
ದೇಶದಲ್ಲಿ ವೈರಸ್ ಇಳಿಕೆ, ರಾಜ್ಯದಲ್ಲಿನ್ನೂ ಗಂಭೀರ!
ಕೊರೋನಾ ಹೆಮ್ಮಾರಿಯಿಂದ ಎಂದು ಮುಕ್ತಿ ದೊರಕಬಹುದು ಎಂಬ ನಿರೀಕ್ಷೆಯಲ್ಲಿರುವ ದೇಶವಾಸಿಗಳಿಗೆ ಕೊನೆಗೂ ಆಶಾದಾಯಕ ಬೆಳವಣಿಗೆಗಳು ಗೋಚರವಾಗತೊಡಗಿವೆ. ಮಂಗಳವಾರ ಬೆಳಗ್ಗೆ 8ರವರೆಗಿನ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 55,342 ಕೊರೋನಾ ಸೋಂಕಿತರು ಪತ್ತೆಯಾಗಿದ್ದರೆ, 706 ಮಂದಿ ಬಲಿಯಾಗಿದ್ದಾರೆ. ಇದು ಕಳೆದ 2 ತಿಂಗಳಲ್ಲೇ ದೈನಂದಿನ ಕೇಸುಗಳಲ್ಲಿ ಅತ್ಯಂತ ಕನಿಷ್ಠ ಪ್ರಮಾಣವಾಗಿದೆ.
ಖಾತೆ ಬದಲಾವಣೆ ಮಾಡಿದ ಯಡಿಯೂರಪ್ಪನವರನ್ನ ಇಕ್ಕಟ್ಟಿಗೆ ಸಿಲುಕಿಸಿದ ರಾಮುಲು
ಸಚಿವ ಶ್ರೀರಾಮುಲು ಅವರಿಗೆ ಆರೋಗ್ಯ ಖಾತೆ ಕಿತ್ತುಕೊಂಡು ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಶ್ರೀರಾಮುಲು ಅವರನ್ನು ಸಿಎಂ ಬಿಎಸ್ ಯಡಿಯೂರಪ್ಪ ಮಾತುಕತೆ ಮೂಲಕ ಬಗೆಹರಿಸಿದ್ದಾರೆ.
'ಡಿಕೆಶಿ ಅಸಮರ್ಥರು ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ 2 ವರ್ಷ ಮಂತ್ರಿ ಮಾಡಿರಲಿಲ್ಲ'
ಸಚಿವರ ಖಾತೆಗಳನ್ನು ಅದಲು ಬದಲು ಮಾಡುವ ಅಧಿಕಾರ ಮುಖ್ಯಮಂತ್ರಿಗಳಿದೆ. ಅವರು ಅದನ್ನು ಮಾಡಿದ್ದಾರೆ. ಪಕ್ಷದ ವರಿಷ್ಠರ ಜೊತೆಗೆ ಮಾತುಕತೆ ಮಾಡಿಕೊಂಡು ಈ ತೀರ್ಮಾನ ಮಾಡಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದರು.
ರೇಪಿಸ್ಟ್ಗಳಿಗೆ ಉಳಿಗಾಲವಿಲ್ಲ, ಮರಣ ದಂಡನೆಯೊಂದೇ ಶಿಕ್ಷೆ: ಸುಗ್ರೀವಾಜ್ಞೆ ಜಾರಿ!
ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ದಿನೇ ದಿನೇ ವೃದ್ಧಿಸುತ್ತಿರುವ ಸಂದರ್ಭದಲ್ಲೇ ಭಾರತದ ನೆರೆ ರಾಷ್ಟ್ರ ಬಾಂಗ್ಲಾದೇಶ ರೇಪಿಸ್ಟ್ಗಳನ್ನು ಹೆಡೆಮುರಿ ಕಟ್ಟಲು ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ. ಸೋಮವಾರ ಸರ್ಕಾರದ ವಿರುದ್ಧ ಬೀದಿಗಿಳಿದು ಹಾಗೂ ಸೋಶಿಯಲ್ ಮಿಡಿಯಾ ಮೂಲಕ ಇಂತಹ ಪ್ರಕರಣಗಳ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ ವಿಧಿಸಲಾಗುತ್ತಿದ್ದ ಶಿಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಹಿಂದೆ ವಿಧಿಸಲಾಗುತ್ತಿದ್ದ ಜೀವಾವಧಿ ಶಿಕ್ಷೆಯಿಂದ ಮರಣ ದಂಡನೆಯಾಗಿ ಬದಲಾಯಿಸಿದೆ.
ಮುನಿಸು ಸರಿ ಮಾಡಲು ಪತ್ನಿ ಜೊತೆಗೆ ದಿಢೀರ್ ತೆರಳಿದ್ರು ಎಚ್ಡಿಕೆ
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕ್ಷೇತ್ರಗಳಿಂದ ದೂರ ಉಳಿದಿದ್ದ ಜೆಡಿಎಸ್ ವರಿಷ್ಠರಾದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಜಿಲ್ಲೆಯಲ್ಲಿ ಸಾಲು ಸಾಲು ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.
ಹೊಸ ತಿರುವು ಪಡೆದುಕೊಂಡ 19ರ ಯುವತಿ ಕೊಲೆ ಕೇಸ್ : ರವಿ ಚನ್ನಣ್ಣನವರ್ ಎಂಟ್ರಿ
ಬೆಟ್ಟಹಳ್ಳಿ ಗ್ರಾಮದ ಯುವತಿ ಹೇಮಲತಾ ಕೊಲೆಯ ಪ್ರಕರಣದ ತನಿಖೆ ಜವಾಬ್ದಾರಿಯನ್ನು ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕ ರವಿ ಡಿ. ಚನ್ನಣ್ಣನವರ್ ಅವರಿಗೆ ವಹಿಸಿದೆ.
ಕೊರೋನಾ ಕರಾಮತ್ತು: ಉಚಿತ ಬೀಯರ್ ಆಫರ್ , ಬಾರ್ ಖಾಲಿ ಖಾಲಿ
ಕೊರೋನಾ ಸಮಯದಲ್ಲಿ ತಂಪಾದ ಪಾನೀಯ, ತಣ್ಣಗಿನ ಆಹಾರ ಸೇವನೆ ಸಲ್ಲದು ಎನ್ನುವ ವೈದ್ಯಕೀಯ ಲೋಕದ ಸೂಚನೆ ಇದೀಗ ‘ಚಿಲ್ಡ್ ಬಿಯರ್’ ಸೇಲ್ಗೆ ಭಾರಿ ಹೊಡೆತ ನೀಡಿದೆ. ಬಹುತೇಕ ಸೆಕೆಯ ವಾತಾವರಣವೇ ಇರುವ ದ.ಕ. ಜಿಲ್ಲೆಯೊಂದರಲ್ಲೇ ಕಳೆದ ವರ್ಷಕ್ಕೆ ಹೋಲಿಸಿದರೆ ಬಿಯರ್ ಮಾರಾಟ ಈ ಬಾರಿ ಶೇ.46ರಷ್ಟುಭಾರೀ ಕುಸಿತ ಕಂಡಿದೆ. ಬಿಯರ್ ಕಂಪನಿಗಳು ‘ಉಚಿತ’ ಆಫರ್ಗಳನ್ನು ನೀಡುತ್ತಿದ್ದರೂ ಬಿಯರ್ ಪ್ರಿಯರ ಮನ ಕರಗಿಲ್ಲ. ಇನ್ನು ಭಾರತೀಯ ಮದ್ಯ (ಐಎಂಎಲ್) ಸೇಲ್ ಕೂಡ ಜಿಲ್ಲೆಯಲ್ಲಿ ಶೇ.27ರಷ್ಟುಇಳಿದಿದೆ.
ಅಡಕೆ ಶಾಂಪೂ ಸಂಶೋಧನೆ : ಬೆಳೆಗಾರರಿಗೆ ಸಿಗುತ್ತಾ ಬಂಪರ್
ಅಡಕೆ ಟೀ ತಯಾರಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಮಂಡಗದ್ದೆಯ ಯುವ ಉದ್ಯಮಿ ನೆಂಪೆ ನಿವೇದನ್, ಇದೀಗ ರಾಜ್ಯದಲ್ಲೂ ಗುಟ್ಕಾ ನಿಷೇಧದ ಭೀತಿ ಎದುರಾಗಿರುವ ಸಂದರ್ಭದಲ್ಲಿ ಅಡಕೆ ಶಾಂಪೂ ಸಂಶೋಧಿಸುವ ಮೂಲಕ ಬೆಳೆಗಾರರಲ್ಲಿ ಹೊಸ ಬೆಳಕು ಮೂಡಿಸಿದ್ದಾರೆ.
ಐಪಿಎಲ್ 2020: ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ಗೆ ಶಾಕ್ ನೀಡುತ್ತಾ ರಾಜಸ್ಥಾನ ರಾಯಲ್ಸ್?
13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 30ನೇ ಪಂದ್ಯದಲ್ಲಿಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.
ಸತತ ಎರಡನೇ ದಿನವೂ ಮುಗ್ಗರಿಸಿದ ಚಿನ್ನ, ಬೆಳ್ಳಿ ದರ: ಇಲ್ಲಿದೆ ಅ. 14ರ ಗೋಲ್ಡ್ ರೇಟ್!
ಅತ್ತ ಕೊರೋನಾ ಜನರನ್ನು ಕಂಗಾಲುಗೊಳಿಸಿದ್ದರೆ, ಮದುವೆ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡವರನ್ನು ಚಿನ್ನದ ದರ ಆತಂಕಕ್ಕೀಡು ಮಾಡಿದೆ. ಕೊರೋನಾ ನಡುವೆ ಏರಿದ್ದ ಚಿನ್ನದ ದರ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಸದ್ಯ ಕಳೆದೆರಡು ದಿನಗಳಿಂದ ಚಿನ್ನದ ದರ ಇಳಿಕೆಯ ಹಾದಿ ಹಿಡಿದಿದೆ. ಇಲ್ಲಿದೆ ಇಂದಿನ ಗೋಲ್ಡ್ ರೇಟ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ