ಸರ್ಕಾರಿ ಬಂಗಲೆ ಉಳಿಸಿಕೊಳ್ಳಲು ಪ್ರಿಯಾಂಕಾ ಗಾಂಧಿ ರಾಜ್ಯಸಭೆಗೆ?

Published : Feb 19, 2020, 04:43 PM ISTUpdated : Feb 19, 2020, 04:45 PM IST
ಸರ್ಕಾರಿ ಬಂಗಲೆ ಉಳಿಸಿಕೊಳ್ಳಲು ಪ್ರಿಯಾಂಕಾ ಗಾಂಧಿ ರಾಜ್ಯಸಭೆಗೆ?

ಸಾರಾಂಶ

ಬಂಗಲೆಯಿಂದ ಪ್ರಿಯಾಂಕಾ ತೆರವಿಗೆ ಸರ್ಕಾರ ಚಿಂತನೆ| ಸರ್ಕಾರಿ ಬಂಗಲೆ ಉಳಿಸಿಕೊಳ್ಳಲು ಪ್ರಿಯಾಂಕಾ ಗಾಂಧಿ ರಾಜ್ಯಸಭೆಗೆ?

ನವದೆಹಲಿ[ಫೆ.19]: ಸಕ್ರಿಯ ರಾಜಕೀಯ ಪ್ರವೇಶಿಸಿ ಒಂದು ವರ್ಷ ಪೂರೈಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಇದೀಗ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸುವ ಕುರಿತು ಕಾಂಗ್ರೆಸ್ಸಿನಲ್ಲಿ ಇಂಗಿತ ವ್ಯಕ್ತವಾಗುತ್ತಿರುವುದಕ್ಕೆ ಪ್ರಮುಖ ಕಾರಣ ‘ಸರ್ಕಾರಿ ಬಂಗಲೆ’ ಎಂಬ ಕುತೂಹಲಕಾರಿ ಸುದ್ದಿಯೊಂದು ದೆಹಲಿಯಲ್ಲಿ ಹಬ್ಬಿದೆ.

ಖಾಸಗಿ ವ್ಯಕ್ತಿಯಾಗಿದ್ದರೂ, ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ಭದ್ರತೆ ಹೊಂದಿದ್ದ ಕಾರಣಕ್ಕೆ 1997ರಿಂದಲೂ ದೆಹಲಿಯ ಲೋಧಿ ಎಸ್ಟೇಟ್‌ನ ಸರ್ಕಾರಿ ಬಂಗಲೆಯಲ್ಲಿ ಪ್ರಿಯಾಂಕಾ ಅವರು ನೆಲೆಸಿದ್ದಾರೆ. ಬಿಗಿಭದ್ರತೆ ಹೊಂದಿದ ವ್ಯಕ್ತಿಗಳು ಸರ್ಕಾರಿ ಬಂಗಲೆಯಲ್ಲಿ ನೆಲೆಸಬೇಕು ಎಂಬ ನಿಯಮದ ಹಿನ್ನೆಲೆಯಲ್ಲಿ ಅವರು ಈ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಅದಕ್ಕಾಗಿ ಅವರು ಬಾಡಿಗೆಯನ್ನೂ ಪಾವತಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊರತುಪಡಿಸಿ ಉಳಿದವರ ಎಸ್‌ಪಿಜಿ ಭದ್ರತೆ ಹಿಂಪಡೆದಿದೆ.

ಪ್ರಿಯಾಂಕಾ ವಾದ್ರಾ ರಾಜ್ಯಸಭೆ ಪ್ರವೇಶ?

ಇದರ ಬೆನ್ನಲ್ಲೇ ಪ್ರಿಯಾಂಕಾ ಅವರನ್ನು ಸರ್ಕಾರಿ ಬಂಗಲೆಯಿಂದ ತೆರವುಗೊಳಿಸಲು ಮುಂದಾಗಿದೆ ಎಂಬ ಸುದ್ದಿ ಕಾಂಗ್ರೆಸ್ಸಿಗೆ ತಲುಪಿದೆ. ಆದ ಕಾರಣ ಏಪ್ರಿಲ್‌ನಲ್ಲಿ ಅವರನ್ನು ರಾಜ್ಯಸಭೆಗೆ ಆರಿಸಿ ಕಳುಹಿಸುವ ಮೂಲಕ ಬಂಗಲೆ ಉಳಿಸಿಕೊಳ್ಳುವ ಆಲೋಚನೆ ಹೊಂದಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕ ರಾಹುಲ್‌ ಗಾಂಧಿ ಅವರು ಸಂಸದರಾಗಿರುವ ಕಾರಣ ದೆಹಲಿಯಲ್ಲಿ ಸರ್ಕಾರಿ ಬಂಗಲೆ ಪಡೆದಿದ್ದಾರೆ.

ಇನ್ನೊಂದು ವಾದದ ಪ್ರಕಾರ, ಪ್ರಿಯಾಂಕಾ ಅವರ ಅಜ್ಜಿ ಇಂದಿರಾ ಗಾಂಧಿ ಅವರು ರಾಜಕಾರಣ ಪ್ರವೇಶಿಸಿದ ಬಳಿಕ ರಾಜ್ಯಸಭೆ ಸದಸ್ಯೆಯಾಗಿದ್ದರು. ಆನಂತರ ಪ್ರಧಾನಿಯೂ ಆಗಿದ್ದರು. ಅಜ್ಜಿಯನ್ನೇ ಹೋಲುವ ಪ್ರಿಯಾಂಕಾ ಅದೇ ಹೆಜ್ಜೆ ಇಡುತ್ತಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ