
ಕೋಲ್ಕತ್ತ(ಜ.25): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ನಟಿ ಕೌಶಾನಿ ಮುಖರ್ಜಿ ಮತ್ತು ಪ್ರಿಯಾ ದಾಸ್ ಭಾನುವಾರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೌಶಾನಿ ಮುಖರ್ಜಿ, ‘ಮಮತಾ ದೀದಿಗೆ ನೇತಾಜಿ ಸುಭಾಷ್ಚಂದ್ರ ಬೋಸ್ ಜನ್ಮಜಯಂತಿ ಕಾರ್ಯಕ್ರಮದಲ್ಲಿ ಆದ ಅವಮಾನವನ್ನು ನಾನು ಖಂಡಿಸುತ್ತೇನೆ’ ಎಂದರು.
ನೇತಾಜಿ ಜನ್ಮದಿನದ ಅಂಗವಾಗಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮತ್ತು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗಿಯಾಗಿದ್ದರು. ಈ ವೇಳೆ ಮಮತಾ ಬ್ಯಾನರ್ಜಿ ಭಾಷಣ ಆರಂಭಿಸುತ್ತಿದ್ದಂತೆಯೇ ಕೆಲವರು ‘ಜೈ ಶ್ರೀ ರಾಮ್’, ‘ಮೋದಿ, ಮೋದಿ’ ಘೋಷಣೆ ಕೂಗಿದ್ದರು. ಘಟನೆಯಿಂದ ಕೋಪಗೊಂಡ ದೀದಿ ಭಾಷಣ ಮಾಡಲ್ಲ ಎಂದು ನಿರಾಕರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ