ದೆಹಲಿ  ದಂಗಲ್; ಆಪ್‌ಗೆ ಸಿಹಿ ಪೊಂಗಲ್, ಏಕಾಂಗಿಯಾದ ಕಾಂಗ್ರೆಸ್

Published : Jan 09, 2025, 07:34 AM IST
ದೆಹಲಿ  ದಂಗಲ್; ಆಪ್‌ಗೆ ಸಿಹಿ ಪೊಂಗಲ್, ಏಕಾಂಗಿಯಾದ ಕಾಂಗ್ರೆಸ್

ಸಾರಾಂಶ

ದೆಹಲಿ ಚುನಾವಣೆಯಲ್ಲಿ ಆಪ್ ಪಕ್ಷಕ್ಕೆ ಇಂಡಿಯಾ ಕೂಟದ ಪಕ್ಷಗಳಾದ ಟಿಎಂಸಿ ಮತ್ತು ಶಿವಸೇನೆ ಬೆಂಬಲ ಘೋಷಿಸಿವೆ. ಕಾಂಗ್ರೆಸ್ ₹25 ಲಕ್ಷ ಉಚಿತ ಆರೋಗ್ಯ ವಿಮೆ ಭರವಸೆ ನೀಡಿದೆ.

ನವದೆಹಲಿ: ಇಂಡಿಯಾ ಕೂಟದ ಭಾಗವಾದ ಆಪ್ ಹಾಗೂ ಕಾಂಗ್ರೆಸ್ ದೆಹಲಿ ಚುನಾವಣೆಯಲ್ಲಿ ಕೂಟದ ಇತರೆ ಪಕ್ಷಗಳು ಒಂದೊಂದಾಗಿ ಆಪ್ ಜತೆ ಕೈ ಜೋಡಿಸತೊಡಗಿವೆ. ಇದೀಗ ನಾಯಕಿ, ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಆಪ್‌ಗೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಅತ್ತ ಉದ್ಧವ್ ಠಾಕ್ರೆ ಅವರ ಶಿವಸೇನೆ ಕೇಜ್ರಿವಾಲ್ ಪರ ಪ್ರಚಾರ ಮಾಡಲು ನಿರ್ಧರಿಸಿದೆ. ವಿಧಾನಸಭೆ ಪ್ರತಿಸ್ಪರ್ಧಿಗಳಾಗಿದ್ದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಆಪ್ ಸಂಚಾಲಕ ಅರವಿಂದ್ ಕೇಜಿವಾಲ್, 'ದೆಹಲಿ ಚುನಾವಣೆಯಲ್ಲಿ ಆಪ್ ಪಕ್ಷವನ್ನು ಬೆಂಬಲಿಸಿದ್ದಕ್ಕೆ ಮಮತಾ ದೀದಿಗೆ ಧನ್ಯವಾದ. ನೀವು ಎಂದೆಂದೂ ನಮಗೆ ಬೆಂಬಲವಾಗಿದ್ದು, ಒಳ್ಳೆಯ ಹಾಗೂ ಕೆಟ್ಟ ಸಮಯದಲ್ಲಿ ಆಶೀರ್ವದಿಸಿದ್ದೀರಿ' ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮುಂಚೆ ಸಮಾಜವಾದಿ ಪಕ್ಷ ಆಪ್‌ಗೆ ಬೆಂಬಲ ಸೂಚಿಸಿತ್ತು. ಇಂಡಿಯಾ ಕೂಟದ ನಾಯಕತ್ವವನ್ನು ಕಾಂಗ್ರೆಸ್ ತೊರೆಯಬೇಕು ಎಂಬ ಮಮತಾ ಕರೆಗೆ ಇತ್ತೀಚೆಗೆ ಆಪ್, ಎಸ್‌ಪಿ ಸೇರಿ ಹಲವು ಪಕ್ಷಗಳು ಬೆಂಬಲ ನೀಡಿದ್ದವು.

ಪ್ಯಾರಿ ದೀದಿ ಸ್ಕೀಂ ಬಳಿಕ ₹ 25 ಲಕ್ಷ ಆರೋಗ್ಯ ವಿಮೆ: ದಿಲ್ಲಿ ಕಾಂಗ್ರೆಸ್‌ ಭರವಸೆ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ಪಕ್ಷ ಗೆದ್ದರೆ ಕರ್ನಾಟಕದ ‘ಗೃಹಲಕ್ಷ್ಮೀ’ ಮಾದರಿಯಲ್ಲಿಯೇ ಪ್ಯಾರಿ ದೀದಿ ಸ್ಕೀಂ ಘೋಷಿಸಿದ್ದ ಕಾಂಗ್ರೆಸ್‌, ಇದೀಗ ₹ 25 ಲಕ್ಷ ಉಚಿತ ಆರೋಗ್ಯ ವಿಮೆಯ ಭರವಸೆ ನೀಡಿದೆ. ಪಕ್ಷದ ಹಿರಿಯ ನಾಯಕ, ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಚುನಾವಣಾ ಪ್ರಚಾರದ ವೇಳೆ ಈ ಘೋಷಣೆ ಮಾಡಿದ್ದಾರೆ. ‘ದೆಹಲಿಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 25 ಲಕ್ಷ ರು.ವರೆಗೆ ಉಚಿತ ಆರೋಗ್ಯ ವಿಮೆ ನೀಡುವ ‘ಜೀವನ ರಕ್ಷಾ ಯೋಜನೆ’ ಜಾರಿಗೆ ತರಲಾಗುತ್ತದೆ’ ಎಂದಿದ್ದಾರೆ. 70 ವಿಧಾನಸಭಾ ಕ್ಷೇತ್ರಗಳಿರುವ ದೆಹಲಿಯಲ್ಲಿ ಫೆ. 5ಕ್ಕೆ ಚುನಾವಣೆ ನಡೆಯಲಿದ್ದು, ಫೆ.8ಕ್ಕೆ ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!