ಪ್ರಸಾರ ಭಾರತಿ ಮಾಜಿ ಅಧ್ಯಕ್ಷರಿಗೆ ಟಿಎಂಸಿ ರಾಜ್ಯಸಭಾ ಟಿಕೆಟ್‌!

Published : Jul 25, 2021, 11:44 AM ISTUpdated : Jul 25, 2021, 12:06 PM IST
ಪ್ರಸಾರ ಭಾರತಿ ಮಾಜಿ ಅಧ್ಯಕ್ಷರಿಗೆ ಟಿಎಂಸಿ ರಾಜ್ಯಸಭಾ ಟಿಕೆಟ್‌!

ಸಾರಾಂಶ

* ಪ್ರಸಾರ ಭಾರತಿಯ ಮಾಜಿ ಸಿಇಒ ಆಗಿದ್ದ ಜವಾಹರ್‌ ಸರ್ಕಾರ್‌  * ಜವಾಹರ್‌ ಸರ್ಕಾರ್‌ ಅವರನ್ನು ಮುಂಬರುವ ರಾಜ್ಯಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ತೃಣಮೂಲ ಕಾಂಗ್ರೆಸ್‌ ಘೋಷಣೆ * ಬಿಜೆಪಿ ಸೇರಿದ ದಿನೇಶ್‌ ತ್ರಿವೇದಿ ಅವರ ರಾಜಿನಾಮೆಯಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನ

ಕೋಲ್ಕತಾ(ಜು.25): ಪ್ರಸಾರ ಭಾರತಿಯ ಮಾಜಿ ಸಿಇಒ ಆಗಿದ್ದ ಜವಾಹರ್‌ ಸರ್ಕಾರ್‌ ಅವರನ್ನು ಮುಂಬರುವ ರಾಜ್ಯಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ತೃಣಮೂಲ ಕಾಂಗ್ರೆಸ್‌ ಘೋಷಣೆ ಮಾಡಿದೆ.

ಬಿಜೆಪಿ ಸೇರಿದ ದಿನೇಶ್‌ ತ್ರಿವೇದಿ ಅವರ ರಾಜಿನಾಮೆಯಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಆಗಸ್ಟ್‌ 9ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

2016ರಲ್ಲಿ ಸರ್ಕಾರ್‌ ಅವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದರು. ಈಗ ಟಿಎಂಸಿಯ ಅಭ್ಯರ್ಥಿಯಾಗಿ ನಾಮಕರಣಗೊಂಡಿರುವುದಕ್ಕೆ ಆಶ್ಚರ್ಯಗೊಂಡಿರುವ ಅವರು, ‘ಈವರೆಗೆ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದೇನೆ. ರಾಜಕಾರಣ ಗೊತ್ತಿಲ್ಲ ಆದರೆ ದೇಶಸೇವೆಗಾಗಿ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.

42 ವರ್ಷಗಳ ಕಾಲ ಅಖಿಲ ಭಾರತ ಸೇವೆಯ ಅಧಿಕಾರಿಯಾಗಿದ್ದ ಸರ್ಕಾರ್‌ ಅವರ ಅನುಭವ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ಟಿಎಂಸಿಯ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!