಿರುಪತಿ ತಿಮ್ಮಪ್ಪ ದೇವಸ್ಥಾನದ ಮಾಜಿ ಅರ್ಚತೃಕರು ಬಲಿಯಾಗಿದ್ದಾರೆ.

ತಿರುಪತಿ(ಜು.20): ಆಂಧ್ರ ಪ್ರದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದೀಗ ತಿರುಪತಿ ತಿಮ್ಮಪ್ಪ ದೇವಸ್ಥಾನದ ಮಾಜಿ ಅರ್ಚಕ ಶ್ರೀನಿವಾಸ ದೀಕ್ಷಿತುಲು ಕೊರೋನಾ ವೈರಸ್‌ಗೆ ಬಲಿಯಾಗಿದ್ದಾರೆ. 73 ವರ್ಷದ ಅರ್ಚಕರಲ್ಲಿ ಕೊರೋನಾ ರೋಗ ಲಕ್ಷಣ ಕಂಡು ಬಂದಿತ್ತು. ಹೀಗಾಗಿ ಅವರನ್ನು ಶ್ರೀ ವೆಂಕಟೇಶ್ವರ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಜುಲೈ 16 ರಂದು ಅರ್ಚಕ ಶ್ರೀನಿವಾಸ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದ ಶ್ರೀನಿವಾಸ ಜುಲೈ 19ರ ಬೆಳಗ್ಗೆ ನಿಧನರಾಗಿದ್ದಾರೆ. ದಶಕಗಳ ಕಾಲ ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಶ್ರೀನಿವಾಸ ಕಳೆದೊಂದು ವರ್ಷದಿಂದ ವಿಶ್ರಾಂತಿಗೆ ಜಾರಿದ್ದರು. 

ಶ್ರೀನಿವಾಸ ಅವರ ನಿಧನಕ್ಕೆ ತಿರುಪತಿ ದೇವಸ್ಥಾನ ಟ್ರಸ್ಟ್(TTD) ಸಂತಾಪ ಸೂಚಿಸಿದೆ. ತಿರುಪತಿ ದೇವಸ್ಥಾನದಲ್ಲಿ ಇದುವರಗೆ 140  ಮಂದಿಗೆ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು TTD ಮುಖ್ಯಸ್ಥ ಸುಬ್ಬಾ ರೆಡ್ಡಿ ಹೇಳಿದ್ದಾರೆ. ಹೀಗಾಗಿ ತಿರುಪತಿ ತಿಮ್ಮಪ್ಪ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಭಂಧಿಸಬೇಕು ಅನ್ನೋ ಕೂಗು ಕೇಳಿ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್