
ಚೆನ್ನೈ(ಜೂ.15): ಕೊರೋನಾ ವೈರಸ್ ಪ್ರಕರಣಗಳು ಗಣನೀಯವಾಗಿ ಹೇರುತ್ತಿರುವ ಹಿನ್ನೆಲೆ ತಮಿಳುನಾಡು ಸಿಎಂ ಪಳನಿಸ್ವಾಮಿ ರಾಜಧಾನಿ ಚೆನ್ನೈ ಸೇರಿ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಿಸಿದ್ದಾರೆ.
"
ಹೌದು ಕೊರೋನಾ ಹಾವಳಿ ಮಿತಿ ಮೀರುತ್ತಿದ್ದು ಸದ್ಯ ಅದನ್ನು ನಿಯಂತ್ರಿಸಲು ಸರ್ಕಾರ ಭಾರೀ ಯತ್ನ ನಡೆಸುತ್ತಿದೆ. ಈ ಹಿನ್ನೆಲೆ ಜೂನ್ 19 ರಿಂದ 30 ರ ತನವರೆಗೆ ತಮಿಳುನಾಡಿನ ಚೆನ್ನೈ, ಕಂಚೀಪುರಂ, ಚಂಗಲ್ ಪಟ್ಟು, ತಿರುವಳ್ಳೂರು ಜಿಲ್ಲೆಗಳಲ್ಲಿ ಸಿರೆಂ ಲಾಕ್ಡೌನ್ ಘೋಷಿಸಿದ್ದಾರೆ. ಗರಿಷ್ಠ ಷರತ್ತುಗಳು ವಿಧಿಸಿ ಈ ಲಾಕ್ಡೌನ್ ಘೋಷಿಸಲಾಗಿದೆ.
ಅನ್ಲಾಕ್ ಆಗಿ ವಾರ ಕಳೆದರೂ, ಜನರ ಲಾಕ್ಡೌನ್ ಇನ್ನೂ ಮುಗಿದಿಲ್ಲ.!
ಸೋಮವಾರ ಬೆಳಗ್ಗೆ ಸಿಎಂ, ಆರೋಗ್ಯ ತಜ್ಞರ ಸಮಿತಿ ಜೊತೆ ಚರ್ಚೆ ನಡೆಸಿದ್ದರು. ಈ ವೇಳೆ ಕೊರೋನಾ ನಿಯಂತ್ರಿಸಲು ಚೆನ್ನೈ ಸೇರಿದಂತೆ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಪ್ರದೇಶಗಳಲ್ಲಿ ಸಡಿಲಿಕೆ ಕೊಡದೆ ಮತ್ತೆ ಲಾಕ್ಡೌನ್ ಘೋಷಿಸಬೇಕೆಂಬ ಸಲಹೆ ನೀಡಲಾಗಿದೆ ಎಂದು AIADMK ತಿಳಿಸಿದೆ.
ತಮಿಳುನಾಡಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ
ಇನ್ನು ಭಾನುವಾರ ತಮಿಳುನಾಡಿನಲ್ಲಿ ಒಟ್ಟು 1,974 ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 44,661 ಏರಿಕೆಯಾಗಿದೆ. ಇನ್ನು 435 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ ಒಟ್ಟು 24,547 ಮಂದಿ ಗುಣಮುಖರಾಗಿದ್ದು, ಸದ್ಯ 19,676 ಸಕ್ರಿಯ ಪ್ರಕರಣಗಳಿವೆ.
#NewsIn100Seconds ಈ ಕ್ಷಣದ ಪ್ರಮುಖ ಹೆಡ್ಲೈನ್ಸ್
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ