ಕೊರೋನಾದಿಂದ ಆರ್ಥಿಕ ಸಂಕಷ್ಟ: ತಿರುಪತಿ ದೇಗುಲಕ್ಕೆ ಈಗ ಠೇವಣಿ ಬಡ್ಡಿಯೇ ಆಧಾರ!

Published : Aug 30, 2020, 12:34 PM IST
ಕೊರೋನಾದಿಂದ ಆರ್ಥಿಕ ಸಂಕಷ್ಟ: ತಿರುಪತಿ ದೇಗುಲಕ್ಕೆ ಈಗ ಠೇವಣಿ ಬಡ್ಡಿಯೇ ಆಧಾರ!

ಸಾರಾಂಶ

ತಿರುಪತಿ ದೇಗುಲಕ್ಕೆ ಈಗ ಠೇವಣಿ ಬಡ್ಡಿಯೇ ಆಧಾರ| ಕೊರೋನಾದಿಂದ ಆರ್ಥಿಕ ಸಂಕಷ್ಟ| ತಿಮ್ಮಪ್ಪನಿಗೆ ಸುಧಾ ಮೂರ್ತಿ 1 ಕೋಟಿ ರೂ.

ತಿರುಪತಿ(ಆ.30): ಕೊರೋನಾ ವೈರಸ್‌ ಲಾಕ್‌ಡೌನ್‌ ಕಾರಣ ದೇಗುಲಗಳು ಮುಚ್ಚಿದ್ದರಿಂದ ದೇಶದ ಅತಿ ಶ್ರೀಮಂತ ದೇವಾಲಯ ಎನ್ನಿಸಿಕೊಂಡ ತಿರುಮಲ ವೆಂಕಟೇಶ್ವರ ದೇವಾಲಯಕ್ಕೂ ಆರ್ಥಿಕ ಸಂಕಷ್ಟಎದುರಾಗಿದೆ. ಹೀಗಾಗಿ ತಾನು ವಿವಿಧ ಬ್ಯಾಂಕ್‌ಗಳಲ್ಲಿ ಇರಿಸಿರುವ 12 ಸಾವಿರ ಕೋಟಿ ರು. ದೀರ್ಘಾವಧಿ ಠೇವಣಿಯನ್ನು ಮಾಸಿಕ ಠೇವಣಿಯನ್ನಾಗಿ ಪರಿವರ್ತಿಸಿ, ಬರುವ ಬಡ್ಡಿಯನ್ನು ದೇಗುಲಗಳ ಕೆಲಸಕ್ಕೆ ಬಳಸಿಕೊಳ್ಳಲು ತಿರುಪತಿ ತಿರುಮಲ ದೇವಸ್ಥಾನ ಸಮಿತಿ (ಟಿಟಿಡಿ) ಆಡಳಿತ ಮಂಡಳಿ ನಿರ್ಧರಿಸಿದೆ.

ಈವರೆಗೂ ಟಿಟಿಡಿ, ದೀರ್ಘಾವಧಿ ಠೇವಣಿಗಳನ್ನು ಬ್ಯಾಂಕ್‌ನಲ್ಲಿ ಇರಿಸುತ್ತಿತ್ತು. ಏಕೆಂದರೆ ಬರುವ ಬಡ್ಡಿ ಹಣದ ಮೇಲೆ ಅಷ್ಟೇನೂ ಟಿಟಿಡಿ ಅವಲಂಬಿತವಾಗಿರಲಿಲ್ಲ. ಆದರೆ ಇತ್ತೀಚೆಗೆ ಸುಮಾರು 3 ತಿಂಗಳು ಲಾಕ್‌ಡೌನ್‌ ಕಾರಣ ದೇವಸ್ಥಾನ ಬಂದ್‌ ಇದ್ದ ಕಾರಣ ಆದಾಯ ಸ್ಥಗಿತಗೊಂಡಿತ್ತು. ಹೀಗಾಗಿ ದೇಗುಲಕ್ಕೆ ತನ್ನಲ್ಲಿನ ನೌಕರರಿಗೂ ವೇತನ ಕೊಡಲು ಸಮಸ್ಯೆ ಎದುರಾಗಿತ್ತು.

ಇದೇ ಕಾರಣಕ್ಕೆ ಶುಕ್ರವಾರ ಆಡಳಿತ ಮಂಡಳಿ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ, ‘ಈವರೆಗೆ ದೀರ್ಘಾವಧಿ ಠೇವಣಿ ಇರಿಸಲಾಗುತ್ತಿತ್ತು. ಹೀಗಾಗಿ ತ್ರೈಮಾಸಿಕ, ಅರ್ಧವಾರ್ಷಿಕ ಹಾಗೂ ವಾರ್ಷಿಕ ಆಧಾರದಲ್ಲಿ ಬಡ್ಡಿ ಬರುತ್ತಿತ್ತು. ಆದರೆ ಇನ್ನು ಮುಂದೆ ಮಾಸಿಕ ಠೇವಣಿ ಇರಿಸಲಾಗುತ್ತದೆ. ಇದರಿಂದ ಪ್ರತಿ ತಿಂಗಳೂ ಬಡ್ಡಿ ಸಂದಾಯವಾಗುತ್ತದೆ. ಇದೇ ಹಣವನ್ನು ವೇತನ, ಇತರೆ ಖರ್ಚು ವೆಚ್ಚ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲು ಬಳಸಿಕೊಳ್ಳಲಾಗುವುದು’ ಎಂದರು.

ತಿಮ್ಮಪ್ಪನಿಗೆ ಸುಧಾ ಮೂರ್ತಿ 1 ಕೋಟಿ ರೂ.

ಟಿಟಿಡಿ ಆಡಳಿತ ಮಂಡಳಿ ಸದಸ್ಯೆಯೂ ಆಗಿರುವ ಬೆಂಗಳೂರಿನ ಇಸ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾ ಮೂರ್ತಿ ಅವರು ದೇವಾಲಯಕ್ಕೆ 1 ಕೋಟಿ ರು. ದೇಣಿಗೆ ನೀಡುವ ಘೋಷಣೆ ಮಾಡಿದ್ದಾರೆ. ಈ ಹಣವನ್ನು ದೇಗುಲದ ತ್ಯಾಜ್ಯವನ್ನು ಕಾಂಪೋಸ್ಟ್‌ ಗೊಬ್ಬರವನ್ನಾಗಿ ಪರಿವರ್ತಿಸಲು ಬಳಸುವಂತೆ ಅವರು ಕೋರಿದ್ದಾರೆ ಎಂದು ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್